ಸಚಿವ ಭೈರತಿ ಸುರೇಶ್ ಫೇಸ್ಬುಕ್ ಖಾತೆಯಲ್ಲಿ ಅವಾಚ್ಯ ಶಬ್ದಗಳ ಕಮೆಂಟ್: ವೈರಲ್ ಆದ ಬೆನ್ನಲ್ಲೇ ಹೊರಬಂತು ಸತ್ಯ
ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಫೇಸ್ಬುಕ್ನಲ್ಲಿ ವ್ಯಕ್ತಿಯೋರ್ವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾದ ಫೇಸ್ಬುಕ್ ಕಮೆಂಟ್ ನ ಸ್ಕ್ರೀನ್ಶಾಟ್ ಫೋಟೋಗಳು ವೈರಲ್ ಆಗಿವೆ. ಇದನ್ನು ಅಲ್ಲಗಳೆದಿರುವ ಸಚಿವರು ತಮ್ಮ ಖಾತೆ ಹ್ಯಾಕ್ ಆಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಘಟನೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗಳು ನಡೆಯುತ್ತಿವೆ.

ಬೆಂಗಳೂರು, ಮಾರ್ಚ್ 25: ಫೇಸ್ಬುಕ್ನಲ್ಲಿ (Facebook) ತಮ್ಮ ಪೋಸ್ಟ್ಗೆ ಕಮೆಂಟ್ ಮಾಡಿದ್ದ ವ್ಯಕ್ತಿಗೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ (Byrathi Suresh) ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಮತ್ತು ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಉಚಿತ ನೀರು ಪೂರೈಸುವ ನೀರಿನ ಟ್ಯಾಂಕರ್ಗಳಿಗೆ ಚಾಲನೆ ನೀಡಿರುವ ಬಗ್ಗೆ ಸಚಿವ ಬೈರತಿ ಸುರೇಶ್ ಫೇಸ್ಬುಕ್ ಪೋಸ್ಟ್ ಮಾಡಿದ್ದರು.
ಭೈರತಿ ಸುರೇಶ್ ಪೋಸ್ಟ್ಗೆ ಕಾರ್ತಿಕ್ ಎಂಬ ವ್ಯಕ್ತಿ ಕಮೆಂಟ್ ಹಾಕಿದ್ದು “ಇದೆಲ್ಲ ನಾಟಕ, ಜನ ಮೂರ್ಖರೆಂದು” ಕಮೆಂಟ್ ಮಾಡಿದ್ದರು. ಕಾರ್ತಿಕ್ ಅವರ ಈ ಕಮೆಂಟ್ ನೋಡಿ ಕೆರಳಿದ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, “ನಿನ್ನ ಅಡ್ರೆಸ್ ಕೊಡು ಹೊಡೆದು ಹಾಕ್ತೀನಿ. ನಿನ್ನ ಅಪ್ಪನಿಗೆ ಹುಟ್ಟಿದ್ರೆ ಅಡ್ರೆಸ್ ಹಾಕು, ಸೂ…” ಎಂದೆಲ್ಲಾ ಭೈರತಿ ಸುರೇಶ್ ಕಮೆಂಟ್ ಮಾಡಿದ್ದಾರೆ ಎನ್ನಲಾದ ಫೋಟೋಗಳು ವೈರಲ್ ಆಗುತ್ತಿವೆ.
ಈ ಫೇಸ್ಬುಕ್ ಕಮೆಂಟ್ಗಳನ್ನು ಯಾರೋ ಸ್ಕ್ರೀನ್ಶಾಟ್ ತೆಗೆದಿದ್ದಾರೆ. ಈ ಸ್ಕ್ರೀನ್ಶಾಟ್ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಎಲ್ಲಡೆ ವೈರಲ್ ಆಗುತ್ತಿವೆ. ಫೋಟೋಗಳು ವೈರಲ್ ಆಗುತ್ತಿದ್ದಂತೆ ಕಮೆಂಟ್ಗಳನ್ನು ಡಿಲೀಟ್ ಮಾಡಲಾಗಿದೆ.
ಫೇಸ್ಬುಕ್ ಪೋಸ್ಟ್
ಇದನ್ನೂ ಓದಿ: ಮುಡಾ ಪ್ರಕರಣದಲ್ಲಿ ಸಿಎಂ ಅವರ ಪತ್ನಿಯಾಗಲೀ ನಾನಾಗಲೀ ತಪ್ಪು ಮಾಡದ ಕಾರಣ ಹೆದರಲ್ಲ: ಭೈರತಿ ಸುರೇಶ್
ಸಚಿವ ಭೈರತಿ ಸುರೇಶ್ ಸ್ಪಷ್ಟನೆ
ನನ್ನ ಫೇಸ್ಬುಕ್ ಖಾತೆ ಹ್ಯಾಕ್ ಆಗಿದೆ. ಈ ರೀತಿಯ ಮೆಸೇಜ್ಗಳಿಗೆ ಯಾರು ಕೂಡ ಅನ್ಯತಾ ಭಾವಿಸಬೇಡಿ ಎಂದು ಸಾಮಾಜಿಕ ಜಾಲತಾಣದ ಮೂಲಕ ಭೈರತಿ ಸುರೇಶ್ ಸ್ಪಷ್ಟನೆ ನೀಡಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:27 am, Tue, 25 March 25