AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ನೀರು ಪೋಲು ಮಾಡಿದವರಿಗೆ ದಂಡ ವಿಧಿಸಿದ ಜಲಮಂಡಳಿ: 1 ಲಕ್ಷಕ್ಕೂ ಹೆಚ್ಚು ವಸೂಲಿ

ಬೆಂಗಳೂರು ನಗರದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಹಿನ್ನೆಲೆ ಕುಡಿಯುವ ನೀರನ್ನು ಬೇರೆ ಉದ್ದೇಶಕ್ಕೆ ಬಳಸಿದವರಿಗೆ ಮತ್ತು ಪೋಲು ಮಾಡಿದವರಿಗೆ ದಂಡ ವಿಧಿಸುವುದಾಗಿ ಜಲಮಂಡಳಿ ಈಗಾಗಲೇ ಎಚ್ಚರಿಕೆ ನೀಡಲಾಗಿತ್ತು. ಅದೇ ರೀತಿಯಾಗಿ ನೀರು ವ್ಯರ್ಥ ಮಾಡಿದ್ರೆ 5 ಸಾವಿರ ರೂ. ದಂಡ ನಿಗದಿ ಮಾಡಲಾಗಿತ್ತು. ಇದೀಗ ನಗರದಲ್ಲಿ ಈವರೆಗೆ ಬರೋಬ್ಬರಿ 1 ಲಕ್ಷದ 10 ಸಾವಿರ ರೂ. ದಂಡ ವಸೂಲಿ ಮಾಡಲಾಗಿದೆ.

ಬೆಂಗಳೂರಲ್ಲಿ ನೀರು ಪೋಲು ಮಾಡಿದವರಿಗೆ ದಂಡ ವಿಧಿಸಿದ ಜಲಮಂಡಳಿ: 1 ಲಕ್ಷಕ್ಕೂ ಹೆಚ್ಚು ವಸೂಲಿ
ಜಲಮಂಡಳಿ
Follow us
ಗಂಗಾಧರ​ ಬ. ಸಾಬೋಜಿ
|

Updated on: Mar 24, 2024 | 10:00 PM

ಬೆಂಗಳೂರು, ಮಾರ್ಚ್​ 24: ನಗರದಲ್ಲಿ ಕುಡಿಯುವ ನೀರಿಗಾಗಿ (water) ಹಾಹಾಕಾರ ಹಿನ್ನೆಲೆ ಕುಡಿಯುವ ನೀರನ್ನು ಬೇರೆ ಉದ್ದೇಶಕ್ಕೆ ಬಳಸಿದವರಿಗೆ ಮತ್ತು ಪೋಲು ಮಾಡಿದವರಿಗೆ ದಂಡ ವಿಧಿಸುವುದಾಗಿ ಜಲಮಂಡಳಿ ಈಗಾಗಲೇ ಎಚ್ಚರಿಕೆ ನೀಡಲಾಗಿತ್ತು. ಅದೇ ರೀತಿಯಾಗಿ ನೀರು ವ್ಯರ್ಥ ಮಾಡಿದ್ರೆ 5 ಸಾವಿರ ರೂ. ದಂಡ ನಿಗದಿ ಮಾಡಲಾಗಿತ್ತು. ಇದೀಗ ನಗರದಲ್ಲಿ ಈವರೆಗೆ ಬರೋಬ್ಬರಿ 1 ಲಕ್ಷದ 10 ಸಾವಿರ ರೂ. ದಂಡ ವಸೂಲಿ ಮಾಡಲಾಗಿದೆ. ಬೋರ್​ವೆಲ್, ನಲ್ಲಿ ನೀರು ವಾಹನ ತೊಳೆಯಲು, ರಸ್ತೆಗೆ ಸುರಿದವರು, ಗಿಡಗಳಿಗೆ ಕುಡಿಯುವ ನೀರು ಬಳಸಿದವರಿಗೂ ದಂಡ ವಿಧಿಸಲಾಗಿದೆ. ಜಲಮಂಡಳಿ ಅಧಿಕಾರಿಗಳಿಂದ ವಿವಿಧ ವಲಯಗಳಲ್ಲಿ ದಂಡ ಸಂಗ್ರಹ ಮಾಡಲಾಗಿದೆ. ದಂಡ ಪ್ರಯೋಗದ ಮೂಲಕ ಜಲಮಂಡಳಿಯಿಂದ ನೀರಿನ ಮಿತಬಳಕೆ ಪಾಠ ಮಾಡಲಾಗಿದೆ.

ನೀರು ಪೋಲು ತಡೆಗೆ ಮಾರ್ಚ್‌ 21 ರಿಂದ ಮಾರ್ಚ್ 31ರ ಒಳಗೆ ನಲ್ಲಿಗಳಿಗೆ ವಾಟರ್‌ ಟ್ಯಾಪ್ ಮಾಸ್ಕ್‌ ಅಂದ್ರೆ ಏರಿಯೇಟರ್‌ ಅಳವಡಿಕೆ ಕಡ್ಡಾಯ ಮಾಡಲಾಗಿದೆ. ನಗರದಲ್ಲಿ ಪರವಾನಗಿ ಹೊಂದಿದ 1,500 ಪ್ಲಂಬರ್‌ಗಳಿದ್ದು, ಏರಿಯೇಟರ್ ಅಳವಡಿಕೆಗೆ ಜಾಗೃತಿ ಮೂಡಿಸಬೇಕಿದೆ. ಏರಿಯೇಟರ್‌ ಅಳವಡಿಸುವುದರಿಂದ ಶೇಕಡಾ 60 ರಿಂದ 85 ರಷ್ಟು ನೀರಿನ ಉಳಿತಾಯ ಮಾಡಬಹುದಾಗಿದೆ.

ಇದನ್ನೂ ಓದಿ: Bengaluru Water Crisis: 24 ಸಾವಿರ ಲೀಟರ್​ ಮತ್ತು ಮೇಲ್ಪಟ್ಟ ವಾಟರ್​ ಟ್ಯಾಂಕರ್​ಗಳಿಗೂ ದರ ನಿಗದಿ

ವಾಣಿಜ್ಯ ಮಳಿಗೆಗಳು, ಕೈಗಾರಿಕೆಗಳು, ಅಪಾರ್ಟ್‌ಮೆಂಟ್‌ಗಳು, ಐಷಾರಾಮಿ ಹೋಟೆಲ್​​ಗಳು ಮತ್ತು ರೆಸ್ಟೋರೆಂಟ್​ಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿನ ನಲ್ಲಿಗಳಿಗೆ ಏರಿಯೇಟರ್ ಅಳವಡಿಕೆ ಕಡ್ಡಾಯ. ಮನೆಗಳಲ್ಲಿ ಸ್ವಯಂ ಪ್ರೇರಿತವಾಗಿ ಏರಿಯೇಟರ್‌ ಅಳವಡಿಕೆ ಮಾಡಿಕೊಳ್ಳಬಹುದು. ಈ ಬಗ್ಗೆ ಜಲಮಂಡಳಿ ಇತ್ತೀಚೆಗೆ ಅಧಿಕೃತ ಆದೇಶ ಹೊರಡಿಸಿತ್ತು.

ಟ್ಯಾಂಕರ್​ ಮಾಫಿಯಾಕ್ಕೆ ಕಡಿವಾಣ

ಟ್ಯಾಂಕರ್​ ಮಾಫಿಯಾಕ್ಕೆ ಕಡಿವಾಣ ಹಾಕುವ ಸಂಬಂಧ ಇತ್ತೀಚೆಗಷ್ಟೇ ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆಸಲಾಗಿತ್ತು. ಆ ಸಭೆಯಲ್ಲಿ, ನೀರಿನ ಟ್ಯಾಂಕರ್‌ಗಳ ಮಾಲೀಕರು ಮಾರ್ಚ್​ 7ರ ಗಡುವಿನ ಒಳಗೆ ನೋಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿತ್ತು. ದರ ನಿಗದಿ ಸಂಬಂಧ ಈ ಸೂಚನೆ ನೀಡಲಾಗಿತ್ತು.

ವರದಿ: ಶಾಂತಮೂರ್ತಿ ಎಂ

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು