AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಿ ತಿದ್ದುಪಡಿ ವಿಧೇಯಕಕ್ಕೆ ಸಂಪುಟ ಒಪ್ಪಿಗೆ: ಇನ್ಮುಂದೆ ಮುಖ್ಯಮಂತ್ರಿಯೇ ಚಾನ್ಸಲರ್

ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ವಿವಿ ತಿದ್ದುಪಡಿ ವಿಧೇಯಕ, ಬಿಬಿಎಂಪಿ ತಿದ್ದುಪಡಿ, ಪ್ರವಾಸೋದ್ಯಮ ರೋಪ್‌ವೇಸ್ ವಿಧೇಯಕ ಸೇರಿದಂತೆ ಒಟ್ಟು 9 ಮಸೂದೆಗಳಿಗೆ ಅನುಮೋದನೆ ನೀಡಲಾಗಿದೆ. ರಾಜ್ಯಪಾಲರ ಅಧಿಕಾರವನ್ನು ಮುಖ್ಯಮಂತ್ರಿಗೆ ವರ್ಗಾಯಿಸುವುದು ಮತ್ತು ಕಾರ್ಮಿಕ ಕಲ್ಯಾಣ ನಿಧಿ ಹೆಚ್ಚಳ ಮುಂತಾದ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ವಿವಿ ತಿದ್ದುಪಡಿ ವಿಧೇಯಕಕ್ಕೆ ಸಂಪುಟ ಒಪ್ಪಿಗೆ: ಇನ್ಮುಂದೆ ಮುಖ್ಯಮಂತ್ರಿಯೇ ಚಾನ್ಸಲರ್
ವಿವಿ ತಿದ್ದುಪಡಿ ವಿಧೇಯಕಕ್ಕೆ ಸಂಪುಟ ಒಪ್ಪಿಗೆ: ಇನ್ಮುಂದೆ ಮುಖ್ಯಮಂತ್ರಿಯೇ ಚಾನ್ಸಲರ್
ಪ್ರಸನ್ನ ಗಾಂವ್ಕರ್​
| Edited By: |

Updated on: Nov 28, 2024 | 7:39 PM

Share

ಬೆಂಗಳೂರು, ನವೆಂಬರ್ 28: ಬೆಳಗಾವಿಯಲ್ಲಿ ಡಿ.9ರಿಂದ ಚಳಿಗಾಲ ಅಧಿವೇಶನ ನಡೆಯಲಿದೆ. ಈ ಮಧ್ಯೆ ಉಪಚುನಾವಣೆ ಬಳಿಕ ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ಸಂಪುಟ ಸಭೆ ಮಾಡಲಾಗಿದೆ. ಸಂಪುಟ ಸಂಪುಟ ಪುನಾರಚನೆ ಸೇರಿದಂತೆ ಸಾಕಷ್ಟು ವಿಚಾರಗಳನ್ನು ಚರ್ಚೆ ಮಾಡಲಾಗಿದೆ.  ಅದರಲ್ಲಿ ಪ್ರಮುಖವಾಗಿ ವಿವಿ ತಿದ್ದುಪಡಿ ವಿಧೇಯಕಕ್ಕೆ ಸಂಪುಟ ಒಪ್ಪಿಗೆ ಸೂಚಿಸಿದ್ದು, ರಾಜ್ಯಪಾಲರ ಅಧಿಕಾರ ಹಿಂಪಡೆದ ಕ್ಯಾಬಿನೆಟ್ ಸಿಎಂಗೆ ನೀಡಿದೆ. ಇದು ಸದ್ಯ ಚರ್ಚೆಗೆ ಗ್ರಾಸವಾಗಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿವಿ ತಿದ್ದುಪಡಿ ವಿಧೇಯಕಕ್ಕೆ ಸಚಿವ ಸಂಪುಟ ಸಭೆ ಅನುಮೋದಿಸಿದೆ. ಇಷ್ಟು ದಿನ ರಾಜ್ಯಪಾಲರು ಚಾನ್ಸಲರ್ ಆಗಿದ್ದರು. ಇನ್ಮುಂದೆ ಮುಖ್ಯಮಂತ್ರಿ ಚಾನ್ಸಲರ್ ಆಗಲಿದ್ದಾರೆ. ಆ ಮೂಲಕ ರಾಜ್ಯಪಾಲರ ಬಳಿ ಇದ್ದ ಅಧಿಕಾರವನ್ನು ಹಿಂಪಡೆದು ಸಿಎಂಗೆ ನೀಡಲಾಗಿದೆ.

ಇದನ್ನೂ ಓದಿ: ಇಂದು ದೆಹಲಿಗೆ ಸಿಎಂ ಸಿದ್ದರಾಮಯ್ಯ: ಹೈಕಮಾಂಡ್ ಜತೆ ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷಗಾದಿ ಬಗ್ಗೆ ಚರ್ಚೆ ಸಾಧ್ಯತೆ

ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಹೆಚ್‌.ಕೆ.ಪಾಟೀಲ್​, ತಿದ್ದುಪಡಿ ವಿಧೇಯಕಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಕೊಳವೆಬಾವಿ ನಿಷ್ಕ್ರಿಯ ಆಗಿದ್ದರೆ ಮುಚ್ಚುವುದು ಕಡ್ಡಾಯ. ಶಿಕ್ಷೆ ಹಾಗೂ ದಂಡ ವಿಧಿಸಲು ವಿಧೇಯಕದಲ್ಲಿ ಅವಕಾಶವಿದೆ. ಅದೇ ರೀತಿಯಾಗಿ ಚಾಣಕ್ಯ ವಿವಿ ತಿದ್ದುಪಡಿ ವಿಧೇಯಕಕ್ಕೆ ಕ್ಯಾಬಿನೆಟ್ ಅನುಮೋದಿಸಿದ್ದು, ಸರ್ಕಾರಿ ಅಧಿಕಾರಿ ಉಸ್ತುವಾರಿ ನೇಮಕಕ್ಕೆ ವಿಧೇಯಕದಲ್ಲಿ ಅವಕಾಶ ನೀಡಲಾಗಿದೆ ಎಂದು ಹೇಳಿದ್ದಾರೆ.

ಬಿಬಿಎಂಪಿ 2ನೇ ತಿದ್ದುಪಡಿ ವಿಧೇಯಕ, ಪ್ರವಾಸೋದ್ಯಮ ರೋಪ್‌ವೇಸ್ ವಿಧೇಯಕ ಮತ್ತು ಕರ್ನಾಟಕ ಸರಕು ಮತ್ತು ಸೇವೆಗಳ ತಿದ್ದುಪಡಿ ವಿಧೇಯಕಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಲಾಗಿದೆ.

9 ಮಸೂದೆಗಳನ್ನು ಮಂಡಿಸಲು ಸಂಪುಟ ಸಭೆಯಲ್ಲಿ ಅನುಮೋದನೆ

ಕರ್ನಾಟಕ ಕಾರ್ಮಿಕರ ಕಲ್ಯಾಣ ನಿಧಿ ತಿದ್ದುಪಡಿ ವಿಧೇಯಕ-2024, ಕಲ್ಯಾಣ ನಿಧಿ ಸಂಗ್ರಹದ ಮೊತ್ತ ಏರಿಸಲು ವಿಧೇಯಕದಲ್ಲಿ ತಿದ್ದುಪಡಿ ಮಾಡಲಾಗಿದೆ. ಕಾರ್ಮಿಕರಿಂದ 20, ಮಾಲೀಕರಿಂದ 40, ಸರ್ಕಾರದಿಂದ 20 ರೂ. ಬದಲು, 50-100-50 ರೂಪಾಯಿಗಳ ಸಂಗ್ರಹಕ್ಕೆ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. 42 ಕೋಟಿ ರೂ. ವಂತಿಗೆ ಸಂಗ್ರಹ ಆಗುತ್ತಿತ್ತು, ಇದರ ಪ್ರಮಾಣ ಹೆಚ್ಚಾಗಲಿದೆ ಎಂದಿದೆ.

ಇದನ್ನೂ ಓದಿ: ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷ ಸಜ್ಜು: 2 ವಾರಕ್ಕಿಂತ ಹೆಚ್ಚು ದಿನ ಅಧಿವೇಶನ ನಡೆಸಲು ಮನವಿ

ಮೈಸೂರು ಲಲಿತ ಮಹಲ್ ಪ್ಯಾಲೇಸ್ ಹೋಟೆಲ್​ನ ಕಾರ್ಯಾಚರಣೆ ನಿರ್ವಹಣೆ ದುರಸ್ಥಿ ನವೀಕರಣ ಇವೆಲ್ಲವನ್ನು ಪಾರಂಪರಿಕ ಕಟ್ಟಡ ಸಂರಕ್ಷಸಿ ಹೆರಿಟೇಜ್ ಮಾನದಂಡ ಪ್ರಕಾರ ಮಾಡಲು ಪಾರದರ್ಶಕ ಟೆಂಡರ್ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಲು ಕ್ಯಾಬಿನೆಟ್ ಅನುಮೋದನೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಹಾಲು ಮಾರುವ ಕೆಲಸ ಕೊಟ್ಟದ್ದಾರೆ: ಡಿ.ಕೆ.ಸುರೇಶ್
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಡಿಕೆ, ನಾನು ಹಾಲು ಜೇನು ಇದ್ದಂತೆ ಎಂದ ಸಿದ್ದು ಹೇಳಿಕೆಗೆ ಜೋಶಿ ವ್ಯಂಗ್ಯ
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಶಾಲೆಗೆ ಬಂದು ಮುಖ್ಯಶಿಕ್ಷಕನ 2ನೇ ಪತ್ನಿ ಹೈಡ್ರಾಮಾ: ವಿದ್ಯಾರ್ಥಿಗಳು ಕಂಗಾಲು
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!
ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು!