AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನ ಸಾಲ: ಅರೆಸ್ಟ್​ ವಾರಂಟ್​ಗೆ ಹೆದರಿ ಗ್ರಾಮವನ್ನೇ ತೊರೆದ ರೈತ!

ಬೆಳಗಾವಿ: ಅಲ್ಲಿ ಪ್ರವಾಹದ ಪರಿಸ್ಥಿತಿ, ತುತ್ತು ಅನ್ನಕ್ಕು ಪರದಾಡುವಂತಾಗಿದೆ. ಮನೆ ಮಠ ಕಳೆದುಕೊಂಡು ಜನರ ಜೀವನ ಅಧೋಗತಿಯಾಗಿದೆ. ಹೌದು ನಾವು ಹೇಳ್ತಿರೋದು ಬೆಳಗಾವಿ ಜನರ ಕೂಗು. ಬೆಳಗಾವಿಯ ರಾಮದುರ್ಗ ತಾಲೂಕಿನ ‌ಹಂಪಿಹೊಳಿ ಗ್ರಾಮದ ನೀಲಕಂಠ ಮತ್ತು ನಿಂಗಪ್ಪ ಎಂಬ ಇಬ್ಬರು ರೈತರಿಗೆ ಅರೆಸ್ಟ್ ವಾರಂಟ್ ಜಾರಿಯಾಗಿದೆ. ರೈತ ನೀಲಕಂಠ ಐದು ವರ್ಷದ ಹಿಂದೆ ಎಲ್‌&ಟಿ ಫೈನಾನ್ಸ್‌ ಸಂಸ್ಥೆಯಿಂದ ಸಾಲ ಪಡೆದು ವ್ಯವಸಾಯಕ್ಕೆ ಅನುಕೂಲವಾಗಲು ಟ್ರ್ಯಾಕ್ಟರ್ ಖರೀದಿಸಿದ್ದ, ನಿಗದಿತ ಸಮಯಕ್ಕೆ 2 ಕಂತುಗಳನ್ನೂ ಪಾವತಿಸಿದ್ದ. ನಂತರ ತೀವ್ರ ಬರ […]

ವಾಹನ ಸಾಲ: ಅರೆಸ್ಟ್​ ವಾರಂಟ್​ಗೆ ಹೆದರಿ ಗ್ರಾಮವನ್ನೇ ತೊರೆದ ರೈತ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 23, 2019 | 5:22 PM

Share

ಬೆಳಗಾವಿ: ಅಲ್ಲಿ ಪ್ರವಾಹದ ಪರಿಸ್ಥಿತಿ, ತುತ್ತು ಅನ್ನಕ್ಕು ಪರದಾಡುವಂತಾಗಿದೆ. ಮನೆ ಮಠ ಕಳೆದುಕೊಂಡು ಜನರ ಜೀವನ ಅಧೋಗತಿಯಾಗಿದೆ.

ಹೌದು ನಾವು ಹೇಳ್ತಿರೋದು ಬೆಳಗಾವಿ ಜನರ ಕೂಗು. ಬೆಳಗಾವಿಯ ರಾಮದುರ್ಗ ತಾಲೂಕಿನ ‌ಹಂಪಿಹೊಳಿ ಗ್ರಾಮದ ನೀಲಕಂಠ ಮತ್ತು ನಿಂಗಪ್ಪ ಎಂಬ ಇಬ್ಬರು ರೈತರಿಗೆ ಅರೆಸ್ಟ್ ವಾರಂಟ್ ಜಾರಿಯಾಗಿದೆ. ರೈತ ನೀಲಕಂಠ ಐದು ವರ್ಷದ ಹಿಂದೆ ಎಲ್‌&ಟಿ ಫೈನಾನ್ಸ್‌ ಸಂಸ್ಥೆಯಿಂದ ಸಾಲ ಪಡೆದು ವ್ಯವಸಾಯಕ್ಕೆ ಅನುಕೂಲವಾಗಲು ಟ್ರ್ಯಾಕ್ಟರ್ ಖರೀದಿಸಿದ್ದ, ನಿಗದಿತ ಸಮಯಕ್ಕೆ 2 ಕಂತುಗಳನ್ನೂ ಪಾವತಿಸಿದ್ದ.

ನಂತರ ತೀವ್ರ ಬರ ಹಿನ್ನೆಲೆ ಬೆಳೆಯ ಫಸಲು ಬಾರದೇ ಕಂತು ಮರುಪಾವತಿಸಲು ಆಗಿರಲಿಲ್ಲ. ಹೀಗಾಗಿ ಕಳೆದ ವರ್ಷವೇ ಎಲ್ ಆ್ಯಂಡ್ ಟಿ ಫೈನಾನ್ಸ್ ಸಿಬ್ಬಂದಿ ರೈತನ ಟ್ರ್ಯಾಕ್ಟರ್ ಜಪ್ತಿ ಮಾಡಿಕೊಂಡು ಹೋಗಿತ್ತು. ಆದರೆ ಈಗ ಇಂತಹುದೇ ಮತ್ತೊಂದು ಪರಿಸ್ಥಿತಿ ಎದುರಾಗಿದ್ದು, ಬೆಳಗಾವಿಯ ಮತ್ತೊಬ್ಬ ರೈತನಿಗೆ ಅರೆಸ್ಟ್ ವಾರಂಟ್ ನೀಡಲಾಗಿದೆ.

ಈ ಹಿಂದೆ ರಾಜ್ಯ ಸರ್ಕಾರದ ಸೂಚನೆ ಮೇರಗೆ ಜಿಲ್ಲಾಧಿಕಾರಿ ಕೋರ್ಟ್ ನೋಟಿಸ್ ಜಾರಿಗೊಳಿಸದಂತೆ ಆ ಸಂಸ್ಥೆಗೆ ಸೂಚಿಸಿದ್ದರು. ಆದರೆ, ಈಗ ಬೇರೊಂದು ಸಂಸ್ಥೆ ಮತ್ತೊಬ್ಬ ರೈತನಿಗೆ ನೋಟಿಸ್ ನೀಡುವ ಮೂಲಕ ಅದೇ ರೀತಿಯ ಉದ್ಧಟತನ ತೋರಿದೆ ಎಂದು ಸ್ಥಳೀಯ ರೈತರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತ ನಿಂಗಪ್ಪನಿಗೆ ಕೋಲ್ಕತ್ತಾ ಕೋರ್ಟ್ ಸೂಚನೆಯಂತೆ ಅರೆಸ್ಟ್ ವಾರಂಟ್ ಜಾರಿ ಮಾಡಲಾಗಿದೆ. ರಾಮದುರ್ಗ ಠಾಣೆ ಪೊಲೀಸರ ಮೂಲಕ ವಾರಂಟ್ ನೀಡಲಾಗಿದ್ದು, ಅರೆಸ್ಟ್ ವಾರಂಟ್‌ಗೆ ಹೆದರಿ ರೈತ ನಿಂಗಪ್ಪ ಊರು ಬಿಟ್ಟಿದ್ದಾನೆ.

Published On - 3:49 pm, Mon, 23 September 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ