Sign In

By signing in or creating an account, you agree with Associated Broadcasting Company's Terms & Conditions and Privacy Policy.

KSRTC BMTC Strike: ಕೋಡಿಹಳ್ಳಿ ಚಂದ್ರಶೇಖರ್​ ವಿರುದ್ಧವೇ ಸಿಡಿದೆದ್ದ ಕಂಡಕ್ಟರ್​ ಉಮಾ; ಬೆದರಿಸಿ ಕೆಲಸ ಮಾಡಿಸಿದ್ದಕ್ಕೆ ಕಣ್ಣೀರಿಟ್ಟ ಸಿಬ್ಬಂದಿ ಶ್ರೀಕಾಂತ್​ ರೆಡ್ಡಿ

Bus Strike: ಕೋಡಿಹಳ್ಳಿ ಚಂದ್ರಶೇಖರ್​ ನಮ್ಮ ನೌಕರರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಕಂಡಕ್ಟರ್​ ಉಮಾ ಸಿಡಿದೆದ್ದಿದ್ದಾರೆ.

KSRTC BMTC Strike: ಕೋಡಿಹಳ್ಳಿ ಚಂದ್ರಶೇಖರ್​ ವಿರುದ್ಧವೇ ಸಿಡಿದೆದ್ದ ಕಂಡಕ್ಟರ್​ ಉಮಾ; ಬೆದರಿಸಿ ಕೆಲಸ ಮಾಡಿಸಿದ್ದಕ್ಕೆ ಕಣ್ಣೀರಿಟ್ಟ ಸಿಬ್ಬಂದಿ ಶ್ರೀಕಾಂತ್​ ರೆಡ್ಡಿ
ಕಂಡಕ್ಟರ್ ಉಮಾ
Follow us
shruti hegde
|

Updated on: Apr 07, 2021 | 2:01 PM

ಬೆಂಗಳೂರು: ಕೋಡಿಹಳ್ಳಿ ಚಂದ್ರಶೇಖರ್​ ನಮ್ಮ ನೌಕರರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇದರಿಂದ ನಮ್ಮ ನೌಕರರಿಗೆ ಯಾವುದೇ ಉಪಯೋಗ ಆಗಲ್ಲ ಎಂದು ಸಾರಿಗೆ ನೌಕರರ ಕೂಟದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಕಂಡಕ್ಟರ್​ ಉಮಾ ಸಿಡಿದೆದ್ದಿದ್ದಾರೆ.

ನೌಕರರ ಬೇಡಿಕೆ ಈಡೇರೋದೆ ಇಲ್ಲ ಅಂತ ಗೊತ್ತಿದೆ. ಆದರೂ ನಮ್ಮ ನೌಕರರ ದಾರಿ ತಪ್ಪಿಸೋ ಕೆಲಸ ಮಾಡುತ್ತಿದ್ದಾರೆ. ಕೋಡಿಹಳ್ಳಿ ಯಾರು? ಅವರಿಗೆ ನಮ್ಮ ಸಂಸ್ಥೆ ಬಗ್ಗೆ ಏನೂ ಗೊತ್ತಿದೆ? ಮುಂದೆ ನಮ್ಮ ನೌಕರರು ಬೀದಿಗೆ ಬರಬೇಕಾಗುತ್ತದೆ. ಮುಂದೆ ಖಾಸಗಿಯವರಿಗೆ ಸಾರಿಗೆ ಹಂಚೋ ಹುನ್ನಾರವೂ ಇರಬಹುದು. ನಮಗೆ ಉಪಯೋಗ ಆಗೋ ಬೇರೆ ಕೆಲಸಗಳಿವೆ ಅದನ್ನು ಮಾಡಲಿ. ನೌಕರರು ಅಮಾಯಕರು, ಅವರಿಗೆ ಏನು ಗೊತ್ತಿಲ್ಲ ಎಂದು ಕೋಡಿಹಳ್ಳಿ ಚಂದ್ರಶೇಖರ್​ ವಿರುದ್ಧ ಸಿಟ್ಟಿಗೆದ್ದಿದ್ದಾರೆ.

ಉಡುಪಿಯಲ್ಲಿ ಮಾಧ್ಯಮದ ಮುಂದೆ ಕಣ್ಣೀರಿಟ್ಟ ಕೆಎಸ್​ಆರ್​ಟಿಸಿ ಸಿಬ್ಬಂದಿ  ನಾನೊಬ್ಬ ಬಡವ ಕೆಎಸ್​ಆರ್​ಟಿಸಿಯನ್ನೇ ನಂಬಿಕೊಂಡು ಜೀವನ ಮಾಡುತ್ತಿದ್ದೇನೆ. ಮ್ಯಾನೇಜರ್ ನನ್ನನ್ನು ಬೆಳಗ್ಗೆ ಲಾಕ್ ಮಾಡಿ ಹೊರಗೆ ಹೋಗದಂತೆ ತಡೆದಿದ್ದಾರೆ ಎಂದು ಕೆಎಸ್​ಆರ್​ಟಿಸಿ ಸಿಬ್ಬಂದಿ ಶ್ರೀಕಾಂತ್​ ರೆಡ್ಡಿ ಮಾಧ್ಯಮದ ಮುಂದೆ ಕಣ್ಣೀರಿಟ್ಟಿದ್ದಾರೆ.

ನನ್ನನ್ನು ಇಲ್ಲಿ ಬ್ಲಾಕ್ ಮಾಡಿ ಡ್ಯೂಟಿ ಮಾಡಿಸಲಾಗುತ್ತಿದೆ. ಸ್ಟ್ರೈಕ್ ದಿನವೂ ನಾನು ಯಾಕೆ ಡ್ಯೂಟಿ ಮಾಡುತ್ತಿದ್ದೇನೆ ಎಂದು ಯಾರೂ ಪ್ರಶ್ನಿಸುತ್ತಿಲ್ಲ ಯಾಕೆ? ಮ್ಯಾನೇಜರ್ ನನ್ನನ್ನು ಬೆಳಗ್ಗೆ ಲಾಕ್ ಮಾಡಿ ಹೊರಗೆ ಹೋಗದಂತೆ ತಡೆದಿದ್ದಾರೆ. ಕೇಸ್ ಕ್ಲಿಯರ್ ಆಗೋವರೆಗೆ ಡ್ಯೂಟಿ ಮಾಡಬೇಕು ಎಂದು ಭಯ ಹುಟ್ಟಿಸಿದ್ದಾರೆ. ನನಗೆ ಭಯ ಹುಟ್ಟಿಸಿದ್ದರಿಂದ ನಾನು ಇಲ್ಲಿ ಡ್ಯೂಟಿ ಮಾಡುತ್ತಿದ್ದೇನೆ. ನನಗೆ ಈ ಸಂಸ್ಥೆ ಬಿಟ್ಟು ಬೇರೆ ಏನು ಗೊತ್ತಿಲ್ಲ. ನಮಗೆ ಆರನೇ ವೇತನ ಆಯೋಗದ ಸೌಲಭ್ಯ ಯಾಕೆ ಬೇಕು ಗೊತ್ತಾ? ನಿಮ್ಮ ಬಳಿ ಹಣವಿದೆ ನಮ್ಮ ಬಳಿ ಹಣವಿಲ್ಲ ಅದಕ್ಕಾಗಿ ಸಂಬಳ ಏರಿಕೆ ಕೇಳುತ್ತಿದ್ದೇವೆ. ರಾಜಕಾರಣಿಗಳಿಗೆ ನಮ್ಮ ಕಷ್ಟ ಅರ್ಥವಾಗುವುದಿಲ್ಲ. ನಾವು ಮತ ಹಾಕಿರುವುದರಿಂದ ಇವರೆಲ್ಲ ರಾಜಕಾರಣ ಮಾಡುತ್ತಿದ್ದಾರೆ. ನನ್ನ ಹತ್ತಿರ ಹಣವಿದ್ದರೆ ನಾನೇ ರಾಜಕಾರಣ ಮಾಡುತ್ತಿದ್ದೆ ಎಂದು ನೋವು ಹಂಚಿಕೊಂಡಿದ್ದಾರೆ.

ಅರ್ಚಕರಿಗೆ ಆರನೇ ವೇತನ ಆಯೋಗದಂತೆ ವೇತನ ಕೊಡುತ್ತಾರೆ ನಾವೇನು ಸತ್ತಿದ್ದೀವಾ? ನಿಮ್ಮ ಸ್ವಂತಕ್ಕೆ ನೀವು ರಾಜಕಾರಣ ಮಾಡುವುದಲ್ಲ ಜನರ ಸೇವೆ ಮಾಡಿ. ಜಾತಿ- ಜಾತಿ ಎಂದು ಬಡಿದಾಡಿಕೊಳ್ಳುವವರು ನೀವು ಎಂಎಲ್​ಎಗಳು. ನಿಮ್ಮ ಜಾತಿ ರಾಜಕೀಯ ಸುಡುಗಾಡು ಸೇರಲಿ ಎಂದು ತಮ್ಮ ನೋವನ್ನು ಸಿಟ್ಟಿನ ರೂಪದಲ್ಲಿ ಹೊರಹಾಕಿದ್ದಾರೆ.

ಇದನ್ನೂ ಓದಿ: KSRTC BMTC Strike: ಮಾರ್ಚ್​ ತಿಂಗಳ ಸಂಬಳ ರಿಲೀಸ್ ಆಗುತ್ತೆ.. ಆದ್ರೆ, ಸ್ವಲ್ಪ ತಡವಾಗುತ್ತೆ: ಕೆಎಸ್‌ಆರ್‌ಟಿಸಿ ಎಂಡಿ ಶಿವಯೋಗಿ ಕಳಸದ

KSRTC BMTC Strike: ಮುಷ್ಕರಕ್ಕೆ ಬೆಂಬಲ ನೀಡದೆ ಬಸ್ ಚಲಾಯಿಸಿದ ಚಾಲಕನ ವಿರುದ್ಧ ಸಹೋದ್ಯೋಗಿಗಳಿಂದ ಗಂಭೀರ ಆರೋಪ

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​