ಮಂಗಳೂರು ಫೈರಿಂಗ್‌: ವಿದೇಶಗಳಿಂದ ಪೊಲೀಸರಿಗೆ ಬರ್ತಿವೆ ಬೆದರಿಕೆಯ ಕರೆ‌ಗಳು!

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದಂತಹ ಪ್ರತಿಭಟನೆ ವೇಳೆ ಪೊಲೀಸರಿಂದ ಆದ ಫೈರಿಂಗ್‌ಗೆ ಇಬ್ಬರು ಮೃತಪಟ್ಟಿದ್ದರು. ಈ ಗೋಲಿಬಾರ್​ ಸಂಬಂಧ ವ್ಯಾಪಕ ಟೀಕೆ ಟಿಪ್ಪಣಿಗಳು ಬಂದಿದ್ದವು. ಈಗ ಈ ವಿವಾದಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮಂಗಳೂರು ಪೊಲೀಸರಿಗೆ ವಿದೇಶಗಳಿಂದ ಬೆದರಿಕೆಯ ಕರೆಗಳು ಬರುತ್ತಿವೆಯಂತೆ. ಪೊಲೀಸ್ ಫೈರಿಂಗ್‌ನಲ್ಲಿ ಪೊಲೀಸರೊಬ್ಬರು ಗುಂಡು ಹಾರಿಸಿ ನಂತರ ಒಂದು ಹೆಣಾನೂ ಬಿದ್ದಿಲ್ಲ ಎನ್ನುವ ವಿಡಿಯೋ ವೈರಲ್ ಆಗಿತ್ತು. ಈ ವಿಚಾರ ಸಂಬಂಧಿಸಿ ಕದ್ರಿ ಠಾಣೆ ಇನ್ಸ್‌ಪೆಕ್ಟರ್ ಶಾಂತಾರಾಮ್​ಗೆ ವಿದೇಶಗಳಿಂದ ಬೆದರಿಕೆ […]

ಮಂಗಳೂರು ಫೈರಿಂಗ್‌: ವಿದೇಶಗಳಿಂದ ಪೊಲೀಸರಿಗೆ ಬರ್ತಿವೆ ಬೆದರಿಕೆಯ ಕರೆ‌ಗಳು!
ಸಾಧು ಶ್ರೀನಾಥ್​

Updated on: Dec 24, 2019 | 11:26 AM

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದಂತಹ ಪ್ರತಿಭಟನೆ ವೇಳೆ ಪೊಲೀಸರಿಂದ ಆದ ಫೈರಿಂಗ್‌ಗೆ ಇಬ್ಬರು ಮೃತಪಟ್ಟಿದ್ದರು. ಈ ಗೋಲಿಬಾರ್​ ಸಂಬಂಧ ವ್ಯಾಪಕ ಟೀಕೆ ಟಿಪ್ಪಣಿಗಳು ಬಂದಿದ್ದವು. ಈಗ ಈ ವಿವಾದಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮಂಗಳೂರು ಪೊಲೀಸರಿಗೆ ವಿದೇಶಗಳಿಂದ ಬೆದರಿಕೆಯ ಕರೆಗಳು ಬರುತ್ತಿವೆಯಂತೆ.

ಪೊಲೀಸ್ ಫೈರಿಂಗ್‌ನಲ್ಲಿ ಪೊಲೀಸರೊಬ್ಬರು ಗುಂಡು ಹಾರಿಸಿ ನಂತರ ಒಂದು ಹೆಣಾನೂ ಬಿದ್ದಿಲ್ಲ ಎನ್ನುವ ವಿಡಿಯೋ ವೈರಲ್ ಆಗಿತ್ತು. ಈ ವಿಚಾರ ಸಂಬಂಧಿಸಿ ಕದ್ರಿ ಠಾಣೆ ಇನ್ಸ್‌ಪೆಕ್ಟರ್ ಶಾಂತಾರಾಮ್​ಗೆ ವಿದೇಶಗಳಿಂದ ಬೆದರಿಕೆ ಕರೆ‌ ಬಂದಿದೆಯಂತೆ. ನಿರಂತರವಾಗಿ ಹಿಂದಿ ಭಾಷೆಯಲ್ಲಿ ಬೆದರಿಕೆ ಕರೆಗಳು ಬರುತ್ತಿವೆ ಎಂದು ಇನ್ಸ್‌ಪೆಕ್ಟರ್ ಶಾಂತಾರಾಮ್ ಪಾಂಡೇಶ್ವರ ಪೊಲೀಸ್ ಠಾಣೆ, ಹಾಗೂ ಸೈಬರ್ ಕ್ರೈಂ ಪೊಲೀಸರ ಬಳಿ ದೂರು ದಾಖಲಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us