AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BV Nagarathna: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸ್ಥಾನಕ್ಕೆ ಕರ್ನಾಟಕದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಹೆಸರು ಶಿಫಾರಸು

ಸುಪ್ರೀಂ ಕೋರ್ಟ್​​ ನ್ಯಾಯಮೂರ್ತಿ ಸ್ಥಾನಕ್ಕೆ ಕರ್ನಾಟಕದ ಮಹಿಳಾ ನ್ಯಾಯಮೂರ್ತಿ ಹೆಸರನ್ನು ಶಿಫಾರಸು ಮಾಡಲಾಗಿದೆ. ಕರ್ನಾಟಕದ ಹಿರಿಯ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ.

BV Nagarathna: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸ್ಥಾನಕ್ಕೆ ಕರ್ನಾಟಕದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಹೆಸರು ಶಿಫಾರಸು
ನ್ಯಾಯಮೂರ್ತಿ ಬಿ.ವಿ. ನಾಗರತ್ನ
TV9 Web
| Edited By: |

Updated on:Aug 18, 2021 | 10:45 AM

Share

ದೆಹಲಿ: ಸುಪ್ರೀಂ ಕೋರ್ಟ್​​ ನ್ಯಾಯಮೂರ್ತಿ ಸ್ಥಾನಕ್ಕೆ ಕರ್ನಾಟಕದ ಮಹಿಳಾ ನ್ಯಾಯಮೂರ್ತಿ ಹೆಸರನ್ನು ಶಿಫಾರಸು ಮಾಡಲಾಗಿದೆ. ಕರ್ನಾಟಕದ ಹಿರಿಯ ನ್ಯಾಯಮೂರ್ತಿ ಬಿ.ವಿ. ನಾಗರತ್ನ (Justice B.V. Nagarathna) ಅವರ ಹೆಸರನ್ನು ಸುಪ್ರೀಂ ಕೋರ್ಟ್​​ ನ್ಯಾಯಮೂರ್ತಿ ಶಿಫಾರಸು ಮಾಡಲಾಗಿದೆ. ನಾಗರತ್ನ ಅವರು ಕರ್ನಾಟಕ ಹೈಕೋರ್ಟ್​ನ ಹಿರಿಯ ನ್ಯಾಯಮೂರ್ತಿ.  ಸುಪ್ರೀಂ ಕೋರ್ಟ್​​ನ ಹಾಲಿ ಮುಖ್ಯ ನ್ಯಾಯಾಧೀಶರಾದ ಚೀಫ್​ ಜಸ್ಟೀಸ್​ ಎನ್​ ವಿ ರಮಣ (Chief Justice NV Ramana ) ನೇತೃತ್ವದ ಸುಪ್ರೀಂ ಕೋರ್ಟ್​ ಕೊಲಿಜಿಯಂ ಬಿ.ವಿ. ನಾಗರತ್ನ ಅವರ ಹೆಸರನ್ನು ಶಿಫಾರಸು ಮಾಡಿದೆ. 

ಸುಪ್ರೀಂ ಕೋರ್ಟ್​​ನ ಸಮಿತಿಯಿಂದ ಹೆಸರು ಶಿಫಾರಸು

ಜಸ್ಟೀಸ್​ ನಾಗರತ್ನ ಅವರ ತಂದೆ ಇ ಎಸ್​ ವೆಂಕಟರಾಮಯ್ಯ (ES Venkataramiah) ಅವರು 1989ರಲ್ಲಿ ಅರು ತಿಂಗಳ ಕಾಲ ಚೀಫ್​ ಜಸ್ಟೀಸ್​ ಆಫ್​ ಇಂಡಿಯಾ (CJI) ಆಗಿದ್ದರು. ಒಂದು ವೇಳೆ ಈಗ ನಾಗರತ್ನ ಅವರ ಹೆಸರು ಸುಪ್ರೀಂ ಕೋರ್ಟ್​ಗೆ ನೇಮಕಗೊಂಡರೆ 2027ರಲ್ಲಿ ಒಂದು ತಿಂಗಳ ಅವಧಿಗೆ ಮಹಿಳಾ ಚೀಫ್​ ಜಸ್ಟೀಸ್​ ಆಫ್​ ಇಂಡಿಯಾ ಆಗಿ ಸೇವೆ ಸಲ್ಲಿಸುವ ಸಾಧ್ಯತೆಯಿದೆ.

ಬಿ.ವಿ. ನಾಗರತ್ನಅವರು ಸುಪ್ರೀಂ ಕೋರ್ಟ್​​ ಮುಖ್ಯ ನ್ಯಾಯಾಧೀಶೆಯಾಗಿ (First Woman Chief Justice Of India) ನೇಮಕಗೊಂಡರೆ ಭಾರತಕ್ಕೆ ಮಹಿಳಾ ಸುಪ್ರೀಂ ನ್ಯಾಯಾಧೀಶೆ ಬೇಕೆಂಬ ಬಹುದಿನದ ಬೇಡಿಕೆ ಈಡೇರಿದಂತಾಗುತ್ತದೆ. ಇನ್ನು, ಕರ್ನಾಟಕ ಹೈಕೋರ್ಟ್ ಹಾಲಿ​ ಸಿಜೆ ಎ.ಎಸ್​. ಒಕಾ ಸುಪ್ರೀಂಕೋರ್ಟ್​ಗೆ ಪದೋನ್ನತಿ ಪಡೆಯಲಿದ್ದು, ಅವರ ಹೆಸರನ್ನು ಸಹ ಶಿಫಾರಸು ಮಾಡಲಾಗಿದೆ. ಸುಪ್ರೀಂ ಕೋರ್ಟ್​ ಕೊಲಿಜಿಯಂನಿಂದ 9 ಹೆಸರುಗಳು ಶಿಫಾರಸುಗೊಂಡಿವೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ವಿವಿಧ ರಾಜ್ಯಗಳ 9 ನ್ಯಾಯಮೂರ್ತಿಗಳ ಹೆಸರುಗಳನ್ನೂ ಶಿಫಾರಸು ಮಾಡಲಾಗಿದೆ.

(BV Nagarathna from karnataka may be first Woman Chief Justice Of India in supreme court)

Published On - 9:54 am, Wed, 18 August 21

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ