AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kambala Record ಕಂಬಳದಲ್ಲಿ ಹೊಸ ದಾಖಲೆ: ಶ್ರೀನಿವಾಸ್ ಗೌಡರ ದಾಖಲೆ ಮುರಿದ ಬೈಂದೂರು ವಿಶ್ವನಾಥ್​

Kambala Record ಕರಾವಳಿಯ ಜನಪದ ಕ್ರೀಡೆ ಕಂಬಳದಲ್ಲಿ ಹೊಸ ದಾಖಲೆಯಾಗಿದ್ದು, ಬೈಂದೂರಿನ‌ ವಿಶ್ವನಾಥ್ ಓಡಿಸಿದ ಕೋಣಗಳು 9.15 ಸೆಕೆಂಡ್​ಗಳಲ್ಲಿ 100 ಮೀಟರ್​ ಓಡಿ ಹೊಸ ದಾಖಲೆ ಸೃಷ್ಟಿಸಿದೆ.

Kambala Record ಕಂಬಳದಲ್ಲಿ ಹೊಸ ದಾಖಲೆ: ಶ್ರೀನಿವಾಸ್ ಗೌಡರ ದಾಖಲೆ ಮುರಿದ ಬೈಂದೂರು ವಿಶ್ವನಾಥ್​
ಕರಾವಳಿಯ ಜನಪದ ಕ್ರೀಡೆ ಕಂಬಳದಲ್ಲಿ ಹೊಸ ದಾಖಲೆ ಸೃಷ್ಟಿಸಿದ ಬೈಂದೂರು ವಿಶ್ವನಾಥ್
shruti hegde
| Edited By: |

Updated on:Jun 23, 2021 | 1:34 PM

Share

ಮಂಗಳೂರು: ಕರಾವಳಿಯ ಜನಪದ ಕ್ರೀಡೆ ಕಂಬಳದಲ್ಲಿ ಹೊಸ ದಾಖಲೆ ಸೃಷ್ಟಿಯಾಗಿದೆ. ಬೈಂದೂರಿನ‌ ವಿಶ್ವನಾಥ್ ಓಡಿಸಿದ ಕೋಣಗಳು 9.15 ಸೆಕೆಂಡ್​ಗಳಲ್ಲಿ 100 ಮೀಟರ್​ ಓಡಿ ಹೊಸ ದಾಖಲೆ ಸೃಷ್ಟಿಸಿವೆ.

ಮಂಗಳೂರಿನ ಕಿನ್ನಿಗೋಳಿ ಸಮೀಪದ ಐಕಳದಲ್ಲಿ ಕಂಬಳ ಏರ್ಪಡಿಸಲಾಗಿತ್ತು. ಬೈಂದೂರಿನ‌ ವಿಶ್ವನಾಥ್ ಓಡಿಸಿದ ಕೋಣಗಳು 9.15 ಸೆಕೆಂಡ್​ಗಳಲ್ಲಿ 100 ಮೀಟರ್​ ಓಡಿವೆ. ಕಂಬಳದ ಉಸೇನ್ ಬೋಲ್ಟ್ ಎಂದು ಖ್ಯಾತರಾಗಿದ್ದ ಶ್ರೀನಿವಾಸ್ ಗೌಡರು ಕಳೆದ ವರ್ಷ 9.55 ಸೆಕೆಂಡ್​ನಲ್ಲಿ ದಾಖಲೆ ಮಾಡಿದ್ದರು. ಈ ಬಾರಿ ವಿಶ್ವನಾಥ್,​ ಶ್ರೀನಿವಾಸ​ ಗೌಡರ ದಾಖಲೆ ಮುರಿದು ಹೊಸ ದಾಖಲೆ ಸೃಷ್ಟಿಸಿದ್ದಾರೆ.

ಕಂಬಳ ಕರಾವಳಿ ಕರ್ನಾಟಕದ ಒಂದು ಜಾನಪದ ಕ್ರೀಡೆ. ದಷ್ಟಪುಷ್ಟವಾಗಿ ಆರೈಕೆ ಮಾಡಿ ಸಾಕಿ, ಬೆಳೆಸಿದ ಕೋಣವನ್ನು ಕ್ರೀಡೆಗಾಗಿ ಸಿದ್ಧಗೊಳಿಸಿರುತ್ತಾರೆ. ಈ ಕೋಣಗಳನ್ನು ಮಣ್ಣಿನ ಗದ್ದೆಯಲ್ಲಿ ಓಡಿಸುವ ಸ್ಪರ್ಧೆಯೇ ಕಂಬಳ. ಹಗಲಿರುಳು ದುಡಿದ ರೈತರು ಮನರಂಜನೆಗಾಗಿ ಮೊದಲಿಗೆ ಪ್ರಾರಂಭಿಸಿದ ಸ್ಪರ್ಧೆ ಇದು. ನಂತರ ಜಾನಪದ ಕ್ರೀಡೆಯಾಗಿ ಜನಪ್ರಿಯವಾಗಿದೆ. ಸ್ಪರ್ಧೆಯಲ್ಲಿ ಓಡುವ ಕೋಣಗಳ ಜೊತೆಗೆ ಓಡಿಸುವ ಸಾರಥಿಯ ಪಾತ್ರವೂ ಮಹತ್ವದ್ದಾಗಿದೆ.

Published On - 4:10 pm, Sun, 7 February 21

‘ದೊಡ್ಮನೆ ಹಬ್ಬ’ದಲ್ಲಿ ಗಾನ ಬಜಾನ ತಂಡದ ಟ್ರೋಲ್ ಸಾಂಗ್
‘ದೊಡ್ಮನೆ ಹಬ್ಬ’ದಲ್ಲಿ ಗಾನ ಬಜಾನ ತಂಡದ ಟ್ರೋಲ್ ಸಾಂಗ್
ಹಂಪಿ ಉತ್ಸವದಲ್ಲಿ ಡ್ಯಾನ್ಸ್ ಮಾಡಿ ರಂಜಿಸಿದ ಶಿವರಾಜ್​​ಕುಮಾರ್
ಹಂಪಿ ಉತ್ಸವದಲ್ಲಿ ಡ್ಯಾನ್ಸ್ ಮಾಡಿ ರಂಜಿಸಿದ ಶಿವರಾಜ್​​ಕುಮಾರ್
ಶಿವರಾತ್ರಿಗೆ ಮಾದಪ್ಪನ ಸನ್ನಿಧಿಗೆ ತೆರಳುವ ಭಕ್ತರೇ ಎಚ್ಚರ
ಶಿವರಾತ್ರಿಗೆ ಮಾದಪ್ಪನ ಸನ್ನಿಧಿಗೆ ತೆರಳುವ ಭಕ್ತರೇ ಎಚ್ಚರ
ಧನುಸ್ಸು ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಧನುಸ್ಸು ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ವೃಶ್ಚಿಕ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ವೃಶ್ಚಿಕ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಾವಿರಾರು ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ
ಸಾವಿರಾರು ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ
ತುಲಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ತುಲಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮೈಸೂರು ಅರಮನೆ ತ್ರಿನೇಶ್ವರನಿಗೆ 11 ಕೆಜಿಯ ಚಿನ್ನದ ಮುಖವಾಡ! ಏನಿದರ ವಿಶೇಷ?
ಮೈಸೂರು ಅರಮನೆ ತ್ರಿನೇಶ್ವರನಿಗೆ 11 ಕೆಜಿಯ ಚಿನ್ನದ ಮುಖವಾಡ! ಏನಿದರ ವಿಶೇಷ?
ನಿರ್ಬಂಧದ ಮದ್ಯೆಯೂ ನಂದಿ ಗಿರಿಧಾಮಕ್ಕೆ ಬಂದ ಪ್ರೇಮಿಗಳು, ನಿರಾಸೆಯಿಂದ ವಾಪಸ್
ನಿರ್ಬಂಧದ ಮದ್ಯೆಯೂ ನಂದಿ ಗಿರಿಧಾಮಕ್ಕೆ ಬಂದ ಪ್ರೇಮಿಗಳು, ನಿರಾಸೆಯಿಂದ ವಾಪಸ್
ಬಿಲ್ವಪತ್ರೆಯ ಮಹತ್ವ, ಶಿವ ಬಿಲ್ವಪ್ರಿಯ ಯಾಕೆ?
ಬಿಲ್ವಪತ್ರೆಯ ಮಹತ್ವ, ಶಿವ ಬಿಲ್ವಪ್ರಿಯ ಯಾಕೆ?