ಬೆಂಗಳೂರಲ್ಲಿ ನೀರು ಪೋಲು ಮಾಡಿದವರಿಗೆ ದಂಡ ವಿಧಿಸಿದ ಜಲಮಂಡಳಿ: 1 ಲಕ್ಷಕ್ಕೂ ಹೆಚ್ಚು ವಸೂಲಿ

ಬೆಂಗಳೂರು ನಗರದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಹಿನ್ನೆಲೆ ಕುಡಿಯುವ ನೀರನ್ನು ಬೇರೆ ಉದ್ದೇಶಕ್ಕೆ ಬಳಸಿದವರಿಗೆ ಮತ್ತು ಪೋಲು ಮಾಡಿದವರಿಗೆ ದಂಡ ವಿಧಿಸುವುದಾಗಿ ಜಲಮಂಡಳಿ ಈಗಾಗಲೇ ಎಚ್ಚರಿಕೆ ನೀಡಲಾಗಿತ್ತು. ಅದೇ ರೀತಿಯಾಗಿ ನೀರು ವ್ಯರ್ಥ ಮಾಡಿದ್ರೆ 5 ಸಾವಿರ ರೂ. ದಂಡ ನಿಗದಿ ಮಾಡಲಾಗಿತ್ತು. ಇದೀಗ ನಗರದಲ್ಲಿ ಈವರೆಗೆ ಬರೋಬ್ಬರಿ 1 ಲಕ್ಷದ 10 ಸಾವಿರ ರೂ. ದಂಡ ವಸೂಲಿ ಮಾಡಲಾಗಿದೆ.

ಬೆಂಗಳೂರಲ್ಲಿ ನೀರು ಪೋಲು ಮಾಡಿದವರಿಗೆ ದಂಡ ವಿಧಿಸಿದ ಜಲಮಂಡಳಿ: 1 ಲಕ್ಷಕ್ಕೂ ಹೆಚ್ಚು ವಸೂಲಿ
ಜಲಮಂಡಳಿ
Follow us
|

Updated on: Mar 24, 2024 | 10:00 PM

ಬೆಂಗಳೂರು, ಮಾರ್ಚ್​ 24: ನಗರದಲ್ಲಿ ಕುಡಿಯುವ ನೀರಿಗಾಗಿ (water) ಹಾಹಾಕಾರ ಹಿನ್ನೆಲೆ ಕುಡಿಯುವ ನೀರನ್ನು ಬೇರೆ ಉದ್ದೇಶಕ್ಕೆ ಬಳಸಿದವರಿಗೆ ಮತ್ತು ಪೋಲು ಮಾಡಿದವರಿಗೆ ದಂಡ ವಿಧಿಸುವುದಾಗಿ ಜಲಮಂಡಳಿ ಈಗಾಗಲೇ ಎಚ್ಚರಿಕೆ ನೀಡಲಾಗಿತ್ತು. ಅದೇ ರೀತಿಯಾಗಿ ನೀರು ವ್ಯರ್ಥ ಮಾಡಿದ್ರೆ 5 ಸಾವಿರ ರೂ. ದಂಡ ನಿಗದಿ ಮಾಡಲಾಗಿತ್ತು. ಇದೀಗ ನಗರದಲ್ಲಿ ಈವರೆಗೆ ಬರೋಬ್ಬರಿ 1 ಲಕ್ಷದ 10 ಸಾವಿರ ರೂ. ದಂಡ ವಸೂಲಿ ಮಾಡಲಾಗಿದೆ. ಬೋರ್​ವೆಲ್, ನಲ್ಲಿ ನೀರು ವಾಹನ ತೊಳೆಯಲು, ರಸ್ತೆಗೆ ಸುರಿದವರು, ಗಿಡಗಳಿಗೆ ಕುಡಿಯುವ ನೀರು ಬಳಸಿದವರಿಗೂ ದಂಡ ವಿಧಿಸಲಾಗಿದೆ. ಜಲಮಂಡಳಿ ಅಧಿಕಾರಿಗಳಿಂದ ವಿವಿಧ ವಲಯಗಳಲ್ಲಿ ದಂಡ ಸಂಗ್ರಹ ಮಾಡಲಾಗಿದೆ. ದಂಡ ಪ್ರಯೋಗದ ಮೂಲಕ ಜಲಮಂಡಳಿಯಿಂದ ನೀರಿನ ಮಿತಬಳಕೆ ಪಾಠ ಮಾಡಲಾಗಿದೆ.

ನೀರು ಪೋಲು ತಡೆಗೆ ಮಾರ್ಚ್‌ 21 ರಿಂದ ಮಾರ್ಚ್ 31ರ ಒಳಗೆ ನಲ್ಲಿಗಳಿಗೆ ವಾಟರ್‌ ಟ್ಯಾಪ್ ಮಾಸ್ಕ್‌ ಅಂದ್ರೆ ಏರಿಯೇಟರ್‌ ಅಳವಡಿಕೆ ಕಡ್ಡಾಯ ಮಾಡಲಾಗಿದೆ. ನಗರದಲ್ಲಿ ಪರವಾನಗಿ ಹೊಂದಿದ 1,500 ಪ್ಲಂಬರ್‌ಗಳಿದ್ದು, ಏರಿಯೇಟರ್ ಅಳವಡಿಕೆಗೆ ಜಾಗೃತಿ ಮೂಡಿಸಬೇಕಿದೆ. ಏರಿಯೇಟರ್‌ ಅಳವಡಿಸುವುದರಿಂದ ಶೇಕಡಾ 60 ರಿಂದ 85 ರಷ್ಟು ನೀರಿನ ಉಳಿತಾಯ ಮಾಡಬಹುದಾಗಿದೆ.

ಇದನ್ನೂ ಓದಿ: Bengaluru Water Crisis: 24 ಸಾವಿರ ಲೀಟರ್​ ಮತ್ತು ಮೇಲ್ಪಟ್ಟ ವಾಟರ್​ ಟ್ಯಾಂಕರ್​ಗಳಿಗೂ ದರ ನಿಗದಿ

ವಾಣಿಜ್ಯ ಮಳಿಗೆಗಳು, ಕೈಗಾರಿಕೆಗಳು, ಅಪಾರ್ಟ್‌ಮೆಂಟ್‌ಗಳು, ಐಷಾರಾಮಿ ಹೋಟೆಲ್​​ಗಳು ಮತ್ತು ರೆಸ್ಟೋರೆಂಟ್​ಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿನ ನಲ್ಲಿಗಳಿಗೆ ಏರಿಯೇಟರ್ ಅಳವಡಿಕೆ ಕಡ್ಡಾಯ. ಮನೆಗಳಲ್ಲಿ ಸ್ವಯಂ ಪ್ರೇರಿತವಾಗಿ ಏರಿಯೇಟರ್‌ ಅಳವಡಿಕೆ ಮಾಡಿಕೊಳ್ಳಬಹುದು. ಈ ಬಗ್ಗೆ ಜಲಮಂಡಳಿ ಇತ್ತೀಚೆಗೆ ಅಧಿಕೃತ ಆದೇಶ ಹೊರಡಿಸಿತ್ತು.

ಟ್ಯಾಂಕರ್​ ಮಾಫಿಯಾಕ್ಕೆ ಕಡಿವಾಣ

ಟ್ಯಾಂಕರ್​ ಮಾಫಿಯಾಕ್ಕೆ ಕಡಿವಾಣ ಹಾಕುವ ಸಂಬಂಧ ಇತ್ತೀಚೆಗಷ್ಟೇ ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆಸಲಾಗಿತ್ತು. ಆ ಸಭೆಯಲ್ಲಿ, ನೀರಿನ ಟ್ಯಾಂಕರ್‌ಗಳ ಮಾಲೀಕರು ಮಾರ್ಚ್​ 7ರ ಗಡುವಿನ ಒಳಗೆ ನೋಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿತ್ತು. ದರ ನಿಗದಿ ಸಂಬಂಧ ಈ ಸೂಚನೆ ನೀಡಲಾಗಿತ್ತು.

ವರದಿ: ಶಾಂತಮೂರ್ತಿ ಎಂ

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ