Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್ ಮುಷ್ಕರಕ್ಕೆ ಕುಮ್ಮಕ್ಕು ನೀಡಿದ ಕೋಡಿಹಳ್ಳಿ ಚಂದ್ರಶೇಖರ್ ಬೆಳಗಾವಿಯಲ್ಲಿ ಪೊಲೀಸರ ವಶಕ್ಕೆ

Bus Strike Kodihalli Chandrashekar Arrested ಬೆಳಗಾವಿಯ ಸುವರ್ಣಸೌಧ ಬಳಿಯ ಸುವರ್ಣ ಗಾರ್ಡನ್‌ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್​ ಸಭೆಗೆ ನಿರ್ಧರಿಸಿದ್ದರು. ಆದರೆ ಸಭೆಗೂ ಮುನ್ನವೇ ಖಾಸಗಿ ಹೋಟೆಲ್‌ನಲ್ಲಿದ್ದ ಕೋಡಿಹಳ್ಳಿ ಚಂದ್ರಶೇಖರನ್ನು ಪೊಲೀಸರು ವಶಕ್ಕೆ ಪಡೆದಿದ್ದು ಬೆಳಗಾವಿಯ ಹಿರೇಬಾಗೇವಾಡಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಬಸ್ ಮುಷ್ಕರಕ್ಕೆ ಕುಮ್ಮಕ್ಕು ನೀಡಿದ ಕೋಡಿಹಳ್ಳಿ ಚಂದ್ರಶೇಖರ್ ಬೆಳಗಾವಿಯಲ್ಲಿ ಪೊಲೀಸರ ವಶಕ್ಕೆ
ಕೋಡಿಹಳ್ಳಿ ಚಂದ್ರಶೇಖರ್ ಪೊಲೀಸರ ವಶ
Follow us
ಆಯೇಷಾ ಬಾನು
|

Updated on:Apr 10, 2021 | 12:01 PM

ಬೆಳಗಾವಿ: ಇಂದು ರೈತ ಮುಖಂಡರು, ಸಾರಿಗೆ ನೌಕರರ ಜತೆ ಸಭೆ ನಡೆಸಲಿದ್ದ ಕೋಡಿಹಳ್ಳಿ ಚಂದ್ರಶೇಖರನ್ನು ಬೆಳಗಾವಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿಯ ಸುವರ್ಣಸೌಧ ಬಳಿಯ ಸುವರ್ಣ ಗಾರ್ಡನ್‌ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್​ ಸಭೆಗೆ ನಿರ್ಧರಿಸಿದ್ದರು. ಆದರೆ ಸಭೆಗೂ ಮುನ್ನವೇ ಖಾಸಗಿ ಹೋಟೆಲ್‌ನಲ್ಲಿದ್ದ ಕೋಡಿಹಳ್ಳಿ ಚಂದ್ರಶೇಖರನ್ನು ಪೊಲೀಸರು ವಶಕ್ಕೆ ಪಡೆದಿದ್ದು ಬೆಳಗಾವಿಯ ಹಿರೇಬಾಗೇವಾಡಿ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ಸತತ ನಾಲ್ಕನೇ ದಿನವೂ ಕರ್ನಾಟಕದಲ್ಲಿ ಸಾರಿಗೆ ನೌಕರರ ಮುಷ್ಕರ ಮುಂದುವರೆದಿದೆ. ಸರ್ಕಾರಕ್ಕೆ ಮತ್ತಷ್ಟು ಬಿಸಿ ಮುಟ್ಟಿಸಲು ಸಾರಿಗೆ ನೌಕರರು ರಾಜ್ಯಾದ್ಯಂತ ಮುಷ್ಕರವನ್ನು ಮತ್ತಷ್ಟು ತೀವ್ರಗೊಳಿಸಲು ತಯಾರಿ ನಡೆಸಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಏಪ್ರಿಲ್ 10 ಅಂದರೆ ಇಂದು ಬೆಳಗಾವಿಗೆ ಕೋಡಿಹಳ್ಳಿ ಚಂದ್ರಶೇಖರ್ ಪ್ರಯಾಣ ಬೆಳೆಸಿದ್ದು ಬೆಳಗಾವಿ ಹಾಗೂ ಗುಲ್ಬರ್ಗದಲ್ಲಿ ಸಾರಿಗೆ ಮುಖಂಡರು ಹಾಗೂ ನೌಕರರ ಸಭೆ ನಡೆಸಲಿದ್ದರು. ಆದರೆ ಮುಂಜಾಗ್ರತಾ ಕ್ರಮವಾಗಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಬಾರದೆಂದು ಬೆಳಗಾವಿ ಪೊಲೀಸರು ಕೋಡಿಹಳ್ಳಿ ಚಂದ್ರಶೇಖರನ್ನು ವಶಕ್ಕೆ ಪಡೆದಿದ್ದಾರೆ.

ಸರ್ಕಾರ ಚಳವಳಿಗಳನ್ನು ಹತ್ತಿಕ್ಕುವ ನೀತಿ ಅನುಸರಿಸುತ್ತಿದೆ ಇನ್ನು ಬಂಧನಕ್ಕೊಳಗಾದ ಬಳಿಕ ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನ್ನನ್ನು ವಶಕ್ಕೆ ಪಡೆದಿರುವುದು ತಪ್ಪು. ನನ್ನನ್ನು ಅಕ್ರಮವಾಗಿ ಬಂಧಿಸಿದ್ದಾರೆ. ಸರ್ಕಾರ ಚಳವಳಿಗಳನ್ನು ಹತ್ತಿಕ್ಕುವ ನೀತಿ ಅನುಸರಿಸುತ್ತಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: ಸಾರಿಗೆ ನಿಗಮಗಳ ಯಾವ ನೌಕರರು ಆತ್ಮಹತ್ಯೆ ಮಾಡಿಕೊಳ್ಳಬಾರದು: ಕೋಡಿಹಳ್ಳಿ ಚಂದ್ರಶೇಖರ್ (Bus Strike Kodihalli Chandrashekar Arrested in Belagavi)

Published On - 11:47 am, Sat, 10 April 21

ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್
ಹತ್ಯೆಯಾದ ಮಹಿಳೆಯ ಮೂರನೇ ಗಂಡ ಪತ್ನಿ ಮತ್ತು ಇತರರನ್ನು ಕೊಂದನೇ?
ಹತ್ಯೆಯಾದ ಮಹಿಳೆಯ ಮೂರನೇ ಗಂಡ ಪತ್ನಿ ಮತ್ತು ಇತರರನ್ನು ಕೊಂದನೇ?
WITT: ಟಿವಿ9 ಶೃಂಗಸಭೆಯಲ್ಲಿ ಕೇಂದ್ರ ಸಚಿವರ ಸಂದರ್ಶನ, ಲೈವ್ ನೋಡಿ
WITT: ಟಿವಿ9 ಶೃಂಗಸಭೆಯಲ್ಲಿ ಕೇಂದ್ರ ಸಚಿವರ ಸಂದರ್ಶನ, ಲೈವ್ ನೋಡಿ
Shani Sanchara 2025: ಶನಿ ಸಂಚಾರ ರಾಶಿ ಭವಿಷ್ಯ, ಲೈವ್ ವೀಕ್ಷಿಸಿ
Shani Sanchara 2025: ಶನಿ ಸಂಚಾರ ರಾಶಿ ಭವಿಷ್ಯ, ಲೈವ್ ವೀಕ್ಷಿಸಿ