
ಭಾರತೀಯರಿಗೆ ಚಿನ್ನದ (Gold) ಮೇಲೆ ವಿಪರೀತ ಎನಿಸುವಷ್ಟು ವ್ಯಾಮೋಹ. ಆದರೆ ಆಪದ್ಬಾಂಧವ ಎನಿಸುವ ಈ ಚಿನ್ನದಿಂದ ಜೀವಭಯವನ್ನು ದೂರ ಮಾಡುವ ಆಶ್ವಾಸನೆ/ ಬೆಟ್ಟದಷ್ಟು ಭರವಸೆ ಇದೆ. ಮಕ್ಕಳ ವಿದ್ಯಾಭ್ಯಾಸ, ಕೃಷಿಗೆ ಸಹಾಯ, ಹೆಣ್ಣುಮಗುವಿನ ಮದುವೆ, ಉದ್ಯಮ ಆರಂಭಿಸುವುದು (Business), ಮನೆ ಕೊಳ್ಳುವುದು ಅದಕ್ಕೆಲ್ಲಾ ಚಿನ್ನ ಶ್ರೀರಾಮ ರಕ್ಷೆಯಾಗಿ ಕೆಲಸ ಮಾಡುತ್ತದೆ. ಬೆಳೆ ಚೆನ್ನಾಗಿ ಕೈಹಿಡಿದರೆ ರೈತ ಖರೀದಿಸುವುದು ಚಿನ್ನವನ್ನೇ (Personal Finance). ಅದೇ ಚಿನ್ನವನ್ನು ಅಡವಿಟ್ಟು ಬೆಳೆ ಬೆಳೆಯಬಲ್ಲ ಚತುರಮತಿ ನಮ್ಮ ರೈತರು. ಇನ್ನು ಇಡೀ ದೇಶದಲ್ಲಿ ಜನರ ಬಳಿ ಇರುವ ಬಂಗಾರದ ಲೆಕ್ಕ ನೋಡಿದರೆ ನೀವು ಹೌಹಾರುವುದು ಗ್ಯಾರಂಟಿ. ಅದೆಷ್ಟು ಬಂಗಾರ ದೇಶದಲ್ಲಿದೆ ಎಂಬುದು ನಿಮಗೆ ತಿಳಿದಿದೆಯೇ? 2 ಕೋಟಿ ಕೆಜಿಗೂ ಅಧಿಕ ಚಿನ್ನ ಭಾರತದ ಸುಪರ್ದಿಯಲ್ಲಿದೆ! ಪ್ರಪಂಚದಲ್ಲಿರುವ ಚಿನ್ನದ ಪೈಕಿ ಅಂದಾಜು ಶೇ.11 ರಷ್ಟು ಚಿನ್ನ ಭಾರತದಲ್ಲಿದೆ! ಈಗೀಗ ದೇಶದಲ್ಲಿ ಉದ್ಯೋಗ ಭದ್ರತೆ ಎಂಬುದು ಸಮಾಧಾನಕರವಾಗಿದೆ. ಆದರೆ 20 ಅಥವಾ 30 ವರ್ಷಗಳ ಹಿಂದೆ ಪರಿಸ್ಥಿತಿ ಹೀಗಿರಲಿಲ್ಲ. ಯುವಜನತೆಗೆ ಅದು ತುಂಬಾ ಶೋಚನೀಯ ದಿನಗಳು. ಯಾವಾಗ ನೌಕರಿ ಕಳೆದುಕೊಂಡು ಬದುಕು ತಲೆಕೆಳಗಾಗುತ್ತದೋ ಎಂದು ಆತಂಕದಿಂದ ದಿನ ದೂಡುವ ಪರಿಸ್ಥಿತಿ ನೆಲೆಸಿತ್ತು ಆಗ. ಅಂತಹ ಶೋಚನೀಯ ಪರಿಸ್ಥಿತಿಗಳಲ್ಲಿ ಬೇರೊಬ್ಬರ ಬಳಿ ಕೈ ಚಾಚುವ ಬದಲು ಅಷ್ಟೋ ಇಷ್ಟೋ ಚಿನ್ನ ಖರೀದಿಸಿಟ್ಟುಕೊಂಡು ದುರ್ದಿನಗಳಲ್ಲಿ ಅನೇಕ ಭಾರತೀಯರು ಬಚಾವಾಗುತ್ತಿದ್ದರು....
Published On - 4:54 pm, Wed, 12 June 24