AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರಾಂತ್ಯ ಮಳೆಯಲಿ.. ಬುಲ್ ಬುಲ್ ದೇ ಹವಾ!

ಬೆಂಗಳೂರು:ರಾಜ್ಯದಲ್ಲಿ ಕೆಲ ದಿನಗಳಿಂದ ಮಳೆಯ ಅಬ್ಬರ ಜೋರಾಗಿದೆ. ಈಗ ಮತ್ತೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ. ಹಾಗಂತ ಹವಾಮಾನ ಇಲಾಖೆ ಗುನುಗುತ್ತಿದೆ. ಅದಕ್ಕೆ ತಕ್ಕಂತೆ ನಿನ್ನೆ ರಾತ್ರಿಯಿಂದಲೇ ಮಳೆರಾಯ ಮತ್ತೆ ತನ್ನ ಪ್ರತಾಪ ತೋರುತ್ತಿದ್ದಾನೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಬಹುತೇಕ ಮನೆಗಳು, ರಸ್ತೆಗಳು ಕೆರೆಯಂತಾಗಿವೆ. ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಕ್ಯಾರ್,  ಮಹಾ ಚಂಡಮಾರುತಗಳ ಅಬ್ಬರದಿಂದ ಬಹಳಷ್ಟು ಹಾನಿಯಾಗಿದೆ. ಈ ಬೆನ್ನಲ್ಲೇ ಈಗ ‘ಬುಲ್ ಬುಲ್’ ಸೈಕ್ಲೋನ್ ಭೀತಿ ಹೆಚ್ಚಾಗಿದೆ. ಇದರಿಂದ ಕರ್ನಾಟಕದಲ್ಲಿ ಮಳೆಯ […]

ಈ ವಾರಾಂತ್ಯ ಮಳೆಯಲಿ.. ಬುಲ್ ಬುಲ್ ದೇ ಹವಾ!
ಸಾಧು ಶ್ರೀನಾಥ್​
|

Updated on:Nov 08, 2019 | 11:36 AM

Share

ಬೆಂಗಳೂರು:ರಾಜ್ಯದಲ್ಲಿ ಕೆಲ ದಿನಗಳಿಂದ ಮಳೆಯ ಅಬ್ಬರ ಜೋರಾಗಿದೆ. ಈಗ ಮತ್ತೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ. ಹಾಗಂತ ಹವಾಮಾನ ಇಲಾಖೆ ಗುನುಗುತ್ತಿದೆ. ಅದಕ್ಕೆ ತಕ್ಕಂತೆ ನಿನ್ನೆ ರಾತ್ರಿಯಿಂದಲೇ ಮಳೆರಾಯ ಮತ್ತೆ ತನ್ನ ಪ್ರತಾಪ ತೋರುತ್ತಿದ್ದಾನೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಿಂದಾಗಿ ಬಹುತೇಕ ಮನೆಗಳು, ರಸ್ತೆಗಳು ಕೆರೆಯಂತಾಗಿವೆ. ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈಗಾಗಲೇ ಕ್ಯಾರ್,  ಮಹಾ ಚಂಡಮಾರುತಗಳ ಅಬ್ಬರದಿಂದ ಬಹಳಷ್ಟು ಹಾನಿಯಾಗಿದೆ. ಈ ಬೆನ್ನಲ್ಲೇ ಈಗ ‘ಬುಲ್ ಬುಲ್’ ಸೈಕ್ಲೋನ್ ಭೀತಿ ಹೆಚ್ಚಾಗಿದೆ. ಇದರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚುವ ಸಾಧ್ಯತೆ ಇದೆ. ಭಾರತದ ಪೂರ್ವ ಕರಾವಳಿಗೆ ಬುಲ್ ಬುಲ್ ಸೈಕ್ಲೋನ್ ಭೀತಿ ಎದುರಾಗಿದೆ. ಒಡಿಶಾ ರಾಜ್ಯದ ಕನಿಷ್ಠ 14 ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಂಭವಿಸಿದ್ದು, ಇದರಿಂದಾಗಿ ಚಂಡಮಾರುತ ಎದ್ದಿದೆ. ಇದರಿಂದಾಗಿ ರಾಜ್ಯದಲ್ಲಿಯೂ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಒಡಿಶಾ, ಪಶ್ಚಿಮ ಬಂಗಾಳ ಸೇರಿದಂತೆ ಎರಡೂ ರಾಜ್ಯಗಳಲ್ಲಿ 35 ಜನರ ಎನ್​ಡಿಆರ್​​ಎಫ್ ತಂಡ ನಿಯೋಜನೆ ಮಾಡಲಾಗಿದೆ. ಮುಂದಿನ 48 ಗಂಟೆಗಳಲ್ಲಿ ಬುಲ್​​ ಬುಲ್ ಅಪ್ಪಳಿಸೋ ಭೀತಿ ಇದ್ದು, ಎಚ್ಚರಿಕೆ ರವಾನೆಯಾಗಿದೆ. ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಭಾರಿ ಮಳೆಯಾಗೋ ಸಾಧ್ಯತೆ ಇದೆ. ಎರಡೂ ರಾಜ್ಯಗಳಲ್ಲಿ ಹವಾಮಾನ ಇಲಾಖೆ ಹೈಅಲರ್ಟ್ ಘೋಷಿಸಿದೆ.

Published On - 10:33 am, Fri, 8 November 19

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ