AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಭೈರತಿ ಸುರೇಶ್ ಫೇಸ್​ಬುಕ್ ಖಾತೆಯಲ್ಲಿ ಅವಾಚ್ಯ ಶಬ್ದಗಳ ಕಮೆಂಟ್: ವೈರಲ್ ಆದ ಬೆನ್ನಲ್ಲೇ ಹೊರಬಂತು ಸತ್ಯ

ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಫೇಸ್‌ಬುಕ್‌ನಲ್ಲಿ ವ್ಯಕ್ತಿಯೋರ್ವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾದ ಫೇಸ್​​ಬುಕ್​ ಕಮೆಂಟ್​​ ನ​ ಸ್ಕ್ರೀನ್‌ಶಾಟ್ ಫೋಟೋಗಳು ವೈರಲ್ ಆಗಿವೆ. ಇದನ್ನು ಅಲ್ಲಗಳೆದಿರುವ ಸಚಿವರು ತಮ್ಮ ಖಾತೆ ಹ್ಯಾಕ್ ಆಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಘಟನೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗಳು ನಡೆಯುತ್ತಿವೆ.

ಸಚಿವ ಭೈರತಿ ಸುರೇಶ್ ಫೇಸ್​ಬುಕ್ ಖಾತೆಯಲ್ಲಿ ಅವಾಚ್ಯ ಶಬ್ದಗಳ ಕಮೆಂಟ್: ವೈರಲ್ ಆದ ಬೆನ್ನಲ್ಲೇ ಹೊರಬಂತು ಸತ್ಯ
ಭೈರತಿ ಸುರೇಶ್
ಪ್ರಸನ್ನ ಗಾಂವ್ಕರ್​
| Edited By: ವಿವೇಕ ಬಿರಾದಾರ|

Updated on:Mar 25, 2025 | 12:26 PM

Share

ಬೆಂಗಳೂರು, ಮಾರ್ಚ್​ 25: ಫೇಸ್‌ಬುಕ್​​ನಲ್ಲಿ (Facebook) ತಮ್ಮ ಪೋಸ್ಟ್​ಗೆ ಕಮೆಂಟ್​ ಮಾಡಿದ್ದ ವ್ಯಕ್ತಿಗೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ (Byrathi Suresh) ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಮತ್ತು ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಉಚಿತ ನೀರು ಪೂರೈಸುವ ನೀರಿನ ಟ್ಯಾಂಕ‌ರ್​ಗಳಿಗೆ ಚಾಲನೆ ನೀಡಿರುವ ಬಗ್ಗೆ ಸಚಿವ ಬೈರತಿ ಸುರೇಶ್ ಫೇಸ್​ಬುಕ್​ ಪೋಸ್ಟ್ ಮಾಡಿದ್ದರು.

ಭೈರತಿ ಸುರೇಶ್ ಪೋಸ್ಟ್​ಗೆ ಕಾರ್ತಿಕ್ ಎಂಬ ವ್ಯಕ್ತಿ ಕಮೆಂಟ್ ಹಾಕಿದ್ದು “ಇದೆಲ್ಲ ನಾಟಕ, ಜನ ಮೂರ್ಖರೆಂದು” ಕಮೆಂಟ್ ಮಾಡಿದ್ದರು. ಕಾರ್ತಿಕ್​ ಅವರ ಈ ಕಮೆಂಟ್​ ನೋಡಿ ಕೆರಳಿದ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, “ನಿನ್ನ ಅಡ್ರೆಸ್ ಕೊಡು ಹೊಡೆದು ಹಾಕ್ತೀನಿ. ನಿನ್ನ ಅಪ್ಪನಿಗೆ ಹುಟ್ಟಿದ್ರೆ ಅಡ್ರೆಸ್ ಹಾಕು, ಸೂ…” ಎಂದೆಲ್ಲಾ ಭೈರತಿ ಸುರೇಶ್ ಕಮೆಂಟ್ ಮಾಡಿದ್ದಾರೆ ಎನ್ನಲಾದ ಫೋಟೋಗಳು ವೈರಲ್​ ಆಗುತ್ತಿವೆ.

ಈ ಫೇಸ್​ಬುಕ್​ ​ಕಮೆಂಟ್​ಗಳನ್ನು​ ಯಾರೋ ಸ್ಕ್ರೀನ್​ಶಾಟ್​ ತೆಗೆದಿದ್ದಾರೆ. ಈ ಸ್ಕ್ರೀನ್​ಶಾಟ್​ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಎಲ್ಲಡೆ ವೈರಲ್​ ಆಗುತ್ತಿವೆ. ಫೋಟೋಗಳು ವೈರಲ್ ಆಗುತ್ತಿದ್ದಂತೆ ಕಮೆಂಟ್​ಗಳನ್ನು ಡಿಲೀಟ್ ಮಾಡಲಾಗಿದೆ.

ಇದನ್ನೂ ಓದಿ
Image
ದೇಸಾಯಿ ಆಯೋಗ ನೀಡುವ ವರದಿ ಆಧರಿಸಿ ಕ್ರಮ ಜರುಗಿಸುತ್ತೇವೆ: ಭೈರತಿ ಸುರೇಶ್
Image
ಭೈರತಿ ಸುರೇಶ್ ಕಾರಿಗೆ ಎಸ್ಕಾರ್ಟ್ ವಾಹನ ಟಚ್: ಪೊಲೀಸರಿಗೆ ಬೈಯ್ದ ಸಚಿವ
Image
ಸಿಎಂ ಮಗನ ಸಾವಿಗೆ ಭೈರತಿ ಕಾರಣ ಅಂತ ಜನ ಮಾತನಾಡಿಕೊಳ್ಳುತ್ತಿದ್ದಾರೆ: ಶೋಭಾ
Image
ಮುಡಾ ಕೇಸ್​: ಭೈರತಿ ಸುರೇಶ್​, ಲೋಕಾಯುಕ್ತ ಎಸ್​ಪಿ ವಿರುದ್ಧ ದೂರು

ಫೇಸ್​ಬುಕ್​ ಪೋಸ್ಟ್​

ಇದನ್ನೂ ಓದಿ: ಮುಡಾ ಪ್ರಕರಣದಲ್ಲಿ ಸಿಎಂ ಅವರ ಪತ್ನಿಯಾಗಲೀ ನಾನಾಗಲೀ ತಪ್ಪು ಮಾಡದ ಕಾರಣ ಹೆದರಲ್ಲ: ಭೈರತಿ ಸುರೇಶ್

ಸಚಿವ ಭೈರತಿ ಸುರೇಶ್ ಸ್ಪಷ್ಟನೆ

ನನ್ನ ಫೇಸ್​ಬುಕ್​ ಖಾತೆ ಹ್ಯಾಕ್​ ಆಗಿದೆ. ಈ ರೀತಿಯ ಮೆಸೇಜ್‌ಗಳಿಗೆ ಯಾರು ಕೂಡ ಅನ್ಯತಾ ಭಾವಿಸಬೇಡಿ ಎಂದು ಸಾಮಾಜಿಕ ಜಾಲತಾಣದ ಮೂಲಕ ಭೈರತಿ ಸುರೇಶ್ ಸ್ಪಷ್ಟನೆ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:27 am, Tue, 25 March 25

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್