ರಾಮನಗರ, ಅಕ್ಟೋಬರ್ 24: ದಳಪತಿಗಳ ಕೋಟೆಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. ಜಿಲ್ಲೆಯ ಚನ್ನಪಟ್ಟಣದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ (CP Yogeshwara) ಇಂದು ನಾಮಿನೇಷನ್ ಸಲ್ಲಿಸಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಕೂಡ ಉಪಸ್ಥಿತರಿದ್ದರು. ನಗದು, ಹೂಡಿಕೆ ಸೇರಿದಂತೆ 7,25,20,470 ರೂ. ಮೌಲ್ಯದ ಚರಾಸ್ತಿ ಹೊಂದಿರುವುದಾಗಿ ಸಿ.ಪಿ.ಯೋಗೇಶ್ವರ್ ಪ್ರಮಾಣ ಪತ್ರದಲ್ಲಿ ತಮ್ಮ ಆಸ್ತಿ ವಿವರ ನೀಡಿದ್ದಾರೆ.
ಇದನ್ನೂ ಓದಿ: ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚಂದ ಎಂದ ಡಿಸಿಎಂ ಡಿಕೆ ಶಿವಕುಮಾರ್
ಇದನ್ನೂ ಓದಿ: ಚನ್ನಪಟ್ಟಣ ಕೈ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ: ದಳ ಕೋಟೆಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ
ಯೋಗೇಶ್ವರ್ ಕಾಂಗ್ರೆಸ್ ಸೇರಿದ ದಿನವೇ ಎಐಸಿಸಿ ಟಿಕೆಟ್ ಘೋಷಣೆ ಮಾಡಿದೆ. ಅದರ ಬೆನ್ನಲ್ಲೇ ಇಂದು ಕಾಂಗ್ರೆಸ್ ಅಭ್ಯರ್ಥಿ ಆಗಿ ನಾಮಿನೇಷನ್ ಕೂಡ ಸಲ್ಲಿಸಲಿದ್ದಾರೆ. ಚನ್ನಪಟ್ಟಣ ಮಂಗಳವಾರ ಪೇಟೆಯಿಂದ ತಹಶೀಲ್ದಾರ್ ಕಚೇರಿ ವರೆಗೂ 1.5 ಕಿಲೋ ಮೀಟರ್ ರೋಡ್ ಶೋ ಮಾಡಲಾಗಿದೆ. ಈ ವೇಳೆ ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:38 pm, Thu, 24 October 24