AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಸಂಪುಟ ವಿಸ್ತರಣೆಗೆ ಮೆಗಾ ಟ್ವಿಸ್ಟ್: ಪಟ್ಟಿಯಲ್ಲಿ ಹೆಸರಿದ್ದರೂ ಮಂಕಾಳು ವೈದ್ಯಗೆ ತಪ್ಪಿದ ಮಂತ್ರಿಗಿರಿ; ಟೈಪಿಂಗ್ ಮಿಸ್ಟೇಕ್ ಎಂದ ಎಐಸಿಸಿ!

ಸಿಎಂ ಡಿಕೆಶಿ ಸಚಿವ ಸಂಪುಟ ವಿಸ್ತರಣೆ ಸಂಬಂಧ ಕೊನೇ ಕ್ಷಣದಲ್ಲಿ ಭಾರಿ ಬೆಳವಣಿಗೆಗಳು ನಡೆದಿವೆ. ಲಿಸ್ಟ್​​ನಲ್ಲಿ ಹೆಸರಿದ್ದ ಹೊರತಾಗಿಯೂ ಭಟ್ಕಳ ಶಾಸಕ ಮಂಕಾಳು ವೈದ್ಯಗೆ ಸಚಿವ ಸ್ಥಾನ ಕೈತಪ್ಪಿದೆ. ಟೈಪಿಂಗ್​​ ಮಿಸ್ಟೇಕ್​​ನಿಂದ ಅವರ ಹೆಸರು ಪಟ್ಟಿಯಲ್ಲಿ ಸೇರ್ಪಡೆಯಾಗಿರುವ ಬಗ್ಗೆ ಎಐಸಿಸಿ ಸ್ಪಷ್ಟನೆ ನೀಡಿದ್ದು, ಅವರ ಬದಲಿಗೆ ದಾವಣಗೆರೆ ಉತ್ತರ ಕ್ಷೇತ್ರದ ಶಾಸಕರಾಗಿರುವ ಎಸ್.ಎಸ್.ಮಲ್ಲಿಕಾರ್ಜುನಗೆ ಸ್ಥಾನ ನೀಡಲಾಗಿದೆ.

ಸಚಿವ ಸಂಪುಟ ವಿಸ್ತರಣೆಗೆ ಮೆಗಾ ಟ್ವಿಸ್ಟ್: ಪಟ್ಟಿಯಲ್ಲಿ ಹೆಸರಿದ್ದರೂ ಮಂಕಾಳು ವೈದ್ಯಗೆ ತಪ್ಪಿದ ಮಂತ್ರಿಗಿರಿ; ಟೈಪಿಂಗ್ ಮಿಸ್ಟೇಕ್ ಎಂದ ಎಐಸಿಸಿ!
ಮಂಕಾಳು ವೈದ್ಯImage Credit source: Mankalu Vaidya Facebook
Pramod Shastri G
| Edited By: |

Updated on: Aug 03, 2026 | 1:49 PM

Share

ಬೆಂಗಳೂರು, ಆಗಸ್ಟ್​​ 03: ಸಿಎಂ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟ ವಿಸ್ತರಣೆ ಸಂಬಂಧ 20 ಜನ ನೂತನ ಮಂತ್ರಿಗಳ ಹೆಸರನ್ನು ಎಐಸಿಸಿ ಪ್ರಕಟಿಸಿದ ಬಳಿಕವೂ ಭಾರಿ ಬದಲಾವಣೆ ನಡೆದಿದೆ. ಅಚ್ಚರಿಯ ಬೆಳವಣಿಗೆಯಲ್ಲಿ ಪಟ್ಟಿಯಲ್ಲಿ ಹೆಸರಿದ್ದ ಹೊರತಾಗಿಯೂ ಭಟ್ಕಳ ಕ್ಷೇತ್ರದ ಶಾಸಕ ಮಂಕಾಳು ವೈದ್ಯಗೆ ಮಂತ್ರಿ ಸ್ಥಾನ ಕೈತಪ್ಪಿದೆ. ಈ ವಿಚಾರವಾಗಿ ಎಐಸಿಸಿ ಸ್ಪಷ್ಟನೆ ನೀಡಿದ್ದು, ನೂತನ ಸಚಿವರ ಪಟ್ಟಿಯಲ್ಲಿ ಮಂಕಾಳು ವೈದ್ಯ ಹೆಸರಿರಲಿಲ್ಲ. ಇದು ಕೇವಲ ಟೈಪಿಂಗ್ ಮಿಸ್ಟೇಕ್ ಎಂದು ತಿಳಿಸಿದೆ. ಆದರೆ ಕೊನೇ ಕ್ಷಣದಲ್ಲಿ ದಾವಣಗೆರೆ ಉತ್ತರ ಕ್ಷೇತ್ರದ ಶಾಸಕರಾಗಿರುವ ಎಸ್.ಎಸ್.ಮಲ್ಲಿಕಾರ್ಜುನಗೆ ಸ್ಥಾನ ನೀಡಲಾಗಿದೆ.

ಡಿಕೆಶಿ ಜೊತೆ ಮಾತುಕತೆ ಯತ್ನ

ಸಚಿವಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಸಿಎಂ ನಿವಾಸಕ್ಕೆ ಮಂಕಾಳು ವೈದ್ಯ ಭೇಟಿ ನೀಡಿದ್ದಾರೆ. ಕೊನೇ ಕ್ಷಣದ ನಿರ್ಧಾರದ ಸಂಬಂಧ ಮುಖ್ಯಮಂತ್ರಿಗಳ ಜೊತೆ ಚರ್ಚೆಗೆ ಅವರು ಆಗಮಿಸಿದ್ದರಾದರೂ ಡಿಕೆಶಿ ಜೊತೆ ಮಾತುಕತೆ ಸಾಧ್ಯವಾಗಿಲ್ಲ ಎನ್ನಲಾಗಿದೆ. ಈ ಎಲ್ಲ ಬೆಳವಣಿಗೆಗಳ ಬಗ್ಗೆ ಕಾಂಗ್ರೆಸ್​​ ಶಾಸಕ ಪ್ರತಿಕ್ರಿಯೆ ನೀಡಿದ್ದು, ನಾನು ಸಿಎಂ ಅವರನ್ನ ಭೇಟಿ ಆಗಿಲ್ಲ, ಅವರು ಸಿಕ್ಕಿಲ್ಲ. ಮತ್ತೊಮ್ಮೆ ಬರುತ್ತೇನೆ ಎಂದಷ್ಟೇ ಹೇಳಿ ಸಿಎಂ ಮನೆಯಿಂದ ಸಿಟ್ಟಲ್ಲೇ ಹೊರಟ ಪ್ರಸಂಗ ನಡೆದಿದೆ.

ಇದನ್ನೂ ಓದಿ: ಸಿಎಂ ಡಿಕೆಶಿ ಕ್ಯಾಬಿನೆಟ್​​ನಲ್ಲಿ 11 ಮಂದಿ ಮಾತ್ರ ಹೊಸಬರು: ಸಿದ್ದರಾಮಯ್ಯ ಸಂಪುಟದಲ್ಲಿದ್ದ ಹಲವರಿಗೆ ಕೊಕ್​

ಎಸ್​.ಎಸ್​​. ಮಲ್ಲಿಕಾರ್ಜುನ್​​ಗೆ ಸಚಿವ ಸ್ಥಾನ ನೀಡಿದ್ದೇಕೆ?

ಮಂತ್ರಿಗಿರಿಗಾಗಿ ಪಟ್ಟು ಹಿಡಿದಿದ್ದ ಎಸ್​​.ಎಸ್​​. ಮಲ್ಲಿಕಾರ್ಜುನ್​​ ಅವರು ಸಚಿವ ಸ್ಥಾನ ಸಿಗದಿದ್ದರೆ ರಾಜೀನಾಮೆ ನೀಡೋದಾಗಿ ತಿಳಿಸಿದ್ದಾರೆ. ಸಂಸದರಾಗಿರುವ ಪತ್ನಿ ಮತ್ತು ಶಾಸಕರಾಗಿರುವ ಮಗ ಕೂಡ ಸ್ಥಾನ ತೊರೆಯಲಿದ್ದಾರೆ ಎಂದು ಹೈಕಮಾಂಡ್​​ ಮೇಲೆ ಒತ್ತಡ ಹಾಕಿದ್ದಾರೆ. ಇದೇ ಕಾರಣಕ್ಕೆ ಮಂಕಾಳು ವೈದ್ಯಗೆ ಕೊನೇ ಕ್ಷಣದಲ್ಲಿ ಕೊಕ್​​ ನೀಡಿ ಮಲ್ಲಿಕಾರ್ಜುನ್​​ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂಬ ಮಾಹಿತಿ ಇದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ