AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರೇಂದ್ರ ಮೋದಿ, ಬಿ ಎಸ್ ಯಡಿಯೂರಪ್ಪ ಭೇಟಿಯನ್ನು ಹಾಲು ಜೇನಿನ ಸಂಗಮ ಎಂದು ವರ್ಣಿಸಿದ ಬಿ ವೈ ವಿಜಯೇಂದ್ರ

ಸದಾ ಸಕರಾತ್ಮಕ ಚಿಂತನೆ, ಯೋಜನೆ, ಜನ ಕಲ್ಯಾಣ ಕಾರ್ಯಕ್ರಮ ರೂಪಿಸುವ ಮಹಾ ಜೋಡಿ. ಈ ಮಹಾ ಜೋಡಿಯ ನಗುವಿನಲೆಯ ಮೋಡಿ ಎಂದು ಬಿ.ವೈ. ವಿಜಯೇಂದ್ರ ಟ್ವೀಟ್​ ಮಾಡಿದ್ದಾರೆ.

ನರೇಂದ್ರ ಮೋದಿ, ಬಿ ಎಸ್ ಯಡಿಯೂರಪ್ಪ ಭೇಟಿಯನ್ನು ಹಾಲು ಜೇನಿನ ಸಂಗಮ ಎಂದು ವರ್ಣಿಸಿದ ಬಿ ವೈ ವಿಜಯೇಂದ್ರ
ಬಿ.ಎಸ್. ಯಡಿಯೂರಪ್ಪ, ನರೇಂದ್ರ ಮೋದಿ
TV9 Web
| Edited By: |

Updated on: Jul 16, 2021 | 10:58 PM

Share

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು (ಜುಲೈ 16) ದೆಹಲಿಯಲ್ಲಿ ಭೇಟಿಯಾಗಿದ್ದಾರೆ. ಇವರಿಬ್ಬರ ಭೇಟಿಯನ್ನು ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಟ್ವೀಟ್ ಮಾಡುವ ಮೂಲಕ ಬಣ್ಣಿಸಿದ್ದಾರೆ. ಟ್ವಿಟರ್​ನಲ್ಲಿ ಯಡಿಯೂರಪ್ಪ ಹಾಗೂ ಮೋದಿ ನಗುವಿನ ಪೋಸ್​​​ಗೆ ಬಿ.ವೈ. ವಿಜಯೇಂದ್ರ ವರ್ಣನೆ ಮಾಡಿದ್ದಾರೆ.

ಸದಾ ಸಕರಾತ್ಮಕ ಚಿಂತನೆ, ಯೋಜನೆ, ಜನ ಕಲ್ಯಾಣ ಕಾರ್ಯಕ್ರಮ ರೂಪಿಸುವ ಮಹಾ ಜೋಡಿ. ಈ ಮಹಾ ಜೋಡಿಯ ನಗುವಿನಲೆಯ ಮೋಡಿ ಎಂದು ಬಿ.ವೈ. ವಿಜಯೇಂದ್ರ ಟ್ವೀಟ್​ ಮಾಡಿದ್ದಾರೆ. ಇಂದು ಕರ್ನಾಟಕದ ಪಾಲಿಗೆ ಹಾಲು- ಜೇನಿನ ಸಂಗಮದ ಸವಿಯುಣಿಸಿದ ಕ್ಷಣಗಳೆನಿಸಿವೆ ಎಂದು ಬರೆದುಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಭೇಟಿ ಮಾಡಿದ್ದಾರೆ. ಕರ್ನಾಟಕ ಭವನದಿಂದ ತೆರಳಿದ ಯಡಿಯೂರಪ್ಪ ದೆಹಲಿ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸದಲ್ಲಿ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಪ್ರಧಾನಿ ಮೋದಿ ಭೇಟಿಯಾಗಿ ನಿವಾಸದಿಂದ ಹೊರಬಂದ ಯಡಿಯೂರಪ್ಪ ಕರ್ನಾಟಕ ಭವನಕ್ಕೆ ಹಿಂದಿರುಗಿದ್ದಾರೆ. ಮೋದಿ ಜತೆ  ಯಡಿಯೂರಪ್ಪ 10 ನಿಮಿಷ ಚರ್ಚೆ ನಡೆಸಿದ್ದಾರೆ. ಭೇಟಿಯ ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ನನಗೆ ಗೊತ್ತಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಅವಕಾಶ ಕೇಳಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮೇಕೆದಾಟು ಯೋಜನೆ ಕುರಿತು ಚರ್ಚಿಸುವುದಾಗಿ ಯಡಿಯೂರಪ್ಪ ಹೇಳಿದ್ದರು. ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಯಾವುದೇ ತೊಂದರೆಯೂ ಇಲ್ಲ. ಆದರೂ ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆಯನ್ನು ವಿರೋಧಿಸುತ್ತಿದೆ ಎಂದು ತಿಳಿದಿಲ್ಲ. ಮೇಕೆದಾಟು ಯೋಜನೆ ಜಾರಿಗೆ ನಮಗೆ ಅವಕಾಶ ಇದೆ. ನಾವು ಮೇಕೆದಾಟು ಯೋಜನೆಯನ್ನು ಜಾರಿ ಮಾಡಿಯೇ ಮಾಡುತ್ತೇವೆ. ಮೇಕೆದಾಟು ಯೋಜನೆ ಆರಂಭಕ್ಕೆ ಶಕ್ತಿ ಮೀರಿ ಪ್ರಯತ್ನಿಸುತ್ತೇನೆ ಎಂದು ದೆಹಲಿಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಆರು ತಿಂಗಳ ಬಳಿಕ ದೆಹಲಿಗೆ ಬರುತ್ತಿದ್ದೇನೆ. ರಾಜ್ಯದ ಅಭಿವೃದ್ಧಿ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಸಂಪುಟದ ಹೊಸ ಸಚಿವರನ್ನು ಭೇಟಿ ಮಾಡುತ್ತೇನೆ. ಜತೆಗೆ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್​ರನ್ನು ಭೇಟಿ ಮಾಡುತ್ತೇನೆ ಎಂದು ಅವರು ಇದೇ ವೇಳೆ ತಿಳಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿ ಬಳಿ ಕರ್ನಾಟಕದ ಹಲವು ಯೋಜನೆಗಳಿಗೆ ಕೇಂದ್ರದ ನೆರವು ಕೋರಿದ ಯಡಿಯೂರಪ್ಪ

Mekedatu Project: ಮೇಕೆದಾಟು ಯೋಜನೆಯನ್ನು ಜಾರಿ ಮಾಡಿಯೇ ಮಾಡುತ್ತೇವೆ; ದೆಹಲಿಯಲ್ಲಿ ಸಿಎಂ ಯಡಿಯೂರಪ್ಪ ಅಚಲ ನುಡಿ

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ