AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BV Nagarathna: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸ್ಥಾನಕ್ಕೆ ಕರ್ನಾಟಕದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಹೆಸರು ಶಿಫಾರಸು

ಸುಪ್ರೀಂ ಕೋರ್ಟ್​​ ನ್ಯಾಯಮೂರ್ತಿ ಸ್ಥಾನಕ್ಕೆ ಕರ್ನಾಟಕದ ಮಹಿಳಾ ನ್ಯಾಯಮೂರ್ತಿ ಹೆಸರನ್ನು ಶಿಫಾರಸು ಮಾಡಲಾಗಿದೆ. ಕರ್ನಾಟಕದ ಹಿರಿಯ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರ ಹೆಸರನ್ನು ಶಿಫಾರಸು ಮಾಡಲಾಗಿದೆ.

BV Nagarathna: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸ್ಥಾನಕ್ಕೆ ಕರ್ನಾಟಕದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಹೆಸರು ಶಿಫಾರಸು
ನ್ಯಾಯಮೂರ್ತಿ ಬಿ.ವಿ. ನಾಗರತ್ನ
TV9 Web
| Edited By: |

Updated on:Aug 18, 2021 | 10:45 AM

Share

ದೆಹಲಿ: ಸುಪ್ರೀಂ ಕೋರ್ಟ್​​ ನ್ಯಾಯಮೂರ್ತಿ ಸ್ಥಾನಕ್ಕೆ ಕರ್ನಾಟಕದ ಮಹಿಳಾ ನ್ಯಾಯಮೂರ್ತಿ ಹೆಸರನ್ನು ಶಿಫಾರಸು ಮಾಡಲಾಗಿದೆ. ಕರ್ನಾಟಕದ ಹಿರಿಯ ನ್ಯಾಯಮೂರ್ತಿ ಬಿ.ವಿ. ನಾಗರತ್ನ (Justice B.V. Nagarathna) ಅವರ ಹೆಸರನ್ನು ಸುಪ್ರೀಂ ಕೋರ್ಟ್​​ ನ್ಯಾಯಮೂರ್ತಿ ಶಿಫಾರಸು ಮಾಡಲಾಗಿದೆ. ನಾಗರತ್ನ ಅವರು ಕರ್ನಾಟಕ ಹೈಕೋರ್ಟ್​ನ ಹಿರಿಯ ನ್ಯಾಯಮೂರ್ತಿ.  ಸುಪ್ರೀಂ ಕೋರ್ಟ್​​ನ ಹಾಲಿ ಮುಖ್ಯ ನ್ಯಾಯಾಧೀಶರಾದ ಚೀಫ್​ ಜಸ್ಟೀಸ್​ ಎನ್​ ವಿ ರಮಣ (Chief Justice NV Ramana ) ನೇತೃತ್ವದ ಸುಪ್ರೀಂ ಕೋರ್ಟ್​ ಕೊಲಿಜಿಯಂ ಬಿ.ವಿ. ನಾಗರತ್ನ ಅವರ ಹೆಸರನ್ನು ಶಿಫಾರಸು ಮಾಡಿದೆ. 

ಸುಪ್ರೀಂ ಕೋರ್ಟ್​​ನ ಸಮಿತಿಯಿಂದ ಹೆಸರು ಶಿಫಾರಸು

ಜಸ್ಟೀಸ್​ ನಾಗರತ್ನ ಅವರ ತಂದೆ ಇ ಎಸ್​ ವೆಂಕಟರಾಮಯ್ಯ (ES Venkataramiah) ಅವರು 1989ರಲ್ಲಿ ಅರು ತಿಂಗಳ ಕಾಲ ಚೀಫ್​ ಜಸ್ಟೀಸ್​ ಆಫ್​ ಇಂಡಿಯಾ (CJI) ಆಗಿದ್ದರು. ಒಂದು ವೇಳೆ ಈಗ ನಾಗರತ್ನ ಅವರ ಹೆಸರು ಸುಪ್ರೀಂ ಕೋರ್ಟ್​ಗೆ ನೇಮಕಗೊಂಡರೆ 2027ರಲ್ಲಿ ಒಂದು ತಿಂಗಳ ಅವಧಿಗೆ ಮಹಿಳಾ ಚೀಫ್​ ಜಸ್ಟೀಸ್​ ಆಫ್​ ಇಂಡಿಯಾ ಆಗಿ ಸೇವೆ ಸಲ್ಲಿಸುವ ಸಾಧ್ಯತೆಯಿದೆ.

ಬಿ.ವಿ. ನಾಗರತ್ನಅವರು ಸುಪ್ರೀಂ ಕೋರ್ಟ್​​ ಮುಖ್ಯ ನ್ಯಾಯಾಧೀಶೆಯಾಗಿ (First Woman Chief Justice Of India) ನೇಮಕಗೊಂಡರೆ ಭಾರತಕ್ಕೆ ಮಹಿಳಾ ಸುಪ್ರೀಂ ನ್ಯಾಯಾಧೀಶೆ ಬೇಕೆಂಬ ಬಹುದಿನದ ಬೇಡಿಕೆ ಈಡೇರಿದಂತಾಗುತ್ತದೆ. ಇನ್ನು, ಕರ್ನಾಟಕ ಹೈಕೋರ್ಟ್ ಹಾಲಿ​ ಸಿಜೆ ಎ.ಎಸ್​. ಒಕಾ ಸುಪ್ರೀಂಕೋರ್ಟ್​ಗೆ ಪದೋನ್ನತಿ ಪಡೆಯಲಿದ್ದು, ಅವರ ಹೆಸರನ್ನು ಸಹ ಶಿಫಾರಸು ಮಾಡಲಾಗಿದೆ. ಸುಪ್ರೀಂ ಕೋರ್ಟ್​ ಕೊಲಿಜಿಯಂನಿಂದ 9 ಹೆಸರುಗಳು ಶಿಫಾರಸುಗೊಂಡಿವೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ವಿವಿಧ ರಾಜ್ಯಗಳ 9 ನ್ಯಾಯಮೂರ್ತಿಗಳ ಹೆಸರುಗಳನ್ನೂ ಶಿಫಾರಸು ಮಾಡಲಾಗಿದೆ.

(BV Nagarathna from karnataka may be first Woman Chief Justice Of India in supreme court)

Published On - 9:54 am, Wed, 18 August 21

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?