AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿರಾ, ಆರ್​.ಆರ್​.ನಗರ ಬಿಜೆಪಿ ತೆಕ್ಕೆಗೆ -ಸಿ ವೋಟರ್‌ ಸಮೀಕ್ಷೆ

ಬೆಂಗಳೂರು: ಆರ್​.ಆರ್​.ನಗರ ಹಾಗೂ ಶಿರಾ ಕ್ಷೇತ್ರಗಳಲ್ಲಿ ಉಪಚುನಾವಣೆ ನಂತರ ನಡೆಸಿದ ಸಿ ವೋಟರ್‌ ಸಮೀಕ್ಷೆಯಲ್ಲಿ ಎರಡೂ ಕಡೆ ಬಿಜೆಪಿ ಜಯಗಳಿಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. ಇತ್ತ, ರಾಜರಾಜೇಶ್ವರಿನಗರದಲ್ಲಿ ಸಿ ವೋಟರ್‌ ಸಮೀಕ್ಷೆ ಪ್ರಕಾರ ಬಿಜೆಪಿಯ ಮುನಿರತ್ನ ಜಯಗಳಿಸುವ ಸಾಧ್ಯತೆಯಿದ್ದು ಅವರು ಶೇ.37.8ರಷ್ಟು ಮತ ಪಡೆದಿರುವ ಸಾಧ್ಯತೆಯಿದೆ ಎಂದು ಚುನಾವಣೋತ್ತರ ಸಮೀಕ್ಷೆ ವರದಿಮಾಡಿದೆ. ಕಾಂಗ್ರೆಸ್​ನ ಅಭ್ಯರ್ಥಿ ಕುಸುಮಾ ಶೇ.31.1ರಷ್ಟು ಮತಗಳಿಸಿರುವ ಸಾಧ್ಯತೆಯಿದ್ದು JDS‌ ಅಭ್ಯರ್ಥಿ ಕೃಷ್ಣಮೂರ್ತಿಗೆ ಶೇ.14ರಷ್ಟು ಮತಗಳು ಸಿಕ್ಕಿರುವ ಸಾಧ್ಯತೆಯಿದೆ ಎಂದು ಸಮೀಕ್ಷೆಯಲ್ಲಿ ವರದಿಯಾಗಿದೆ. R​.R​.ನಗರದಲ್ಲಿ ಇತರರಿಗೆ […]

ಶಿರಾ, ಆರ್​.ಆರ್​.ನಗರ ಬಿಜೆಪಿ ತೆಕ್ಕೆಗೆ -ಸಿ ವೋಟರ್‌ ಸಮೀಕ್ಷೆ
KUSHAL V
|

Updated on: Nov 07, 2020 | 7:48 PM

Share

ಬೆಂಗಳೂರು: ಆರ್​.ಆರ್​.ನಗರ ಹಾಗೂ ಶಿರಾ ಕ್ಷೇತ್ರಗಳಲ್ಲಿ ಉಪಚುನಾವಣೆ ನಂತರ ನಡೆಸಿದ ಸಿ ವೋಟರ್‌ ಸಮೀಕ್ಷೆಯಲ್ಲಿ ಎರಡೂ ಕಡೆ ಬಿಜೆಪಿ ಜಯಗಳಿಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಇತ್ತ, ರಾಜರಾಜೇಶ್ವರಿನಗರದಲ್ಲಿ ಸಿ ವೋಟರ್‌ ಸಮೀಕ್ಷೆ ಪ್ರಕಾರ ಬಿಜೆಪಿಯ ಮುನಿರತ್ನ ಜಯಗಳಿಸುವ ಸಾಧ್ಯತೆಯಿದ್ದು ಅವರು ಶೇ.37.8ರಷ್ಟು ಮತ ಪಡೆದಿರುವ ಸಾಧ್ಯತೆಯಿದೆ ಎಂದು ಚುನಾವಣೋತ್ತರ ಸಮೀಕ್ಷೆ ವರದಿಮಾಡಿದೆ. ಕಾಂಗ್ರೆಸ್​ನ ಅಭ್ಯರ್ಥಿ ಕುಸುಮಾ ಶೇ.31.1ರಷ್ಟು ಮತಗಳಿಸಿರುವ ಸಾಧ್ಯತೆಯಿದ್ದು JDS‌ ಅಭ್ಯರ್ಥಿ ಕೃಷ್ಣಮೂರ್ತಿಗೆ ಶೇ.14ರಷ್ಟು ಮತಗಳು ಸಿಕ್ಕಿರುವ ಸಾಧ್ಯತೆಯಿದೆ ಎಂದು ಸಮೀಕ್ಷೆಯಲ್ಲಿ ವರದಿಯಾಗಿದೆ. R​.R​.ನಗರದಲ್ಲಿ ಇತರರಿಗೆ ಶೇ.17.2ರಷ್ಟು ಮತಗಳು ಲಭ್ಯವಾಗಿರುವ ಸಾಧ್ಯತೆಯಿದೆ ಎಂದು ಸಿ ವೋಟರ್‌ ವರದಿಮಾಡಿದೆ.

ಇತ್ತ, ಶಿರಾದಲ್ಲಿ ಬಿಜೆಪಿಯ ರಾಜೇಶ್‌ ಗೌಡ ಜಯಭೇರಿ ಬಾರಿಸುವ ಸಾಧ್ಯತೆಯಿದೆ ಎಂದು ಸಿ ವೋಟರ್‌ ಸಮೀಕ್ಷೆ ಹೇಳಿದೆ. ರಾಜೇಶ್‌ ಗೌಡಗೆ ಶೇ.36.6ರಷ್ಟು ಮತಗಳು ಸಿಕ್ಕಿರುವ ಸಾಧ್ಯತೆಯಿದೆ. ಕಾಂಗ್ರೆಸ್​ನ ಜಯಚಂದ್ರಗೆ ಶೇ.32.5ರಷ್ಟು ಮತಗಳು ಲಭ್ಯವಾಗಿರುವ ಸಾಧ್ಯತೆಯಿದ್ದರೆ JDS ಅಭ್ಯರ್ಥಿ ಅಮ್ಮಾಜಮ್ಮಗೆ ಶೇ.17.4ರಷ್ಟು ಮತಗಳಿಕೆ ಆಗಿರುವ ಸಾಧ್ಯತೆಯಿದೆ ಎಂದು ಸಮೀಕ್ಷೆ ವರದಿಮಾಡಿದೆ. ಜೊತೆಗೆ, ಶಿರಾ ಕ್ಷೇತ್ರದಲ್ಲಿ ಇತರರಿಗೆ ಶೇ.13.5ರಷ್ಟು ಮತಗಳು ಸಿಕ್ಕಿರುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಹಾಗಾಗಿ, ಸಮೀಕ್ಷೆ ಪ್ರಕಾರ ಶಿರಾದಲ್ಲಿ ಮೊದಲ ಬಾರಿಗೆ BJP ಖಾತೆ ತೆರೆಯುವ ನಿರೀಕ್ಷೆಯಿದೆ.

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ