Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರಾ, ಆರ್​.ಆರ್​.ನಗರ ಬಿಜೆಪಿ ತೆಕ್ಕೆಗೆ -ಸಿ ವೋಟರ್‌ ಸಮೀಕ್ಷೆ

ಬೆಂಗಳೂರು: ಆರ್​.ಆರ್​.ನಗರ ಹಾಗೂ ಶಿರಾ ಕ್ಷೇತ್ರಗಳಲ್ಲಿ ಉಪಚುನಾವಣೆ ನಂತರ ನಡೆಸಿದ ಸಿ ವೋಟರ್‌ ಸಮೀಕ್ಷೆಯಲ್ಲಿ ಎರಡೂ ಕಡೆ ಬಿಜೆಪಿ ಜಯಗಳಿಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಇತ್ತ, ರಾಜರಾಜೇಶ್ವರಿನಗರದಲ್ಲಿ ಸಿ ವೋಟರ್‌ ಸಮೀಕ್ಷೆ ಪ್ರಕಾರ ಬಿಜೆಪಿಯ ಮುನಿರತ್ನ ಜಯಗಳಿಸುವ ಸಾಧ್ಯತೆಯಿದ್ದು ಅವರು ಶೇ.37.8ರಷ್ಟು ಮತ ಪಡೆದಿರುವ ಸಾಧ್ಯತೆಯಿದೆ ಎಂದು ಚುನಾವಣೋತ್ತರ ಸಮೀಕ್ಷೆ ವರದಿಮಾಡಿದೆ. ಕಾಂಗ್ರೆಸ್​ನ ಅಭ್ಯರ್ಥಿ ಕುಸುಮಾ ಶೇ.31.1ರಷ್ಟು ಮತಗಳಿಸಿರುವ ಸಾಧ್ಯತೆಯಿದ್ದು JDS‌ ಅಭ್ಯರ್ಥಿ ಕೃಷ್ಣಮೂರ್ತಿಗೆ ಶೇ.14ರಷ್ಟು ಮತಗಳು ಸಿಕ್ಕಿರುವ ಸಾಧ್ಯತೆಯಿದೆ ಎಂದು ಸಮೀಕ್ಷೆಯಲ್ಲಿ ವರದಿಯಾಗಿದೆ. R​.R​.ನಗರದಲ್ಲಿ ಇತರರಿಗೆ […]

ಶಿರಾ, ಆರ್​.ಆರ್​.ನಗರ ಬಿಜೆಪಿ ತೆಕ್ಕೆಗೆ -ಸಿ ವೋಟರ್‌ ಸಮೀಕ್ಷೆ
Follow us
KUSHAL V
|

Updated on: Nov 07, 2020 | 7:48 PM

ಬೆಂಗಳೂರು: ಆರ್​.ಆರ್​.ನಗರ ಹಾಗೂ ಶಿರಾ ಕ್ಷೇತ್ರಗಳಲ್ಲಿ ಉಪಚುನಾವಣೆ ನಂತರ ನಡೆಸಿದ ಸಿ ವೋಟರ್‌ ಸಮೀಕ್ಷೆಯಲ್ಲಿ ಎರಡೂ ಕಡೆ ಬಿಜೆಪಿ ಜಯಗಳಿಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಇತ್ತ, ರಾಜರಾಜೇಶ್ವರಿನಗರದಲ್ಲಿ ಸಿ ವೋಟರ್‌ ಸಮೀಕ್ಷೆ ಪ್ರಕಾರ ಬಿಜೆಪಿಯ ಮುನಿರತ್ನ ಜಯಗಳಿಸುವ ಸಾಧ್ಯತೆಯಿದ್ದು ಅವರು ಶೇ.37.8ರಷ್ಟು ಮತ ಪಡೆದಿರುವ ಸಾಧ್ಯತೆಯಿದೆ ಎಂದು ಚುನಾವಣೋತ್ತರ ಸಮೀಕ್ಷೆ ವರದಿಮಾಡಿದೆ. ಕಾಂಗ್ರೆಸ್​ನ ಅಭ್ಯರ್ಥಿ ಕುಸುಮಾ ಶೇ.31.1ರಷ್ಟು ಮತಗಳಿಸಿರುವ ಸಾಧ್ಯತೆಯಿದ್ದು JDS‌ ಅಭ್ಯರ್ಥಿ ಕೃಷ್ಣಮೂರ್ತಿಗೆ ಶೇ.14ರಷ್ಟು ಮತಗಳು ಸಿಕ್ಕಿರುವ ಸಾಧ್ಯತೆಯಿದೆ ಎಂದು ಸಮೀಕ್ಷೆಯಲ್ಲಿ ವರದಿಯಾಗಿದೆ. R​.R​.ನಗರದಲ್ಲಿ ಇತರರಿಗೆ ಶೇ.17.2ರಷ್ಟು ಮತಗಳು ಲಭ್ಯವಾಗಿರುವ ಸಾಧ್ಯತೆಯಿದೆ ಎಂದು ಸಿ ವೋಟರ್‌ ವರದಿಮಾಡಿದೆ.

ಇತ್ತ, ಶಿರಾದಲ್ಲಿ ಬಿಜೆಪಿಯ ರಾಜೇಶ್‌ ಗೌಡ ಜಯಭೇರಿ ಬಾರಿಸುವ ಸಾಧ್ಯತೆಯಿದೆ ಎಂದು ಸಿ ವೋಟರ್‌ ಸಮೀಕ್ಷೆ ಹೇಳಿದೆ. ರಾಜೇಶ್‌ ಗೌಡಗೆ ಶೇ.36.6ರಷ್ಟು ಮತಗಳು ಸಿಕ್ಕಿರುವ ಸಾಧ್ಯತೆಯಿದೆ. ಕಾಂಗ್ರೆಸ್​ನ ಜಯಚಂದ್ರಗೆ ಶೇ.32.5ರಷ್ಟು ಮತಗಳು ಲಭ್ಯವಾಗಿರುವ ಸಾಧ್ಯತೆಯಿದ್ದರೆ JDS ಅಭ್ಯರ್ಥಿ ಅಮ್ಮಾಜಮ್ಮಗೆ ಶೇ.17.4ರಷ್ಟು ಮತಗಳಿಕೆ ಆಗಿರುವ ಸಾಧ್ಯತೆಯಿದೆ ಎಂದು ಸಮೀಕ್ಷೆ ವರದಿಮಾಡಿದೆ. ಜೊತೆಗೆ, ಶಿರಾ ಕ್ಷೇತ್ರದಲ್ಲಿ ಇತರರಿಗೆ ಶೇ.13.5ರಷ್ಟು ಮತಗಳು ಸಿಕ್ಕಿರುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಹಾಗಾಗಿ, ಸಮೀಕ್ಷೆ ಪ್ರಕಾರ ಶಿರಾದಲ್ಲಿ ಮೊದಲ ಬಾರಿಗೆ BJP ಖಾತೆ ತೆರೆಯುವ ನಿರೀಕ್ಷೆಯಿದೆ.

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ