AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ಧಗಂಗಾ ಶ್ರೀಗಳ ಜೊತೆ ಬಿ ವೈ ವಿಜಯೇಂದ್ರ ಗೌಪ್ಯ ಚರ್ಚೆ; ರಾಜಕೀಯ ವಲಯದಲ್ಲಿ ಹೆಚ್ಚಿದ ಕುತೂಹಲ

ಡಾ. ಶಿವಕುಮಾರ ಸ್ವಾಮೀಜಿಗಳ ಗದ್ದುಗೆ ದರ್ಶನದ ಬಳಿಕ ಚರ್ಚೆ ನಡೆಸಿದ್ದಾರೆ. ಬಿಜೆಪಿ ನಾಯಕರು, ಶಾಸಕರಿಗೂ ಮಾಹಿತಿ ನೀಡದೆ ಭೇಟಿ ನೀಡಿದ್ದಾರೆ. ಚಿತ್ರದುರ್ಗದ ವಿವಿಧ ಮಠಗಳಿಗೆ ಭೇಟಿ ನೀಡಿರುವ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ.

ಸಿದ್ಧಗಂಗಾ ಶ್ರೀಗಳ ಜೊತೆ ಬಿ ವೈ ವಿಜಯೇಂದ್ರ ಗೌಪ್ಯ ಚರ್ಚೆ; ರಾಜಕೀಯ ವಲಯದಲ್ಲಿ ಹೆಚ್ಚಿದ ಕುತೂಹಲ
ಸಿದ್ಧಗಂಗಾ ಮಠಕ್ಕೆ ವಿಜಯೇಂದ್ರ ಭೇಟಿ
TV9 Web
| Edited By: |

Updated on:Jun 09, 2021 | 10:44 PM

Share

ತುಮಕೂರು: ಸಿದ್ಧಗಂಗಾ ಶ್ರೀಗಳ ಜೊತೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಗೌಪ್ಯ ಚರ್ಚೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಸ್ವಾಮೀಜಿ ಜೊತೆ ವಿಜಯೇಂದ್ರ ಗೌಪ್ಯ ಚರ್ಚೆ ನಡೆಸಿದ್ದಾರೆ. ಸುಮಾರು ಅರ್ಧ ಗಂಟೆ ಕಾಲ ವಿಜಯೇಂದ್ರ ಮಾತುಕತೆ ನಡೆಸಿದ್ದಾರೆ.

ಡಾ. ಶಿವಕುಮಾರ ಸ್ವಾಮೀಜಿಗಳ ಗದ್ದುಗೆ ದರ್ಶನದ ಬಳಿಕ ಚರ್ಚೆ ನಡೆಸಿದ್ದಾರೆ. ಬಿಜೆಪಿ ನಾಯಕರು, ಶಾಸಕರಿಗೂ ಮಾಹಿತಿ ನೀಡದೆ ಭೇಟಿ ನೀಡಿದ್ದಾರೆ. ಚಿತ್ರದುರ್ಗದ ವಿವಿಧ ಮಠಗಳಿಗೆ ಭೇಟಿ ನೀಡಿರುವ ಬಗ್ಗೆಯೂ ಮಾಹಿತಿ ಲಭ್ಯವಾಗಿದೆ. ವಿಜಯೇಂದ್ರ, ಸ್ಥಳಿಯ ನಾಯಕರಿಗೂ ಹಾಗೂ ಮಾಧ್ಯಮದವರಿಗೂ ಮಾಹಿತಿ ನೀಡದೇ ಭೇಟಿ ನೀಡಿ ಗೌಪ್ಯ ಮಾತುಕತೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಬಿಜೆಪಿ ಸರ್ಕಾರ ಪತನವಾಗಲಿದೆ ಈ ಮಧ್ಯೆ, ಶಿವಮೊಗ್ಗದಲ್ಲಿ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್​ ರಾಜ್ಯದಲ್ಲಿ ಇನ್ನಾರು ತಿಂಗಳಲ್ಲಿ ಬಿಜೆಪಿ ಸರ್ಕಾರ ಪತನವಾಗಲಿದೆ ಎಂಬ ಹೇಳಿಕೆ ನೀಡಿದ್ದಾರೆ. 2022ಕ್ಕೆ ಕರ್ನಾಟಕದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ರಾಜ್ಯ ಬಿಜೆಪಿ ಘಟಕದಲ್ಲಿ ಒಳಜಗಳ ಬಹಳ ಜಾಸ್ತಿಯಾಗಿದೆ. ಮುಖ್ಯಮಂತ್ರಿ ಪುತ್ರ ಬಿ.ವೈ. ವಿಜಯೇಂದ್ರಗೆ ಉಪಮುಖ್ಯಮಂತ್ರಿ ಆಗುವ ಆಸೆಯಿದೆ. ವಿಜಯೇಂದ್ರ ಡಿಸಿಎಂ ಆಗಲು ಇನ್ನಿಲ್ಲದ ಪ್ರಯತ್ನ ಮಾಡ್ತಿದ್ದಾರೆ ಎಂದು ಶಿವಮೊಗ್ಗದಲ್ಲಿ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್​ ಹೇಳಿದ್ದಾರೆ.

ಅರುಣ್ ಸಿಂಗ್ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ ರಾಜ್ಯ ಭಾರತೀಯ ಜನತಾ ಪಾರ್ಟಿಯಲ್ಲಿನ ಇತ್ತೀಚಿನ ಕೆಲವು ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಮುಂದಿನ ವಾರ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಮುಖ್ಯಮಂತ್ರಿ ಬದಲಾವಣೆಯ ವಿಚಾರವಾಗಿ ಬಹಳಷ್ಟು ಚರ್ಚೆಗಳು ನಡೆದಿದ್ದವು. ಸಿ.ಪಿ. ಯೋಗೇಶ್ವರ್ ಮುಂತಾದ ಸಚಿವರು ದೆಹಲಿಗೂ ಭೇಟಿ ಕೊಟ್ಟು ಬಂದಿದ್ದರು. ವಿಜಯೇಂದ್ರ ಕೂಡ ದೆಹಲಿಗೆ ಹೋಗಿ ಬಂದಿದ್ದರು. ಸಿ.ಟಿ. ರವಿ, ರೇಣುಕಾಚಾರ್ಯ, ಎಚ್. ವಿಶ್ವನಾಥ್, ಆರ್. ಅಶೋಕ್ ಸಹಿತ ಹಲವು ಮುಖಂಡರು ಕುತೂಹಲಕಾರಿ ಹೇಳಿಕೆಗಳನ್ನು ನೀಡಿದ್ದರು.

ಇದನ್ನೂ ಓದಿ: ಯಾವುದು ಸರಿ ಯಾವುದು ತಪ್ಪು ಎಂಬುದನ್ನು ಕೇಂದ್ರ ನಾಯಕರು ನಿರ್ಧರಿಸುತ್ತಾರೆ, ಮಠಾಧೀಶರಲ್ಲ: ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ

ಇಂಧನ ದರ ಏರಿಕೆ ವಿರುದ್ಧ ಕಾಂಗ್ರೆಸ್ ಸಮರ; 5 ದಿನಗಳ ಕಾಲ ‘100 ನಾಟೌಟ್’ ಕ್ಯಾಂಪೇನ್: ಡಿ ಕೆ ಶಿವಕುಮಾರ್ ಘೋಷಣೆ

Published On - 9:46 pm, Wed, 9 June 21

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ