ಬಿಜೆಪಿ ತೊರೆದು ಕಾಂಗ್ರೆಸ್​ನಿಂದ ಚನ್ನಪಟ್ಟಣ ಅಖಾಡಕ್ಕಿಳಿದ ಯೋಗೇಶ್ವರ್ ಆಸ್ತಿ ವಿವರ ಇಲ್ಲಿದೆ

ಚನ್ನಪಟ್ಟಣದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್​ ಇಂದು ನಾಮಪತ್ರ ಸಲ್ಲಿಸಿದ್ದು, ಈ ವೇಳೆ ತಮ್ಮ ಆಸ್ತಿ ವಿವರ ಘೋಷಣೆ ಮಾಡಿದ್ದಾರೆ. ಸಿ.ಪಿ.ಯೋಗೇಶ್ವರ್ ಒಟ್ಟು 27,94,06,412 ಮೌಲ್ಯದ ಸ್ಥಿರಾಸ್ತಿ ಮತ್ತು 7,25,20,470 ರೂ. ಮೌಲ್ಯದ ಚರಾಸ್ತಿ ಹೊಂದಿದ್ದಾರೆ. ಇನ್ನು ಅವರ ಪತ್ನಿ ಹೆಸರಿನಲ್ಲೂ ಸಾಕಷ್ಟು ಆಸ್ತಿ ಹೊಂದಿದ್ದಾರೆ.

ಬಿಜೆಪಿ ತೊರೆದು ಕಾಂಗ್ರೆಸ್​ನಿಂದ ಚನ್ನಪಟ್ಟಣ ಅಖಾಡಕ್ಕಿಳಿದ ಯೋಗೇಶ್ವರ್ ಆಸ್ತಿ ವಿವರ ಇಲ್ಲಿದೆ
ಬಿಜೆಪಿ ತೊರೆದು ಕಾಂಗ್ರೆಸ್​ನಿಂದ ಚನ್ನಪಟ್ಟಣ ಅಖಾಡಕ್ಕಿಳಿದ ಯೋಗೇಶ್ವರ್ ಆಸ್ತಿ ವಿವರ ಇಲ್ಲಿದೆ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Oct 24, 2024 | 4:39 PM

ರಾಮನಗರ, ಅಕ್ಟೋಬರ್​ 24: ದಳಪತಿಗಳ ಕೋಟೆಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಜಿಲ್ಲೆಯ ಚನ್ನಪಟ್ಟಣದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ (CP Yogeshwara) ಇಂದು ನಾಮಿನೇಷನ್ ಸಲ್ಲಿಸಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ಕೂಡ ಉಪಸ್ಥಿತರಿದ್ದರು. ನಗದು, ಹೂಡಿಕೆ ಸೇರಿದಂತೆ 7,25,20,470 ರೂ. ಮೌಲ್ಯದ ಚರಾಸ್ತಿ ಹೊಂದಿರುವುದಾಗಿ ಸಿ.ಪಿ.ಯೋಗೇಶ್ವರ್ ಪ್ರಮಾಣ ಪತ್ರದಲ್ಲಿ ತಮ್ಮ ಆಸ್ತಿ ವಿವರ ನೀಡಿದ್ದಾರೆ.

ಸಿ.ಪಿ.ಯೋಗೇಶ್ವರ್​ ಬಳಿರುವ ಆಸ್ತಿ ಎಷ್ಟು? 

  • ಸಿ.ಪಿ.ಯೋಗೇಶ್ವರ್ ಹೆಸರಿನಲ್ಲಿ ಒಟ್ಟು 27,94,06,412 ಮೌಲ್ಯದ ಸ್ಥಿರಾಸ್ತಿ ಇದ್ದು, ಪತ್ನಿ ಶೀಲಾ ಹೆಸರಲ್ಲಿ 25,35,37,740 ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ.
  • ಪತ್ನಿ ಶೀಲಾ ಹೆಸರಿನಲ್ಲಿ 7,10,80,556 ರೂ. ಮೌಲ್ಯದ ಚರಾಸ್ತಿ ಹೊಂದಿದ್ದು, ಶೇಷಗಿರಿಹಳ್ಳಿ, ಕೋತನಹಳ್ಳಿ, ಕೆಂಜಿಗರಹಳ್ಳಿ, ಕೇತೋಹಳ್ಳಿ, ಹಂಪಾಪುರ ಗ್ರಾಮದಲ್ಲಿ ಸಿ.ಪಿ.ಯೋಗೇಶ್ವರ್ ಸ್ಥಿರಾಸ್ತಿ ಹೊಂದಿದ್ದಾರೆ.

ಇದನ್ನೂ ಓದಿ: ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚಂದ ಎಂದ ಡಿಸಿಎಂ ಡಿಕೆ ಶಿವಕುಮಾರ್

  • ಯೋಗೇಶ್ವರ್ ಹೆಸರಲ್ಲಿ 22,02,47,157 ರೂ. ಮೌಲ್ಯದ ಮತ್ತು ಪತ್ನಿ ಶೀಲಾ ಹೆಸರಿನಲ್ಲಿ 2,14,52,740 ರೂ. ಮೌಲ್ಯದ ಕೃಷಿ ಭೂಮಿ ಹೊಂದಿದ್ದಾರೆ. ಶೀಲಾ ಹೆಸರಿನಲ್ಲಿ 6.65 ಕೋಟಿ ರೂ. ಮೌಲ್ಯದ ಕೃಷಿಯೇತರ ಭೂಮಿ ಇದೆ.
  • ಸಿ.ಪಿ.ಯೋಗೇಶ್ವರ್ ಹೆಸರಿನಲ್ಲಿ 2,37,62,000 ಕೋಟಿ ರೂ. ಮೌಲ್ಯದ ಮತ್ತು ಶೀಲಾ ಹೆಸರಿನಲ್ಲಿ 15.45 ಕೋಟಿ ರೂ. ಮೌಲ್ಯದ ಮನೆಗಳಿವೆ.
  • ಯೋಗೇಶ್ವರ್ ಹೆಸರಲ್ಲಿ 25,86,31,284 ರೂ. ಸಾಲವಿದ್ದು, ಶೀಲಾ ಹೆಸರಿನಲ್ಲಿ 3,41,42,184 ರೂ. ಸಾಲವಿದೆ.
  • 250 ಗ್ರಾಂ ಚಿನ್ನಾಭರಣವನ್ನು ಯೋಗೇಶ್ವರ್​ ಹೊಂದಿದ್ದು, ಶೀಲಾ ಬಳಿ 1 ಕೆಜಿ 500 ಗ್ರಾಂ ಚಿನ್ನಾಭರಣ, 20 ಕೆಜಿ ಬೆಳ್ಳಿ ಇದೆ. ಸಾರ್ವಜನಿಕರಿಂದ 1 ಕೆಜಿ ಚಿನ್ನ, 50 ಕೆಜಿ ಬೆಳ್ಳಿಯನ್ನು ಶೀಲಾ ಸ್ವೀಕರಿಸಿದ್ದಾರೆ.

ಇದನ್ನೂ ಓದಿ: ಚನ್ನಪಟ್ಟಣ ಕೈ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ: ದಳ ಕೋಟೆಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ

ಯೋಗೇಶ್ವರ್ ಕಾಂಗ್ರೆಸ್ ಸೇರಿದ ದಿನವೇ ಎಐಸಿಸಿ ಟಿಕೆಟ್ ಘೋಷಣೆ ಮಾಡಿದೆ. ಅದರ ಬೆನ್ನಲ್ಲೇ ಇಂದು  ಕಾಂಗ್ರೆಸ್ ಅಭ್ಯರ್ಥಿ ಆಗಿ ನಾಮಿನೇಷನ್ ಕೂಡ ಸಲ್ಲಿಸಲಿದ್ದಾರೆ. ಚನ್ನಪಟ್ಟಣ ಮಂಗಳವಾರ ಪೇಟೆಯಿಂದ ತಹಶೀಲ್ದಾರ್ ಕಚೇರಿ ವರೆಗೂ 1.5 ಕಿಲೋ ಮೀಟರ್​ ರೋಡ್​ ಶೋ ಮಾಡಲಾಗಿದೆ. ಈ ವೇಳೆ ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:38 pm, Thu, 24 October 24

ಕುಸಿದು ಬಿದ್ದ ಹನುಮಂತ; ಟಾಸ್ಕ್​ ವೇಳೆ ನಡೆಯಿತು ಅವಘಡ
ಕುಸಿದು ಬಿದ್ದ ಹನುಮಂತ; ಟಾಸ್ಕ್​ ವೇಳೆ ನಡೆಯಿತು ಅವಘಡ
ಅಪ್ಪನನ್ನು ಕೂರಿಸಿಕೊಂಡು ಸ್ಕೂಟಿ ಓಡಿಸಿದ ಬಾಲಕಿ; ವಿಡಿಯೋಗೆ ಭಾರೀ ವಿರೋಧ
ಅಪ್ಪನನ್ನು ಕೂರಿಸಿಕೊಂಡು ಸ್ಕೂಟಿ ಓಡಿಸಿದ ಬಾಲಕಿ; ವಿಡಿಯೋಗೆ ಭಾರೀ ವಿರೋಧ
ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ವೋಟು ಕೇಳುತ್ತೇನೆ: ಅನ್ನಪೂರ್ಣ
ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡು ವೋಟು ಕೇಳುತ್ತೇನೆ: ಅನ್ನಪೂರ್ಣ
ಕಾಡಿಬೇಡಿ ರೋಹಿತ್ ಶರ್ಮಾರನ್ನು ಒಪ್ಪಿಸಿ ಔಟ್ ಮಾಡಿದ ಸರ್ಫರಾಝ್ ಖಾನ್
ಕಾಡಿಬೇಡಿ ರೋಹಿತ್ ಶರ್ಮಾರನ್ನು ಒಪ್ಪಿಸಿ ಔಟ್ ಮಾಡಿದ ಸರ್ಫರಾಝ್ ಖಾನ್
ಜನ ಕುಮಾರಸ್ವಾಮಿ ಹೊರಗಿನವ ಅಂದುಕೊಂಡಿದ್ದರೆ 2 ಬಾರಿ ಗೆಲ್ಲಿಸುತ್ತಿದ್ವರೇ?
ಜನ ಕುಮಾರಸ್ವಾಮಿ ಹೊರಗಿನವ ಅಂದುಕೊಂಡಿದ್ದರೆ 2 ಬಾರಿ ಗೆಲ್ಲಿಸುತ್ತಿದ್ವರೇ?
ಬಾಬುಸಾಬ್​ ​ಪಾಳ್ಯ ದುರಂತ: ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿದ್ದರಾಮಯ್ಯ
ಬಾಬುಸಾಬ್​ ​ಪಾಳ್ಯ ದುರಂತ: ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿದ್ದರಾಮಯ್ಯ
ಬಿಗ್​ಬಾಸ್ ಮನೆಗೆ ಬಂದ ಸುದ್ದಿ ವಾಚಕಿ, ಮನೆ ಮಂದಿಗೆ ಕ್ಲಾಸ್
ಬಿಗ್​ಬಾಸ್ ಮನೆಗೆ ಬಂದ ಸುದ್ದಿ ವಾಚಕಿ, ಮನೆ ಮಂದಿಗೆ ಕ್ಲಾಸ್
ಬೆಂಗಳೂರು ನಗರ ಉಸ್ತುವಾರಿ ಸಚಿವ ಶಿವಕುಮಾರ್ ಚನ್ನಪಟ್ಟಣದಲ್ಲಿ ಬ್ಯೂಸಿ!
ಬೆಂಗಳೂರು ನಗರ ಉಸ್ತುವಾರಿ ಸಚಿವ ಶಿವಕುಮಾರ್ ಚನ್ನಪಟ್ಟಣದಲ್ಲಿ ಬ್ಯೂಸಿ!
ಹಾಸನಾಂಬಾ ಸನ್ನಿಧಾನದಲ್ಲಿ ಭರದ ಸಿದ್ಧತೆ
ಹಾಸನಾಂಬಾ ಸನ್ನಿಧಾನದಲ್ಲಿ ಭರದ ಸಿದ್ಧತೆ
ಬಿಬಿಎಂಪಿ ಭ್ರಷ್ಟ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದರೆ ಸಮಸ್ಯೆ ಕೊನೆಗೊಳ್ಳದು
ಬಿಬಿಎಂಪಿ ಭ್ರಷ್ಟ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದರೆ ಸಮಸ್ಯೆ ಕೊನೆಗೊಳ್ಳದು