AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಕ್ರಾಂತಿಗೆ ಸಚಿವ ಸಂಪುಟ ವಿಸ್ತರಣೆ: ಹೊಸ ಶಾಸಕರಿಗೆ ಸಿಎಂ ಯಡಿಯೂರಪ್ಪ ಭರವಸೆ

ಬೆಂಗಳೂರು: ಸಂಕ್ರಾಂತಿಗೆ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ನೂತನ ಶಾಸಕರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಜನವರಿ ಮೊದಲ ವಾರದಲ್ಲಿ ನಾನು ದೆಹಲಿಗೆ ಹೋಗುತ್ತೇನೆ. ದೆಹಲಿಯಿಂದ ಬಂದ ಬಳಿಕ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ. ಸಂಕ್ರಾಂತಿಗೆ ಪದಗ್ರಹಣ ದಿನಾಂಕ ನಿಗದಿ ಮಾಡಿಕೊಳ್ಳೋಣ. ಈ ಹಿಂದೆ ಮಾತು ಕೊಟ್ಟಂತೆ ಭರವಸೆ ಕೊಟ್ಟವರನ್ನು ಸಚಿವರನ್ನಾಗಿ ಮಾಡ್ತೇವೆ ಎಂದು ವಿಧಾನಸೌಧದಲ್ಲಿ ಸಿಎಂ ಕೊಠಡಿಯಲ್ಲಿ ಚರ್ಚೆ ವೇಳೆ ಯಡಿಯೂರಪ್ಪ ತಿಳಿಸಿದ್ದಾರೆ. ನೂತನ ಶಾಸಕರಿಗೆ ಪ್ರಮಾಣವಚನದ ಬಳಿಕ ಬ್ರೀಫ್ ಕೇಸ್ ಕೊಡುವ ಸಂಪ್ರದಾಯಕ್ಕೆ ತಿಲಾಂಜಲಿ […]

ಸಂಕ್ರಾಂತಿಗೆ ಸಚಿವ ಸಂಪುಟ ವಿಸ್ತರಣೆ: ಹೊಸ ಶಾಸಕರಿಗೆ ಸಿಎಂ ಯಡಿಯೂರಪ್ಪ ಭರವಸೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 22, 2019 | 1:02 PM

Share

ಬೆಂಗಳೂರು: ಸಂಕ್ರಾಂತಿಗೆ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ನೂತನ ಶಾಸಕರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಜನವರಿ ಮೊದಲ ವಾರದಲ್ಲಿ ನಾನು ದೆಹಲಿಗೆ ಹೋಗುತ್ತೇನೆ. ದೆಹಲಿಯಿಂದ ಬಂದ ಬಳಿಕ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ. ಸಂಕ್ರಾಂತಿಗೆ ಪದಗ್ರಹಣ ದಿನಾಂಕ ನಿಗದಿ ಮಾಡಿಕೊಳ್ಳೋಣ. ಈ ಹಿಂದೆ ಮಾತು ಕೊಟ್ಟಂತೆ ಭರವಸೆ ಕೊಟ್ಟವರನ್ನು ಸಚಿವರನ್ನಾಗಿ ಮಾಡ್ತೇವೆ ಎಂದು ವಿಧಾನಸೌಧದಲ್ಲಿ ಸಿಎಂ ಕೊಠಡಿಯಲ್ಲಿ ಚರ್ಚೆ ವೇಳೆ ಯಡಿಯೂರಪ್ಪ ತಿಳಿಸಿದ್ದಾರೆ.

ನೂತನ ಶಾಸಕರಿಗೆ ಪ್ರಮಾಣವಚನದ ಬಳಿಕ ಬ್ರೀಫ್ ಕೇಸ್ ಕೊಡುವ ಸಂಪ್ರದಾಯಕ್ಕೆ ತಿಲಾಂಜಲಿ ನೀಡಲಾಗಿದ್ದು, ಬ್ರೀಫ್ ಕೇಸ್ ಬದಲು ಪ್ಲಾಸ್ಟಿಕ್ ಕವರ್ ಗಳಲ್ಲಿ ಸಂವಿಧಾನ ಪ್ರತಿ, ವಿಧಾನಸಭೆ ರೂಲ್ ಬುಕ್, ನೋಟ್ ಪ್ಯಾಡ್ ಗಳನ್ನು ಇಟ್ಟುಕೊಡಲು ವ್ಯವಸ್ಥೆ ಮಾಡಿಕೊಡಲಾಗಿದೆ.

ಬಿಜೆಪಿ ಸರ್ಕಾರ ಬಹುಮತ ಪಡೆದ ಖುಷಿಯಲ್ಲಿ ಅದ್ದೂರಿ ಕಾರ್ಯಕ್ರಮ. ವಿಧಾನಸೌಧದ ಬ್ಯಾಂಕ್ವೆಂಟ್ ಹಾಲ್ ನಲ್ಲಿ ಕಾರ್ಯಕ್ರಮ ನೆರವೇರಿತು. ಶಾಸಕರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಭಾಗಿಯಾಗಿದ್ದರು.

ಉಪ‌ ಚುನಾವಣೆಯಲ್ಲಿ ಗೆದ್ದ 15 ಶಾಸಕರಲ್ಲಿ 13 ಶಾಸಕರಿಂದ ಮಾತ್ರ ಪ್ರಮಾಣ ವಚನ ಸ್ವೀಕರಿಸಿದರು. 12 ಬಿಜೆಪಿ ಹಾಗೂ ಓರ್ವ ಪಕ್ಷೇತರ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ ನಡೆಯಿತು. ಕಾಂಗ್ರೆಸ್​​ನ ಇಬ್ಬರು ಶಾಸಕರು ಮತ್ತೊಂದು ದಿನ ಪ್ರಮಾಣ ವಚನ ಪಡೆಯುವುದಾಗಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ತಿಳಿಸಿದ್ದಾರೆ.

ಇದಕ್ಕೂ ಮುನ್ನ ಮೊದಲಿಗೆ ಮಹೇಶ್ ಕುಮಟಳ್ಳಿ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಶ್ರೀಮಂತ ಬಾಳಾ ಸಾಹೇಬ್ ಪಾಟೀಲ್, ರಮೇಶ್ ಜಾರಕಿಹೊಳಿ, ಶಿವರಾಂ ಹೆಬ್ಬಾರ್, ಬಿ.ಸಿ.ಪಾಟೀಲ್, ಅರುಣ್ ಕುಮಾರ್ ಪೂಜಾರ್, ಆನಂದ್ ಸಿಂಗ್, ಡಾ.ಕೆ.ಸುಧಾಕರ್, ಬೈರತಿ ಬಸವರಾಜ್, ಎಸ್.ಟಿ.ಸೋಮಶೇಖರ್, ಕೆ. ಗೋಪಾಲಯ್ಯ, ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಮತ್ತು ನಾರಾಯಣ ಗೌಡ ಪ್ರಮಾಣ ವಚನ ಸ್ವೀಕರಿಸಿದರು.

ವಿಧಾನಸೌಧದಲ್ಲಿ ಪ್ರಮಾಣವಚನ ವೇಳೆ ಸಿಎಂ BSY ಅವರನ್ನ ಮಾತನಾಡಿಸಲು ಹೊಸಕೋಟೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಮುಂದಾದರು. ಆದರೆ ಸಿಎಂ, ಶರತ್ ಬಚ್ಚೇಗೌಡರತ್ತ ತಿರುಗಿಯೂ ನೋಡಲಿಲ್ಲ. ಬಳಿಕ ಶರತ್, ಆರ್. ಅಶೋಕ್‌ರನ್ನ ನೋಡಿ ನಕ್ಕು ಸುಮ್ಮನಾದರು.

Published On - 11:52 am, Sun, 22 December 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ