AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ-ಜೆಡಿಎಸ್​ನಿಂದ ಮೈಸೂರು ಪಾದಯಾತ್ರೆ: ಎಲ್ಲಿಂದ, ಎಷ್ಟು ಗಂಟೆಗೆ ಆರಂಭ? ವಿವರ ನೀಡಿದ ವಿಜಯೇಂದ್ರ

ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ, ಮುಡಾ ನಿವೇಶನ ಹಗರಣ ಹಾಗೂ ಪರಿಶಿಷ್ಟರ ಉಪಯೋಜನೆ ಹಣ ದುರ್ಬಳಕೆ ಮುಂದಿಟ್ಟುಕೊಂಡು ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಹೋರಾಟ ನಡೆಸಿದ್ದ ಬಿಜೆಪಿ -ಜೆಡಿಎಸ್‌ ಪ್ರತಿಪಕ್ಷ ಮೈತ್ರಿಕೂಟ ಈಗ ಬಹಿರಂಗ ಹೋರಾಟಕ್ಕೆ ಆಗಸ್ಟ್‌ 3 ರಂದು ಮುಹೂರ್ತ ಫಿಕ್ಸ್‌ ಮಾಡಿದ್ದು, ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ತೀರ್ಮಾನಿಸಿದೆ. ಇನ್ನು ಪಾದಯಾತ್ರೆ ಬೆಂಗಳೂರಿನಿಂದ ಎಷ್ಟು ಗಂಟೆಗೆ? ಎಲ್ಲಿಂದ ಆರಂಭವಾಗಲಿದೆ? ಎನ್ನುವ ಸಂಪೂರ್ಣ ವಿವರವನ್ನು ಬಿವೈ ವಿಜಯೇಂದ್ರ ನೀಡಿದ್ದಾರೆ.

ಬಿಜೆಪಿ-ಜೆಡಿಎಸ್​ನಿಂದ ಮೈಸೂರು ಪಾದಯಾತ್ರೆ: ಎಲ್ಲಿಂದ, ಎಷ್ಟು ಗಂಟೆಗೆ ಆರಂಭ? ವಿವರ ನೀಡಿದ ವಿಜಯೇಂದ್ರ
ಬಿಜೆಪಿ ಪಾದಯಾತ್ರೆ
ಕಿರಣ್​ ಹನಿಯಡ್ಕ
| Edited By: |

Updated on: Jul 29, 2024 | 5:10 PM

Share

ಬೆಂಗಳೂರು, (ಜುಲೈ 29): ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ, ಮುಡಾ ನಿವೇಶನ ಹಗರಣ ಹಾಗೂ ಪರಿಶಿಷ್ಟರ ಉಪಯೋಜನೆ ಹಣ ದುರ್ಬಳಕೆ ಮುಂದಿಟ್ಟುಕೊಂಡು ಬಿಜೆಪಿ ಪಾದಯಾತ್ರೆ ನಡೆಸಲು ತೀರ್ಮಾನಿಸಿದೆ. ಇದೇ ಆಗಸ್ಟ್ 3ರಂದು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡಲು ನಿರ್ಧರಿಸಿದ್ದು, ಆಗಸ್ಟ್ 10ರಂದು ಮೈಸೂರಿನಲ್ಲಿಅಂತ್ಯಗೊಳ್ಳಲಿದೆ. ಈ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಇಂದು (ಜುಲೈ 29) ಪಕ್ಷದ ನಾಯಕರ ಸಭೆ ನಡೆಸಿ ಮಹತ್ವದ ಚರ್ಚೆ ನಡೆಸಿದರು. ಅಲ್ಲದೇ ಪಾದಯಾತ್ರೆಗೆ ಸಹಕಾರ ಪಡೆದುಕೊಂಡರು.

ಇನ್ನು ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಬಿಜೆಪಿ-ಜೆಡಿಎಸ್ ಸಮಾಲೋಚಿಸಿ ಆಗಸ್ಟ್ 03ರಂದು ಮೈಸೂರಿಗೆ ಪಾದಯಾತ್ರೆ ಮಾಡಿಡುತ್ತೇವೆ. ಶನಿವಾರ ಬೆಳಗ್ಗೆ 8.30ಕ್ಕೆ ಕೆಂಗೇರಿಯ ಕೆಂಪಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪಾದಯಾತ್ರೆ ಆರಂಭವಾಗಲಿದೆ. ಇಂದು ಸಭೆ ನಡೆಸಿ ಎಲ್ಲರ ಸಹಕಾರ ಪಡೆದಿದ್ದೇವೆ. ಮಾಜಿ ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಹೆಚ್.ಡಿ. ಕುಮಾರಸ್ವಾಮಿ, ವಿಪಕ್ಷ ನಾಯಕರಾದ ಆರ್‌. ಅಶೋಕ್, ಛಲವಾದಿ ನಾರಾಯಣಸ್ವಾಮಿ ಉಪಸ್ಥಿತಿಯಲ್ಲಿ ಪಾದಯಾತ್ರೆಗೆ ಚಾಲನೆ ಸಿಗಲಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ ಪಾದಯಾತ್ರೆ: ರೂಪುರೇಷ ಸಿದ್ಧ, ಇಲ್ಲಿದೆ ರೂಟ್​​ಮ್ಯಾಪ್

ಕೆಂಗೇರಿಯ ಕೆಂಪಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪಾದಯಾತ್ರೆ ಆರಂಭವಾಗಲಿದ್ದು, ಪ್ರತಿನಿತ್ಯ 20 ಕಿ.ಮೀಟರ್​ನಷ್ಟು ಪಾದಯಾತ್ರೆ ನಡೆಯಲಿದೆ. ಮೊದಲ ದಿನ 8 ವಿಧಾನಸಭೆ ಕ್ಷೇತ್ರಗಳ ಕಾರ್ಯಕರ್ತರು ಭಾಗವಹಿಸುತ್ತಾರೆ. 224 ವಿಧಾನಸಭೆ ಕ್ಷೇತ್ರಗಳ ಕಾರ್ಯಕರ್ತರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ ವಿಜಯೇಂದ್ರ, ಮೊದಲ ದಿನ 8 ವಿಧಾನಸಭೆ ಕ್ಷೇತ್ರಗಳ ಕಾರ್ಯಕರ್ತರು ಭಾಗವಹಿಸುತ್ತಾರೆ. ಒಂದೊಂದು ದಿನ ಒಂದೊಂದು ಮೋರ್ಛಾ ಕಾರ್ಯಕರ್ತರು ಭಾಗವಹಿಸುತ್ತಾರೆ. ಬೆಳಗ್ಗಿನಿಂದ ಮಧ್ಯಾಹ್ನ ಒಂದು ತಂಡ, ಮಧ್ಯಾಹ್ನದಿಂದ ಸಂಜೆಯವರೆಗೆ ಮತ್ತೊಂದು ತಂಡ ಭಾಗವಹಿಸುತ್ತದೆ. ಪಾದಯಾತ್ರೆ ಯಶಸ್ವಿಗೆ ಬಿಜೆಪಿ ಮತ್ತು ಜೆಡಿಎಸ್ ನಿಂದ ಸಮನ್ವಯ ತಂಡ ಕೂಡಾ ರಚಿಸುತ್ತೇವೆ. ಇನ್ನು ಪಾದಯಾತ್ರೆ ಆಗಸ್ಟ್ 10 ರಂದು ಮುಕ್ತಾಯ ಆಗಲಿದ್ದು, ಸಮಾರೋಪ ಸಮಾವೇಶದಲ್ಲಿ ರಾಷ್ಟ್ರೀಯ ನಾಯಕರು ಪಾಲ್ಗೊಳ್ಳುತ್ತಾರೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!