AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮೈಸೂರು ಚೆನ್ನೈ ಮಧ್ಯೆ ಸಂಚರಿಸಲಿದೆ ಬುಲೆಟ್ ರೈಲು; ಭೂ ಸಮೀಕ್ಷೆ ಆರಂಭ

Chennai-Bengaluru-Mysuru bullet train; ಕೆಲವು ವರ್ಷಗಳ ಹಿಂದೆ ನ್ಯಾಷನಲ್ ಹೈಸ್ಪೀಡ್ ರೈಲ್ ಕಾರ್ಪೊರೇಷನ್ ಲಿಮಿಟೆಡ್ (NHSRCL) ವಿವಿಧ ಹೈಸ್ಪೀಡ್ ರೈಲು ಕಾರಿಡಾರ್‌ಗಳಿಗಾಗಿ ಅಧ್ಯಯನವನ್ನು ಪ್ರಾರಂಭಿಸಿದ ನಂತರ ಮೈಸೂರು - ಬೆಂಗಳೂರು - ಚೆನ್ನೈ ನಡುವಿನ ಹೈಸ್ಪೀಡ್ ರೈಲು ಕಾರಿಡಾರ್ ಮೊದಲ ಅನುಮೋದನೆಯನ್ನು ಪಡೆದಿತ್ತು.

ಬೆಂಗಳೂರು ಮೈಸೂರು ಚೆನ್ನೈ ಮಧ್ಯೆ ಸಂಚರಿಸಲಿದೆ ಬುಲೆಟ್ ರೈಲು; ಭೂ ಸಮೀಕ್ಷೆ ಆರಂಭ
ಬುಲೆಟ್ ರೈಲು (ಸಾಂದರ್ಭಿಕ ಚಿತ್ರ)
ಗಣಪತಿ ಶರ್ಮಾ
|

Updated on:Aug 07, 2023 | 9:10 PM

Share

ಬೆಂಗಳೂರು: ಹೈದರಾಬಾದ್ ಮೂಲದ ಕಂಪನಿಯೊಂದು ಬೆಂಗಳೂರು ಚೆನ್ನೈ ಬುಲೆಟ್ ರೈಲು ಯೋಜನೆಗಾಗಿ (Chennai-Bengaluru-Mysuru bullet train project) ಇತ್ತೀಚೆಗೆ ಭೂ ಸಮೀಕ್ಷೆ (Land Survey) ಆರಂಭಿಸಿದೆ. ಕಂಪನಿಯು ಕೋಲಾರ ಮತ್ತು ಚೆನ್ನೈ ನಡುವಿನ ಭೂ ಸಮೀಕ್ಷೆಯನ್ನು ಪೂರ್ಣಗೊಳಿಸಿದೆ. ಇದೇ ಕಂಪನಿಯಿಂದ ದಕ್ಷಿಣದ ಎರಡು ರಾಜ್ಯಗಳ ರಾಜಧಾನಿಗಳ ನಡುವೆ ವೈಮಾನಿಕ ಸಮೀಕ್ಷೆ ಶೀಘ್ರದಲ್ಲೇ ಆರಂಭವಾಗಲಿದೆ. ಸಮೀಕ್ಷೆಗಳು ಪೂರ್ಣಗೊಂಡ ನಂತರ ಬುಲೆಟಿನ್ ರೈಲು ಯೋಜನೆಗಾಗಿ ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ಕಂಪನಿಯು ಸಿದ್ಧಪಡಿಸಲಿದೆ.

ಕೆಲವು ವರ್ಷಗಳ ಹಿಂದೆ ನ್ಯಾಷನಲ್ ಹೈಸ್ಪೀಡ್ ರೈಲ್ ಕಾರ್ಪೊರೇಷನ್ ಲಿಮಿಟೆಡ್ (NHSRCL) ವಿವಿಧ ಹೈಸ್ಪೀಡ್ ರೈಲು ಕಾರಿಡಾರ್‌ಗಳಿಗಾಗಿ ಅಧ್ಯಯನವನ್ನು ಪ್ರಾರಂಭಿಸಿದ ನಂತರ ಮೈಸೂರು – ಬೆಂಗಳೂರು – ಚೆನ್ನೈ ನಡುವಿನ ಹೈಸ್ಪೀಡ್ ರೈಲು ಕಾರಿಡಾರ್ ಮೊದಲ ಅನುಮೋದನೆಯನ್ನು ಪಡೆದಿತ್ತು.

ಪ್ರಸ್ತುತ, ಬೆಂಗಳೂರಿನ ಮೂಲಕ ಚೆನ್ನೈ ಮತ್ತು ಮೈಸೂರು ನಡುವಿನ ಅತ್ಯಂತ ವೇಗದ ರೈಲು ವಂದೇ ಭಾರತ್ ಎಕ್ಸ್‌ಪ್ರೆಸ್ ಆಗಿದೆ. ಇದು 435 ಕಿಮೀ ದೂರವನ್ನು ಕ್ರಮಿಸಲು ಸುಮಾರು 4:30 ಗಂಟೆಗಳನ್ನು ತೆಗೆದುಕೊಳ್ಳುತ್ತದೆ. ಬುಲೆಟ್ ರೈಲು 435 ಕಿ.ಮೀ ದೂರವನ್ನು ಕ್ರಮಿಸಲು 1:10 ಗಂಟೆಗಳನ್ನು ತೆಗೆದುಕೊಳ್ಳುತ್ತದೆ ಎಂದು ನಿರೀಕ್ಷಿಸಲಾಗಿದೆ.

ಡಿಪಿಆರ್ ವರದಿಯು ಎರಡೂ ನಗರಗಳ ನಡುವಿನ ಏಕೀಕೃತ ರೈಡರ್‌ಶಿಪ್‌ನ ಡೇಟಾವನ್ನು ಒಳಗೊಂಡಿರುತ್ತದೆ. ಇದು ಬೆಂಗಳೂರು – ಚೆನ್ನೈ ಹೆದ್ದಾರಿಗಳ ನಡುವಿನ ಟೋಲ್ ಪ್ಲಾಜಾಗಳ ಟ್ರಾಫಿಕ್ ಡೇಟಾ ಮತ್ತು ಅದೇ ಅವಧಿಯಲ್ಲಿ ರೈಲು ಮತ್ತು ವಿಮಾನ ಪ್ರಯಾಣದ ಸವಾರರ ಡೇಟಾವನ್ನು ಒಳಗೊಂಡಿರುತ್ತದೆ.

ಇದನ್ನೂ ಓದಿ: ಅಲೆ ಬುಡಿಯೆರ್.. ಬೆಂಗಳೂರಿನಲ್ಲಿ ಕೋಣಗಳ ಗತ್ತಿನ ಓಟದ ಕಂಬಳ ಕ್ರೀಡೆ ಆಯೋಜನೆಗೆ ಪ್ಲಾನ್

ಬೆಂಗಳೂರು – ಮೈಸೂರು – ಚೆನ್ನೈ ಮಾರ್ಗವು ಹೆಚ್ಚಿನ ದಟ್ಟಣೆ ಹೊಂದಿರುವ ಪ್ರದೇಶವಾಗಿದೆ. ಬುಲೆಟ್ ಟ್ರೈನ್ ಯೋಜನೆಯು ಪ್ರಯಾಣದ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡುವ ಗುರಿಯನ್ನು ಹೊಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:06 pm, Mon, 7 August 23

Follow Us
‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ
‘ಲವ್ ಮಾಕ್ಟೇಲ್ 3’ ಬಿಸ್ನೆಸ್ ಹಾಳು ಮಾಡಲು ನಾವು ಬಂದಿಲ್ಲ: ಗುರು ದೇಶಪಾಂಡೆ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಕಾರಿನಲ್ಲೇ ಸುಟ್ಟು ಹೋದ ಧಾರವಾಡದ ಮಾಜಿ ಶಾಸಕನ ಪುತ್ರ
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು