ಸಹಾಯಧನ ಪಡೆಯಲು ಆಟೋ ಚಾಲಕರು ಏನು ಮಾಡಬೇಕು? ಇಲ್ಲಿದೆ ಮಾಹಿತಿ

ಬೆಂಗಳೂರು: ಕೊರೊನಾ ಲಾಕ್​ಡೌನ್​ನಿಂದ ಕಂಗಾಲಾಗಿರುವ ಆಟೋ, ಟ್ಯಾಕ್ಸಿ ಚಾಲಕರಿಗೆ ಸಹಾಯಧನ ವಿತರಣೆ ಸಂಬಂಧ ಸಾರಿಗೆ ಇಲಾಖೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಚಾಲನಾ ಅನುಜ್ಞಾಪತ್ರ, ಬ್ಯಾಡ್ಜ್​ ಹೊಂದಿರುವ ಫಲಾನುಭವಿಗಳು ಮಾತ್ರ 5,000 ಸಹಾಯಧನ ಪಡೆಯಲು ಅರ್ಹರಾಗಿರುತ್ತಾರೆ. ಮಾರ್ಚ್ 1ಕ್ಕೆ ಚಾಲ್ತಿಯಲ್ಲಿರುವ ಅನುಜ್ಞಾ ಪತ್ರದ ವಿವರಗಳನ್ನು ನೀಡಬೇಕು. ಇದರ ಜೊತೆಗೆ ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆ, ವಾಹನ ನೋಂದಣಿ ಸಂಖ್ಯೆ ಸೇರಿದಂತೆ ಅಗತ್ಯವಿರುವ ಎಲ್ಲಾ ಮಾಹಿತಿಗಳನ್ನು ಪೋರ್ಟಲ್​ನಲ್ಲಿ ನಮೂದಿಸಬೇಕು. ಅಲ್ಲದೆ, ಕೊರೊನಾ ಸಂದರ್ಭದಲ್ಲಿ ಆದಾಯ ಕಳೆದುಕೊಂಡಿರುವ ಬಗ್ಗೆಯೂ ಸೆಲ್ಫ್​ ಡಿಕ್ಲರೇಷನ್ […]

ಸಹಾಯಧನ ಪಡೆಯಲು ಆಟೋ ಚಾಲಕರು ಏನು ಮಾಡಬೇಕು? ಇಲ್ಲಿದೆ ಮಾಹಿತಿ
ಸಾಧು ಶ್ರೀನಾಥ್​

Updated on: May 08, 2020 | 7:13 PM

ಬೆಂಗಳೂರು: ಕೊರೊನಾ ಲಾಕ್​ಡೌನ್​ನಿಂದ ಕಂಗಾಲಾಗಿರುವ ಆಟೋ, ಟ್ಯಾಕ್ಸಿ ಚಾಲಕರಿಗೆ ಸಹಾಯಧನ ವಿತರಣೆ ಸಂಬಂಧ ಸಾರಿಗೆ ಇಲಾಖೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಚಾಲನಾ ಅನುಜ್ಞಾಪತ್ರ, ಬ್ಯಾಡ್ಜ್​ ಹೊಂದಿರುವ ಫಲಾನುಭವಿಗಳು ಮಾತ್ರ 5,000 ಸಹಾಯಧನ ಪಡೆಯಲು ಅರ್ಹರಾಗಿರುತ್ತಾರೆ.

ಮಾರ್ಚ್ 1ಕ್ಕೆ ಚಾಲ್ತಿಯಲ್ಲಿರುವ ಅನುಜ್ಞಾ ಪತ್ರದ ವಿವರಗಳನ್ನು ನೀಡಬೇಕು. ಇದರ ಜೊತೆಗೆ ಆಧಾರ್ ಸಂಖ್ಯೆ, ಬ್ಯಾಂಕ್ ಖಾತೆ, ವಾಹನ ನೋಂದಣಿ ಸಂಖ್ಯೆ ಸೇರಿದಂತೆ ಅಗತ್ಯವಿರುವ ಎಲ್ಲಾ ಮಾಹಿತಿಗಳನ್ನು ಪೋರ್ಟಲ್​ನಲ್ಲಿ ನಮೂದಿಸಬೇಕು. ಅಲ್ಲದೆ, ಕೊರೊನಾ ಸಂದರ್ಭದಲ್ಲಿ ಆದಾಯ ಕಳೆದುಕೊಂಡಿರುವ ಬಗ್ಗೆಯೂ ಸೆಲ್ಫ್​ ಡಿಕ್ಲರೇಷನ್ ಕೊಡಬೇಕಾಗಿದೆ.

ಆಟೋ ಹಾಗೂ ಟ್ಯಾಕ್ಸಿ ಚಾಲಕರು ಸಹಾಯಧನ ಪಡೆಯಲು ಸೇವಾ ಸಿಂಧು ಌಪ್​ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಈಗಾಗಲೇ ಈ ಸಂಬಂಧ ಕರಡು ಮಾರ್ಗಸೂಚಿಯನ್ನು ಸಾರಿಗೆ ಇಲಾಖೆ ಸಿದ್ಧಪಡಿಸಿದ್ದು, ಇನ್ನಷ್ಟೇ ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳಬೇಕಿದೆ.

Published On - 7:07 pm, Fri, 8 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us