ಶಿಕ್ಷಕರ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ವಿವಾದಾತ್ಮಕ ಹೇಳಿಕೆ

Edited By:

Updated on: Dec 01, 2025 | 6:39 PM

ಕೊಪ್ಪಳದ ಸಾಹಿತ್ಯ ಭವನದಲ್ಲಿ ನಡೆದ ಅಭಿನಂದನಾ ಸಭೆ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಶಿಕ್ಷಕರೋರ್ವರ ಪ್ರಶ್ನೆಗೆ ಉತ್ತರಿಸುವ ವೇಳೆ ರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಯ ವಿಡಿಯೋ ವೈರಲ್​ ಆಗಿದ್ದು, ಭಾರಿ ಆಕ್ರೋಶ ಕೇಳಿಬಂದಿದೆ.

ಕೊಪ್ಪಳ, ಡಿಸೆಂಬರ್​​ 01: ಟೀಚರ್ಸ್​​ಗೆ ಜ್ಞಾನ ಇರಲ್ಲ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಿನ್ನೆ‌ ಕೊಪ್ಪಳದ ಸಾಹಿತ್ಯ ಭವನದಲ್ಲಿ ನಡೆದ ಅಭಿನಂದನಾ ಸಭೆ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಪ್ರಶ್ನೆಗೆ ಉತ್ತರಿಸುವ ವೇಳೆ ಷಡಕ್ಷರಿ ಅವರು ಆಡಿರುವ ಮಾತುಗಳೀಗ ಭಾರಿ ಚರ್ಚೆಗೆ ಗ್ರಾಸವಾಗಿವೆ. ಶಿಕ್ಷಕ ಬಾಳಪ್ಪ ಕಾಳೆ ಕೇಳಿದ್ದ ಪ್ರಶ್ನೆಗೆ ಉತ್ತರಿಸುವ ವೇಳೆ ಶಿಕ್ಷಕರಿಗೆ ನಾಲೆಡ್ಜ್ ಇರಲ್ಲ ಎಂದು ಷಡಕ್ಷರಿ ಅವರು ಹೇಳಿದ್ದು, ಇದಕ್ಕೆ ಬಾಳಪ್ಪ ಕಾಳೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವೇಳೆ ನಾನು ಹೇಳೋದು ಕೇಳಿಸಿಕೊಳ್ಳಿ. ಅಕಾಡೆಮಿಕ್ ನಾಲೆಡ್ಜ್ ಬೇರೆ, ಅಡ್ಮಿನಿಸ್ಟೇಶನ್​​ ನಾಲೆಡ್ಜ್ ಬೇರೆ. ನಾನು ಅಡ್ಮಿನಿಸ್ಟ್ರೇಶನ್ ಬಗ್ಗೆ ಮಾತನಾಡುತ್ತಿದ್ದು, ಕೆಲವರಿಗೆ ಕಂಪ್ಯೂಟರ್ ನಾಲೆಡ್ಜ್ ಇರಲ್ಲ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Published on: Dec 01, 2025 04:36 PM
Follow Us
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More