AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ತೊರೆದು ಕಾಂಗ್ರೆಸ್​ನಿಂದ ಚನ್ನಪಟ್ಟಣ ಅಖಾಡಕ್ಕಿಳಿದ ಯೋಗೇಶ್ವರ್ ಆಸ್ತಿ ವಿವರ ಇಲ್ಲಿದೆ

ಚನ್ನಪಟ್ಟಣದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್​ ಇಂದು ನಾಮಪತ್ರ ಸಲ್ಲಿಸಿದ್ದು, ಈ ವೇಳೆ ತಮ್ಮ ಆಸ್ತಿ ವಿವರ ಘೋಷಣೆ ಮಾಡಿದ್ದಾರೆ. ಸಿ.ಪಿ.ಯೋಗೇಶ್ವರ್ ಒಟ್ಟು 27,94,06,412 ಮೌಲ್ಯದ ಸ್ಥಿರಾಸ್ತಿ ಮತ್ತು 7,25,20,470 ರೂ. ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ಇನ್ನು ಅವರ ಪತ್ನಿ ಹೆಸರಿನಲ್ಲೂ ಸಾಕಷ್ಟು ಆಸ್ತಿ ಹೊಂದಿದ್ದಾರೆ.

ಬಿಜೆಪಿ ತೊರೆದು ಕಾಂಗ್ರೆಸ್​ನಿಂದ ಚನ್ನಪಟ್ಟಣ ಅಖಾಡಕ್ಕಿಳಿದ ಯೋಗೇಶ್ವರ್ ಆಸ್ತಿ ವಿವರ ಇಲ್ಲಿದೆ
ಬಿಜೆಪಿ ತೊರೆದು ಕಾಂಗ್ರೆಸ್​ನಿಂದ ಚನ್ನಪಟ್ಟಣ ಅಖಾಡಕ್ಕಿಳಿದ ಯೋಗೇಶ್ವರ್ ಆಸ್ತಿ ವಿವರ ಇಲ್ಲಿದೆ
Ramesha M
| Edited By: |

Updated on:Oct 24, 2024 | 4:39 PM

Share

ರಾಮನಗರ, ಅಕ್ಟೋಬರ್​ 24: ದಳಪತಿಗಳ ಕೋಟೆಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಜಿಲ್ಲೆಯ ಚನ್ನಪಟ್ಟಣದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ (CP Yogeshwara) ಇಂದು ನಾಮಿನೇಷನ್ ಸಲ್ಲಿಸಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಕೂಡ ಉಪಸ್ಥಿತರಿದ್ದರು. ನಗದು, ಹೂಡಿಕೆ ಸೇರಿದಂತೆ 7,25,20,470 ರೂ. ಮೌಲ್ಯದ ಚರಾಸ್ತಿ ಹೊಂದಿರುವುದಾಗಿ ಸಿ.ಪಿ.ಯೋಗೇಶ್ವರ್ ಪ್ರಮಾಣ ಪತ್ರದಲ್ಲಿ ತಮ್ಮ ಆಸ್ತಿ ವಿವರ ನೀಡಿದ್ದಾರೆ.

ಸಿ.ಪಿ.ಯೋಗೇಶ್ವರ್​ ಬಳಿರುವ ಆಸ್ತಿ ಎಷ್ಟು? 

  • ಸಿ.ಪಿ.ಯೋಗೇಶ್ವರ್ ಹೆಸರಿನಲ್ಲಿ ಒಟ್ಟು 27,94,06,412 ಮೌಲ್ಯದ ಸ್ಥಿರಾಸ್ತಿ ಇದ್ದು, ಪತ್ನಿ ಶೀಲಾ ಹೆಸರಲ್ಲಿ 25,35,37,740 ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ.
  • ಪತ್ನಿ ಶೀಲಾ ಹೆಸರಿನಲ್ಲಿ 7,10,80,556 ರೂ. ಮೌಲ್ಯದ ಚರಾಸ್ತಿ ಹೊಂದಿದ್ದು, ಶೇಷಗಿರಿಹಳ್ಳಿ, ಕೋತನಹಳ್ಳಿ, ಕೆಂಜಿಗರಹಳ್ಳಿ, ಕೇತೋಹಳ್ಳಿ, ಹಂಪಾಪುರ ಗ್ರಾಮದಲ್ಲಿ ಸಿ.ಪಿ.ಯೋಗೇಶ್ವರ್ ಸ್ಥಿರಾಸ್ತಿ ಹೊಂದಿದ್ದಾರೆ.

ಇದನ್ನೂ ಓದಿ: ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚಂದ ಎಂದ ಡಿಸಿಎಂ ಡಿಕೆ ಶಿವಕುಮಾರ್

  • ಯೋಗೇಶ್ವರ್ ಹೆಸರಲ್ಲಿ 22,02,47,157 ರೂ. ಮೌಲ್ಯದ ಮತ್ತು ಪತ್ನಿ ಶೀಲಾ ಹೆಸರಿನಲ್ಲಿ 2,14,52,740 ರೂ. ಮೌಲ್ಯದ ಕೃಷಿ ಭೂಮಿ ಹೊಂದಿದ್ದಾರೆ. ಶೀಲಾ ಹೆಸರಿನಲ್ಲಿ 6.65 ಕೋಟಿ ರೂ. ಮೌಲ್ಯದ ಕೃಷಿಯೇತರ ಭೂಮಿ ಇದೆ.
  • ಸಿ.ಪಿ.ಯೋಗೇಶ್ವರ್ ಹೆಸರಿನಲ್ಲಿ 2,37,62,000 ಕೋಟಿ ರೂ. ಮೌಲ್ಯದ ಮತ್ತು ಶೀಲಾ ಹೆಸರಿನಲ್ಲಿ 15.45 ಕೋಟಿ ರೂ. ಮೌಲ್ಯದ ಮನೆಗಳಿವೆ.
  • ಯೋಗೇಶ್ವರ್ ಹೆಸರಲ್ಲಿ 25,86,31,284 ರೂ. ಸಾಲವಿದ್ದು, ಶೀಲಾ ಹೆಸರಿನಲ್ಲಿ 3,41,42,184 ರೂ. ಸಾಲವಿದೆ.
  • 250 ಗ್ರಾಂ ಚಿನ್ನಾಭರಣವನ್ನು ಯೋಗೇಶ್ವರ್​ ಹೊಂದಿದ್ದು, ಶೀಲಾ ಬಳಿ 1 ಕೆಜಿ 500 ಗ್ರಾಂ ಚಿನ್ನಾಭರಣ, 20 ಕೆಜಿ ಬೆಳ್ಳಿ ಇದೆ. ಸಾರ್ವಜನಿಕರಿಂದ 1 ಕೆಜಿ ಚಿನ್ನ, 50 ಕೆಜಿ ಬೆಳ್ಳಿಯನ್ನು ಶೀಲಾ ಸ್ವೀಕರಿಸಿದ್ದಾರೆ.

ಇದನ್ನೂ ಓದಿ: ಚನ್ನಪಟ್ಟಣ ಕೈ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ: ದಳ ಕೋಟೆಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ

ಯೋಗೇಶ್ವರ್ ಕಾಂಗ್ರೆಸ್ ಸೇರಿದ ದಿನವೇ ಎಐಸಿಸಿ ಟಿಕೆಟ್ ಘೋಷಣೆ ಮಾಡಿದೆ. ಅದರ ಬೆನ್ನಲ್ಲೇ ಇಂದು  ಕಾಂಗ್ರೆಸ್ ಅಭ್ಯರ್ಥಿ ಆಗಿ ನಾಮಿನೇಷನ್ ಕೂಡ ಸಲ್ಲಿಸಲಿದ್ದಾರೆ. ಚನ್ನಪಟ್ಟಣ ಮಂಗಳವಾರ ಪೇಟೆಯಿಂದ ತಹಶೀಲ್ದಾರ್ ಕಚೇರಿ ವರೆಗೂ 1.5 ಕಿಲೋ ಮೀಟರ್​ ರೋಡ್​ ಶೋ ಮಾಡಲಾಗಿದೆ. ಈ ವೇಳೆ ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:38 pm, Thu, 24 October 24

Follow Us
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು