AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲ್ಪಸಂಖ್ಯಾತ ವೈದ್ಯಕೀಯ ವಿದ್ಯಾರ್ಥಿಗಳ ಸಾಲದ ಮೊತ್ತ 3 ಲಕ್ಷ ರೂ.ನಿಂದ 5 ಲಕ್ಷಕ್ಕೆ ಹೆಚ್ಚಳ; ಜಮೀರ್ ಅಹ್ಮದ್ ಖಾನ್ ಸುಳಿವು

ಸಾಗರೋತ್ತರ ಅಧ್ಯಯನಕ್ಕಾಗಿ ಮೀಸಲಾದ ಶೈಕ್ಷಣಿಕ ಸಾಲದ ಮೊತ್ತವನ್ನು ಹೆಚ್ಚಿಸುವ ಬಗ್ಗೆ ಮತ್ತೊಂದು ಪ್ರಸ್ತಾವನೆ ಇದೆ. ಕೆಎಂಡಿಸಿ ನೀಡುತ್ತಿರುವ ಸಾಲದ ಮೊತ್ತವನ್ನು ಈಗಿರುವ 20 ಲಕ್ಷ ರೂ.ಗಳಿಂದ 30 ಲಕ್ಷ ರೂ.ಗಳಿಗೆ ಹೆಚ್ಚಿಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಖಾನ್ ಹೇಳಿದ್ದಾರೆ.

ಅಲ್ಪಸಂಖ್ಯಾತ ವೈದ್ಯಕೀಯ ವಿದ್ಯಾರ್ಥಿಗಳ ಸಾಲದ ಮೊತ್ತ 3 ಲಕ್ಷ ರೂ.ನಿಂದ 5 ಲಕ್ಷಕ್ಕೆ ಹೆಚ್ಚಳ; ಜಮೀರ್ ಅಹ್ಮದ್ ಖಾನ್ ಸುಳಿವು
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on:Aug 24, 2023 | 10:13 PM

Share

ಬೆಂಗಳೂರು, ಆಗಸ್ಟ್ 24: ಸರ್ಕಾರದ ಅಧೀನ ಸಂಸ್ಥೆಯಾಗಿರುವ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು (KMDC) ವೈದ್ಯಕೀಯ (MBBS) ಓದುತ್ತಿರುವ ಅರ್ಹ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಸಾಲದ ಮೊತ್ತವನ್ನು ಹೆಚ್ಚಿಸುವ ಬಗ್ಗೆ ಕರ್ನಾಟಕ ಅಲ್ಪಸಂಖ್ಯಾತ ವ್ಯವಹಾರಗಳು ಮತ್ತು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ (BZ Zameer Ahmed Khan) ಸುಳಿವು ನೀಡಿದ್ದಾರೆ. ಪ್ರಸ್ತುತ 3 ರೂಪಾಯಿ ವರೆಗೆ ಸಾಲ ನೀಡಲಾಗುತ್ತಿದ್ದು, ಇದನ್ನು 5 ಲಕ್ಷ ರೂ.ಗೆ ಹೆಚ್ಚಿಸುವ ಯೋಜನೆ ಇದೆ. ಸಾಲದ ಮೊತ್ತದ ಹೆಚ್ಚಳವು ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ ಎನ್ನಲಾಗಿದೆ.

ಸಾಗರೋತ್ತರ ಅಧ್ಯಯನಕ್ಕಾಗಿ ಮೀಸಲಾದ ಶೈಕ್ಷಣಿಕ ಸಾಲದ ಮೊತ್ತವನ್ನು ಹೆಚ್ಚಿಸುವ ಬಗ್ಗೆ ಮತ್ತೊಂದು ಪ್ರಸ್ತಾವನೆ ಇದೆ. ಕೆಎಂಡಿಸಿ ನೀಡುತ್ತಿರುವ ಸಾಲದ ಮೊತ್ತವನ್ನು ಈಗಿರುವ 20 ಲಕ್ಷ ರೂ.ಗಳಿಂದ 30 ಲಕ್ಷ ರೂ.ಗಳಿಗೆ ಹೆಚ್ಚಿಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಖಾನ್ ಹೇಳಿದ್ದಾರೆ.

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ ಹೊರೆಯಾಗುತ್ತಿರುವ ಸಾಲ ವಸೂಲಿ

ಅರ್ಹ ವಿದ್ಯಾರ್ಥಿಗಳಿಗೆ ಸಾಲದ ಮೊತ್ತವನ್ನು ಹೆಚ್ಚಿಸುವ ಮತ್ತು ಅವರಿಗೆ ಆರ್ಥಿಕ ಸಹಾಯವನ್ನು ಒದಗಿಸುವ ಕ್ರಮವು ವೈದ್ಯಕೀಯ ಸಂಸ್ಥೆಗಳಲ್ಲಿ ಶಿಕ್ಷಣದ ವೆಚ್ಚದ ಹೆಚ್ಚಳದ ದೃಷ್ಟಿಯಿಂದ ಉತ್ತಮವಾಗಿದ್ದರೂ, ಕೆಎಂಡಿಸಿಯ ಹಣಕಾಸಿನ ಕಳಪೆ ಸ್ಥಿತಿಯು ಇದಕ್ಕೆ ಅಡಚಣೆಯಾಗಬಹುದು ಎನ್ನಲಾಗಿದೆ. ಸಾಲ ವಸೂಲಾತಿ ವಿಚಾರದಲ್ಲಿ ಕೆಎಂಡಿಸಿ ಕಳಪೆ ನಿರ್ವಹಣೆಯ ಹಿನ್ನೆಲೆ ಹೊಂದಿದೆ. ಅಲ್ಲದೆ, ಹೊಸ ಅನುದಾನ ಇಲ್ಲದೆ ಸಚಿವರ ಯೋಜನೆ ಅನುಷ್ಠಾನಕ್ಕೆ ಬರುವುದು ಕಷ್ಟ ಎನ್ನಲಾಗಿದೆ.

2023 ರ ಜುಲೈನಲ್ಲಿ ಸಚಿವರು ಕೆಎಂಡಿಸಿಯ ಮಂಡಳಿಯ ಸಭೆಯ ಅಧ್ಯಕ್ಷತೆ ವಹಿಸಿದ್ದಾಗ, ಸಾಲ ವಸೂಲಾತಿಗೆ ಸಂಬಂಧಿಸಿದಂತೆ ವಿಳಂಬವಾದ ಪ್ರಗತಿಯನ್ನು ಗಮನಿಸಿ ಅವರು ಆಘಾತ ವ್ಯಕ್ತಪಡಿಸಿದ್ದರು. ನಿಗಮದ ಸಾಲ ವಸೂಲಾತಿಯು 2021 ರಲ್ಲಿ ಶೇ 15 ರಷ್ಟಿದ್ದರೆ, 2022 ರಲ್ಲಿ ಶೇ 25 ರಷ್ಟಿತ್ತು.

ಇದನ್ನೂ ಓದಿ: ಜೆಡಿಎಸ್​ ಶಾಸಕನಿಗೆ ಕಾಂಗ್ರೆಸ್ ಗಾಳವಾ? ಸಮೃದ್ದಿಯಾಗಿ ಸತ್ಯ ಬಿಚ್ಚಿಟ್ಟ ಜೆಡಿಎಸ್ ಶಾಸಕ ಮಂಜುನಾಥ್​!

ಸಾಲದ ಮೊತ್ತ ಮರುಪಾವತಿ ಆಗದಿದ್ದರೆ, ನಿಗಮದ ಸಾಲದ ಹಣಕಾಸು ಸ್ಥಿತಿಗತಿ ಕುಗ್ಗಲಿದೆ. ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗೆ ಮೀಸಲಾದ ಸಂಸ್ಥೆಯ ಉದ್ದೇಶಕ್ಕೆ ಸೋಲಾಗಲಿದೆ ಎಂದು ‘ನ್ಯೂಸ್ 9’ ವರದಿ ಮಾಡಿದೆ.

ನಿಗಮದ ಬಾಕಿ ಸಾಲದ ಮೊತ್ತವು 582 ಕೋಟಿ ರೂ. ಎಂದು ಅಂದಾಜಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:13 pm, Thu, 24 August 23

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ