ಸಚಿವ ಭೈರತಿ ಸುರೇಶ್ ಫೇಸ್​ಬುಕ್ ಖಾತೆಯಲ್ಲಿ ಅವಾಚ್ಯ ಶಬ್ದಗಳ ಕಮೆಂಟ್: ವೈರಲ್ ಆದ ಬೆನ್ನಲ್ಲೇ ಹೊರಬಂತು ಸತ್ಯ

ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಫೇಸ್‌ಬುಕ್‌ನಲ್ಲಿ ವ್ಯಕ್ತಿಯೋರ್ವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾದ ಫೇಸ್​​ಬುಕ್​ ಕಮೆಂಟ್​​ ನ​ ಸ್ಕ್ರೀನ್‌ಶಾಟ್ ಫೋಟೋಗಳು ವೈರಲ್ ಆಗಿವೆ. ಇದನ್ನು ಅಲ್ಲಗಳೆದಿರುವ ಸಚಿವರು ತಮ್ಮ ಖಾತೆ ಹ್ಯಾಕ್ ಆಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಘಟನೆಯಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗಳು ನಡೆಯುತ್ತಿವೆ.

ಸಚಿವ ಭೈರತಿ ಸುರೇಶ್ ಫೇಸ್​ಬುಕ್ ಖಾತೆಯಲ್ಲಿ ಅವಾಚ್ಯ ಶಬ್ದಗಳ ಕಮೆಂಟ್: ವೈರಲ್ ಆದ ಬೆನ್ನಲ್ಲೇ ಹೊರಬಂತು ಸತ್ಯ
ಭೈರತಿ ಸುರೇಶ್
Edited By: ವಿವೇಕ ಬಿರಾದಾರ

Updated on: Mar 25, 2025 | 12:26 PM

ಬೆಂಗಳೂರು, ಮಾರ್ಚ್​ 25: ಫೇಸ್‌ಬುಕ್​​ನಲ್ಲಿ (Facebook) ತಮ್ಮ ಪೋಸ್ಟ್​ಗೆ ಕಮೆಂಟ್​ ಮಾಡಿದ್ದ ವ್ಯಕ್ತಿಗೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ (Byrathi Suresh) ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಮತ್ತು ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿವೆ. ಉಚಿತ ನೀರು ಪೂರೈಸುವ ನೀರಿನ ಟ್ಯಾಂಕ‌ರ್​ಗಳಿಗೆ ಚಾಲನೆ ನೀಡಿರುವ ಬಗ್ಗೆ ಸಚಿವ ಬೈರತಿ ಸುರೇಶ್ ಫೇಸ್​ಬುಕ್​ ಪೋಸ್ಟ್ ಮಾಡಿದ್ದರು.

ಭೈರತಿ ಸುರೇಶ್ ಪೋಸ್ಟ್​ಗೆ ಕಾರ್ತಿಕ್ ಎಂಬ ವ್ಯಕ್ತಿ ಕಮೆಂಟ್ ಹಾಕಿದ್ದು “ಇದೆಲ್ಲ ನಾಟಕ, ಜನ ಮೂರ್ಖರೆಂದು” ಕಮೆಂಟ್ ಮಾಡಿದ್ದರು. ಕಾರ್ತಿಕ್​ ಅವರ ಈ ಕಮೆಂಟ್​ ನೋಡಿ ಕೆರಳಿದ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, “ನಿನ್ನ ಅಡ್ರೆಸ್ ಕೊಡು ಹೊಡೆದು ಹಾಕ್ತೀನಿ. ನಿನ್ನ ಅಪ್ಪನಿಗೆ ಹುಟ್ಟಿದ್ರೆ ಅಡ್ರೆಸ್ ಹಾಕು, ಸೂ…” ಎಂದೆಲ್ಲಾ ಭೈರತಿ ಸುರೇಶ್ ಕಮೆಂಟ್ ಮಾಡಿದ್ದಾರೆ ಎನ್ನಲಾದ ಫೋಟೋಗಳು ವೈರಲ್​ ಆಗುತ್ತಿವೆ.

ಈ ಫೇಸ್​ಬುಕ್​ ​ಕಮೆಂಟ್​ಗಳನ್ನು​ ಯಾರೋ ಸ್ಕ್ರೀನ್​ಶಾಟ್​ ತೆಗೆದಿದ್ದಾರೆ. ಈ ಸ್ಕ್ರೀನ್​ಶಾಟ್​ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಎಲ್ಲಡೆ ವೈರಲ್​ ಆಗುತ್ತಿವೆ. ಫೋಟೋಗಳು ವೈರಲ್ ಆಗುತ್ತಿದ್ದಂತೆ ಕಮೆಂಟ್​ಗಳನ್ನು ಡಿಲೀಟ್ ಮಾಡಲಾಗಿದೆ.

ಇದನ್ನೂ ಓದಿ
ದೇಸಾಯಿ ಆಯೋಗ ನೀಡುವ ವರದಿ ಆಧರಿಸಿ ಕ್ರಮ ಜರುಗಿಸುತ್ತೇವೆ: ಭೈರತಿ ಸುರೇಶ್
ಭೈರತಿ ಸುರೇಶ್ ಕಾರಿಗೆ ಎಸ್ಕಾರ್ಟ್ ವಾಹನ ಟಚ್: ಪೊಲೀಸರಿಗೆ ಬೈಯ್ದ ಸಚಿವ
ಸಿಎಂ ಮಗನ ಸಾವಿಗೆ ಭೈರತಿ ಕಾರಣ ಅಂತ ಜನ ಮಾತನಾಡಿಕೊಳ್ಳುತ್ತಿದ್ದಾರೆ: ಶೋಭಾ
ಮುಡಾ ಕೇಸ್​: ಭೈರತಿ ಸುರೇಶ್​, ಲೋಕಾಯುಕ್ತ ಎಸ್​ಪಿ ವಿರುದ್ಧ ದೂರು

ಫೇಸ್​ಬುಕ್​ ಪೋಸ್ಟ್​

ಇದನ್ನೂ ಓದಿ: ಮುಡಾ ಪ್ರಕರಣದಲ್ಲಿ ಸಿಎಂ ಅವರ ಪತ್ನಿಯಾಗಲೀ ನಾನಾಗಲೀ ತಪ್ಪು ಮಾಡದ ಕಾರಣ ಹೆದರಲ್ಲ: ಭೈರತಿ ಸುರೇಶ್

ಸಚಿವ ಭೈರತಿ ಸುರೇಶ್ ಸ್ಪಷ್ಟನೆ

ನನ್ನ ಫೇಸ್​ಬುಕ್​ ಖಾತೆ ಹ್ಯಾಕ್​ ಆಗಿದೆ. ಈ ರೀತಿಯ ಮೆಸೇಜ್‌ಗಳಿಗೆ ಯಾರು ಕೂಡ ಅನ್ಯತಾ ಭಾವಿಸಬೇಡಿ ಎಂದು ಸಾಮಾಜಿಕ ಜಾಲತಾಣದ ಮೂಲಕ ಭೈರತಿ ಸುರೇಶ್ ಸ್ಪಷ್ಟನೆ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:27 am, Tue, 25 March 25

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us