BV Nagarathna: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸ್ಥಾನಕ್ಕೆ ಕರ್ನಾಟಕದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಹೆಸರು ಶಿಫಾರಸು

ಸುಪ್ರೀಂ ಕೋರ್ಟ್​​ ನ್ಯಾಯಮೂರ್ತಿ ಸ್ಥಾನಕ್ಕೆ ಕರ್ನಾಟಕದ ಮಹಿಳಾ ನ್ಯಾಯಮೂರ್ತಿ ಹೆಸರನ್ನು ಶಿಫಾರಸು ಮಾಡಲಾಗಿದೆ. ಕರ್ನಾಟಕದ ಹಿರಿಯ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ.

BV Nagarathna: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸ್ಥಾನಕ್ಕೆ ಕರ್ನಾಟಕದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಹೆಸರು ಶಿಫಾರಸು
ನ್ಯಾಯಮೂರ್ತಿ ಬಿ.ವಿ. ನಾಗರತ್ನ
Follow us
| Updated By: ಸಾಧು ಶ್ರೀನಾಥ್​

Updated on:Aug 18, 2021 | 10:45 AM

ದೆಹಲಿ: ಸುಪ್ರೀಂ ಕೋರ್ಟ್​​ ನ್ಯಾಯಮೂರ್ತಿ ಸ್ಥಾನಕ್ಕೆ ಕರ್ನಾಟಕದ ಮಹಿಳಾ ನ್ಯಾಯಮೂರ್ತಿ ಹೆಸರನ್ನು ಶಿಫಾರಸು ಮಾಡಲಾಗಿದೆ. ಕರ್ನಾಟಕದ ಹಿರಿಯ ನ್ಯಾಯಮೂರ್ತಿ ಬಿ.ವಿ. ನಾಗರತ್ನ (Justice B.V. Nagarathna) ಅವರ ಹೆಸರನ್ನು ಸುಪ್ರೀಂ ಕೋರ್ಟ್​​ ನ್ಯಾಯಮೂರ್ತಿ ಶಿಫಾರಸು ಮಾಡಲಾಗಿದೆ. ನಾಗರತ್ನ ಅವರು ಕರ್ನಾಟಕ ಹೈಕೋರ್ಟ್​ನ ಹಿರಿಯ ನ್ಯಾಯಮೂರ್ತಿ.  ಸುಪ್ರೀಂ ಕೋರ್ಟ್​​ನ ಹಾಲಿ ಮುಖ್ಯ ನ್ಯಾಯಾಧೀಶರಾದ ಚೀಫ್​ ಜಸ್ಟೀಸ್​ ಎನ್​ ವಿ ರಮಣ (Chief Justice NV Ramana ) ನೇತೃತ್ವದ ಸುಪ್ರೀಂ ಕೋರ್ಟ್​ ಕೊಲಿಜಿಯಂ ಬಿ.ವಿ. ನಾಗರತ್ನ ಅವರ ಹೆಸರನ್ನು ಶಿಫಾರಸು ಮಾಡಿದೆ. 

ಸುಪ್ರೀಂ ಕೋರ್ಟ್​​ನ ಸಮಿತಿಯಿಂದ ಹೆಸರು ಶಿಫಾರಸು

ಜಸ್ಟೀಸ್​ ನಾಗರತ್ನ ಅವರ ತಂದೆ ಇ ಎಸ್​ ವೆಂಕಟರಾಮಯ್ಯ (ES Venkataramiah) ಅವರು 1989ರಲ್ಲಿ ಅರು ತಿಂಗಳ ಕಾಲ ಚೀಫ್​ ಜಸ್ಟೀಸ್​ ಆಫ್​ ಇಂಡಿಯಾ (CJI) ಆಗಿದ್ದರು. ಒಂದು ವೇಳೆ ಈಗ ನಾಗರತ್ನ ಅವರ ಹೆಸರು ಸುಪ್ರೀಂ ಕೋರ್ಟ್​ಗೆ ನೇಮಕಗೊಂಡರೆ 2027ರಲ್ಲಿ ಒಂದು ತಿಂಗಳ ಅವಧಿಗೆ ಮಹಿಳಾ ಚೀಫ್​ ಜಸ್ಟೀಸ್​ ಆಫ್​ ಇಂಡಿಯಾ ಆಗಿ ಸೇವೆ ಸಲ್ಲಿಸುವ ಸಾಧ್ಯತೆಯಿದೆ.

ಬಿ.ವಿ. ನಾಗರತ್ನಅವರು ಸುಪ್ರೀಂ ಕೋರ್ಟ್​​ ಮುಖ್ಯ ನ್ಯಾಯಾಧೀಶೆಯಾಗಿ (First Woman Chief Justice Of India) ನೇಮಕಗೊಂಡರೆ ಭಾರತಕ್ಕೆ ಮಹಿಳಾ ಸುಪ್ರೀಂ ನ್ಯಾಯಾಧೀಶೆ ಬೇಕೆಂಬ ಬಹುದಿನದ ಬೇಡಿಕೆ ಈಡೇರಿದಂತಾಗುತ್ತದೆ. ಇನ್ನು, ಕರ್ನಾಟಕ ಹೈಕೋರ್ಟ್ ಹಾಲಿ​ ಸಿಜೆ ಎ.ಎಸ್​. ಒಕಾ ಸುಪ್ರೀಂಕೋರ್ಟ್​ಗೆ ಪದೋನ್ನತಿ ಪಡೆಯಲಿದ್ದು, ಅವರ ಹೆಸರನ್ನು ಸಹ ಶಿಫಾರಸು ಮಾಡಲಾಗಿದೆ. ಸುಪ್ರೀಂ ಕೋರ್ಟ್​ ಕೊಲಿಜಿಯಂನಿಂದ 9 ಹೆಸರುಗಳು ಶಿಫಾರಸುಗೊಂಡಿವೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ವಿವಿಧ ರಾಜ್ಯಗಳ 9 ನ್ಯಾಯಮೂರ್ತಿಗಳ ಹೆಸರುಗಳನ್ನೂ ಶಿಫಾರಸು ಮಾಡಲಾಗಿದೆ.

(BV Nagarathna from karnataka may be first Woman Chief Justice Of India in supreme court)

Published On - 9:54 am, Wed, 18 August 21

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!