AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BV Nagarathna: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸ್ಥಾನಕ್ಕೆ ಕರ್ನಾಟಕದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಹೆಸರು ಶಿಫಾರಸು

ಸುಪ್ರೀಂ ಕೋರ್ಟ್​​ ನ್ಯಾಯಮೂರ್ತಿ ಸ್ಥಾನಕ್ಕೆ ಕರ್ನಾಟಕದ ಮಹಿಳಾ ನ್ಯಾಯಮೂರ್ತಿ ಹೆಸರನ್ನು ಶಿಫಾರಸು ಮಾಡಲಾಗಿದೆ. ಕರ್ನಾಟಕದ ಹಿರಿಯ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ.

BV Nagarathna: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸ್ಥಾನಕ್ಕೆ ಕರ್ನಾಟಕದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಹೆಸರು ಶಿಫಾರಸು
ನ್ಯಾಯಮೂರ್ತಿ ಬಿ.ವಿ. ನಾಗರತ್ನ
TV9 Web
| Edited By: ಸಾಧು ಶ್ರೀನಾಥ್​|

Updated on:Aug 18, 2021 | 10:45 AM

Share

ದೆಹಲಿ: ಸುಪ್ರೀಂ ಕೋರ್ಟ್​​ ನ್ಯಾಯಮೂರ್ತಿ ಸ್ಥಾನಕ್ಕೆ ಕರ್ನಾಟಕದ ಮಹಿಳಾ ನ್ಯಾಯಮೂರ್ತಿ ಹೆಸರನ್ನು ಶಿಫಾರಸು ಮಾಡಲಾಗಿದೆ. ಕರ್ನಾಟಕದ ಹಿರಿಯ ನ್ಯಾಯಮೂರ್ತಿ ಬಿ.ವಿ. ನಾಗರತ್ನ (Justice B.V. Nagarathna) ಅವರ ಹೆಸರನ್ನು ಸುಪ್ರೀಂ ಕೋರ್ಟ್​​ ನ್ಯಾಯಮೂರ್ತಿ ಶಿಫಾರಸು ಮಾಡಲಾಗಿದೆ. ನಾಗರತ್ನ ಅವರು ಕರ್ನಾಟಕ ಹೈಕೋರ್ಟ್​ನ ಹಿರಿಯ ನ್ಯಾಯಮೂರ್ತಿ.  ಸುಪ್ರೀಂ ಕೋರ್ಟ್​​ನ ಹಾಲಿ ಮುಖ್ಯ ನ್ಯಾಯಾಧೀಶರಾದ ಚೀಫ್​ ಜಸ್ಟೀಸ್​ ಎನ್​ ವಿ ರಮಣ (Chief Justice NV Ramana ) ನೇತೃತ್ವದ ಸುಪ್ರೀಂ ಕೋರ್ಟ್​ ಕೊಲಿಜಿಯಂ ಬಿ.ವಿ. ನಾಗರತ್ನ ಅವರ ಹೆಸರನ್ನು ಶಿಫಾರಸು ಮಾಡಿದೆ. 

ಸುಪ್ರೀಂ ಕೋರ್ಟ್​​ನ ಸಮಿತಿಯಿಂದ ಹೆಸರು ಶಿಫಾರಸು

ಜಸ್ಟೀಸ್​ ನಾಗರತ್ನ ಅವರ ತಂದೆ ಇ ಎಸ್​ ವೆಂಕಟರಾಮಯ್ಯ (ES Venkataramiah) ಅವರು 1989ರಲ್ಲಿ ಅರು ತಿಂಗಳ ಕಾಲ ಚೀಫ್​ ಜಸ್ಟೀಸ್​ ಆಫ್​ ಇಂಡಿಯಾ (CJI) ಆಗಿದ್ದರು. ಒಂದು ವೇಳೆ ಈಗ ನಾಗರತ್ನ ಅವರ ಹೆಸರು ಸುಪ್ರೀಂ ಕೋರ್ಟ್​ಗೆ ನೇಮಕಗೊಂಡರೆ 2027ರಲ್ಲಿ ಒಂದು ತಿಂಗಳ ಅವಧಿಗೆ ಮಹಿಳಾ ಚೀಫ್​ ಜಸ್ಟೀಸ್​ ಆಫ್​ ಇಂಡಿಯಾ ಆಗಿ ಸೇವೆ ಸಲ್ಲಿಸುವ ಸಾಧ್ಯತೆಯಿದೆ.

ಬಿ.ವಿ. ನಾಗರತ್ನಅವರು ಸುಪ್ರೀಂ ಕೋರ್ಟ್​​ ಮುಖ್ಯ ನ್ಯಾಯಾಧೀಶೆಯಾಗಿ (First Woman Chief Justice Of India) ನೇಮಕಗೊಂಡರೆ ಭಾರತಕ್ಕೆ ಮಹಿಳಾ ಸುಪ್ರೀಂ ನ್ಯಾಯಾಧೀಶೆ ಬೇಕೆಂಬ ಬಹುದಿನದ ಬೇಡಿಕೆ ಈಡೇರಿದಂತಾಗುತ್ತದೆ. ಇನ್ನು, ಕರ್ನಾಟಕ ಹೈಕೋರ್ಟ್ ಹಾಲಿ​ ಸಿಜೆ ಎ.ಎಸ್​. ಒಕಾ ಸುಪ್ರೀಂಕೋರ್ಟ್​ಗೆ ಪದೋನ್ನತಿ ಪಡೆಯಲಿದ್ದು, ಅವರ ಹೆಸರನ್ನು ಸಹ ಶಿಫಾರಸು ಮಾಡಲಾಗಿದೆ. ಸುಪ್ರೀಂ ಕೋರ್ಟ್​ ಕೊಲಿಜಿಯಂನಿಂದ 9 ಹೆಸರುಗಳು ಶಿಫಾರಸುಗೊಂಡಿವೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ವಿವಿಧ ರಾಜ್ಯಗಳ 9 ನ್ಯಾಯಮೂರ್ತಿಗಳ ಹೆಸರುಗಳನ್ನೂ ಶಿಫಾರಸು ಮಾಡಲಾಗಿದೆ.

(BV Nagarathna from karnataka may be first Woman Chief Justice Of India in supreme court)

Published On - 9:54 am, Wed, 18 August 21

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?