AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂಸ್ತಾನ್ ಅಲ್ಲ, ಸಿಂಧೂಸ್ತಾನ್ ಮಾಡಿ: ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿದ ಬಂಡಾಯ ಸಾಹಿತಿ ಬಸವರಾಜ್ ಸೂಳಿಭಾವಿ

ಹಿಂದೂ ಪದ ಭಾರತೀಯರದ್ದು ಅಲ್ಲಾ, ಅದು ಪರ್ಷಿಯನ್​ನಿಂದ ಬಂದಿದೆ ಅಂತ ಗದಗನಲ್ಲಿ ಬಂಡಾಯ ಸಾಹಿತಿ ಬಸವರಾಜ್ ಸೂಳಿಭಾವಿ ಹೇಳಿಕೆ ನೀಡುವ ಮೂಲಕ ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿದಿದ್ದಾರೆ.

ಹಿಂದೂಸ್ತಾನ್ ಅಲ್ಲ, ಸಿಂಧೂಸ್ತಾನ್ ಮಾಡಿ: ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿದ ಬಂಡಾಯ ಸಾಹಿತಿ ಬಸವರಾಜ್ ಸೂಳಿಭಾವಿ
ಬಂಡಾಯ ಸಾಹಿತಿ ಬಸವರಾಜ್ ಸೂಳಿಭಾವಿ
TV9 Web
| Edited By: |

Updated on:Nov 10, 2022 | 2:43 PM

Share

ಗದಗ: ಪರ್ಷಿಯನ್ ಹಾಗೂ ಇಸ್ಲಾಮ್​ನಲ್ಲಿ ನೋಡಿದರೆ ಆ ಪದದ ಅರ್ಥ ಬೇರೆ ಇದೆ. ನಮ್ಮದು ಅಲ್ಲದ ಪದದಿಂದ ಇಷ್ಟೆಲ್ಲಾ ಚರ್ಚೆ ಯಾಕೇ? ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ (Sathish Jarakiholi) ಹೇಳಿಕೆ ಸರಿಯಿದೆ. ಹಿಂದೂ ಪದ ಒಂದು ನಾಗರಿಕ ಸಮಾಜ ಬಳಸದಂತ ಪದವಾಗಿದೆ ಎಂದು ಬಂಡಾಯ ಸಾಹಿತಿ ಬಸವರಾಜ್ ಸೂಳಿಭಾವಿ ಹೇಳಿದರು. ಇಸ್ಲಾಂ ಸಂಸ್ಕೃತಿಯನ್ನು ಪರಕೀಯರ ಸಂಸ್ಕೃತಿ ಅಂತ ವಿರೋಧ ಮಾಡುತ್ತೀರಿ. ಅವರು ಕೊಟ್ಟಿರುವ ಪದದ ಬಗ್ಗೆ ನಿಮಗೆ ಯಾಕೇ ಇಷ್ಟೊಂದು ಪ್ರೀತಿ ಅಂತ ಪ್ರಶ್ನಿಸಿದ್ದಾರೆ. ಹಿಂದೂಸ್ತಾನ್ ಎನ್ನುವುದು ಮಮ್ಮಡಿಯನ್ಸ್ ಕೊಟ್ಟಿರುವ ಪದ. ನೀವು ಹಿಂದುಸ್ತಾನ್ ಅಲ್ಲಾ ಸಿಂದೂಸ್ತಾನ ಅಂತಾ ಮಾಡಿ ಎಂದು ಸವಾಲು ಹಾಕಿದ್ದಾರೆ.

ಒಂದು ಪದವನ್ನು ಹುಟ್ಟಿಸಲಾಗದಂತ ಬೌದ್ಧಿಕ ದಾರಿದ್ರ್ಯ ಇದಿಯಾ ಅಂತ ಪ್ರಶ್ನಿಸಿದ ಬಸವರಾಜ್ ಸೂಳಿಭಾವಿ, ನಮ್ಮದು ಸಿಂಧೂ ಸಂಸ್ಕೃತಿ, ದ್ರಾವಿಡ ಸಂಸ್ಕೃತಿ, ದೇಶಕ್ಕೆ ಭಾರತ್ ಖಂಡ ಅಂತಾ ಹೆಸರು ಇದೆ. ಭಾರತ್ ಖಂಡ್ ಭಾರತ್ ಖಂಡೇ, ಜಂಬೂ ದ್ವೀಪ ಎಂದು ಹೆಸರು ಇದೆ. ಚರಿತ್ರೆಯನ್ನು ಹುಡುಕಿದರೆ ಹಿಂದೂಸ್ತಾನ್ ಅಂತಾ ಎಲ್ಲಿದೆ ಎಂದು ಪ್ರಶ್ನಿಸಿದರು. ಪದಗಳ ಬಗ್ಗೆ ಚರ್ಚೆ ನಡೆಯಬೇಕು, ಭಾವನಾತ್ಮಕ ಅಂಧತ್ವದಿಂದ ನೋಡಬಾರದು. ಹಿಂದೂ ಪದ ಪರ್ಷಿಯನ್ ಭಾಷೆಯಿಂದ ಬಂದಿದೆ. ಹಿಂದೂ ಪದ ಎನ್ನುವದು ಈ ದೇಶದ ಮೂಲತವಾದರೆ ಬಹಿರಂಗ ಚರ್ಚೆಗೆ ಬನ್ನಿ ಅಂತ ಸವಾಲು ಹಾಕಿದರು.

ಗದಗನಲ್ಲಿ ಸಂವಾದ ಕಾರ್ಯಕ್ರಮವನ್ನು ಆಯೋಜನೆ ಮಾಡೋಣ. ಯಾವುದು ನಮ್ಮ ಪದ ಅಲ್ಲವೋ ಆ ಪದವನ್ನು ಇಟ್ಟುಕೊಂಡು ಮೂಲ ನಿವಾಸಿಗಳ ವಿರುದ್ಧ ಷಡ್ಯಂತರ ಮಾಡಲಾಗುತ್ತಿದೆ ಎಂದ ಬಂಡಾಯ ಸಾಹಿತಿ ಬಸವರಾಜ್, ಸತೀಶ್ ಜಾರಕಿಹೊಳಿಯವರ ಮಾತನ್ನು ಎಲ್ಲರು ಒಪ್ಪಿಕೊಳ್ಳಬೇಕು. ನನ್ನ ಮಾತಿನಲ್ಲಿ ಸತ್ಯಾಂಶ ಇಲ್ಲದಿದ್ದರೆ, ಇತಿಹಾಸಕಾರರ ಸಮಿತಿಯನ್ನು ರಚನೆ ಮಾಡಿ. ಅದನ್ನು ಮಾಡಬೇಕಾದವರು ಸರ್ಕಾರದವರಲ್ಲ, ಬದಲಾಗಿ ಈಗೀನ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು. ಸರ್ಕಾರ ತನಿಖೆ ಬೇಕಾದನ್ನು ಮಾಡಿಕೊಳ್ಳುತ್ತದೆ. ಹಿಂದೂ ಪದದ ಮೂಲವನ್ನು ಸಾರ್ವಜನಿಕವಾಗಿ ಬಹಿರಂಗ ಮಾಡಬೇಕು. ಇಲ್ಲವಾದರೆ ಇಂತಹ ಭಾವನಾತ್ಮಕ ಪದಗಳನ್ನು ಇಟ್ಟುಕೊಂಡು ದೇಶದಲ್ಲಿ ಅರಾಜಕತೆ ಸೃಷ್ಟಿ ಮಾಡುವ ಕೆಲಸವಾಗುತ್ತದೆ ಎಂದರು.

ಈವಾಗ ನಮ್ಮ ಅಭಿಪ್ರಾಯ ಹೇಳಲು ಆಗದಂತ ಸ್ಥಿತಿ ನಿರ್ಮಣವಾಗಿದೆ. ಇಲ್ಲಿ ಪ್ರಜಾಪ್ರಭುತ್ವ ಇಲ್ಲ, ಅಂದಾ ಗುಂದಿ ಆಡಳಿತ ನಡೆಯುತ್ತಿದೆ. ಸರ್ವಾಧಿಕಾರಿ ಆಡಳಿದ ನಡೆಯುತ್ತಿದೆ. ರಾಮಾಯಣ ಹಾಗೂ ಮಹಾಭಾರತದಲ್ಲಿ ಈ ವಿಚಾರಗಳು ಇಲ್ಲ. ಈ ದೇಶದ ಅತ್ಯುನ್ನತ ಗ್ರಂಥಗಳನ್ನು ಬ್ರಾಹ್ಮಣೇತರರು ಬರೆದಿದ್ದಾರೆ. ಆ ಗ್ರಂಥಗಳನ್ನು ಇಟ್ಟುಕೊಂಡು ಬ್ರಾಹ್ಮಣರು ಆಟವನ್ನು ಆಡುತ್ತಿದ್ದಾರೆ. ಅದು ನಮ್ಮ ದುರಂತ. ಹಿಂದೂ ಪದದ ಬಹಿರಂಗವಾಗಿ ಚರ್ಚೆ ಮಾಡಲಿ, ಅದಕ್ಕೆ ನಾವು ಬದ್ಧರಿದ್ದೇವೆ ಎಂದರು.

ವರದಿ: ಸಂಜೀವ ಪಾಂಡ್ರೆ, ಟಿವಿ9 ಗದಗ

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:43 pm, Thu, 10 November 22

Follow Us
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!
ತವರಿನಿಂದ ಹೊರಗೆ RCBಗೆ ಮೊದಲ ಪಂದ್ಯ, ಹೇಗಿದೆ ಉಭಯ ತಂಡಗಳ ಬಲಾಬಲ?
ತವರಿನಿಂದ ಹೊರಗೆ RCBಗೆ ಮೊದಲ ಪಂದ್ಯ, ಹೇಗಿದೆ ಉಭಯ ತಂಡಗಳ ಬಲಾಬಲ?