AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯರನ್ನ ಮಾಜಿ ಸಿಎಂ ಅಂದ್ರೆ ನೋವಾಗುತ್ತೆ, ಸಿದ್ದರಾಮಯ್ಯನವರೇ ಎಂದು ಹೇಳಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ. ಮತ್ತೆ ಅವಕಾಶ ಬಂದ್ರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬಹುದು. ಜನ ಇಷ್ಟಪಟ್ಟರೆ, ಸಿದ್ದರಾಮಯ್ಯರ ನೋವನ್ನು ಅರ್ಥ ಮಾಡಿಕೊಂಡರೆ ಅವರು ಮತ್ತೆ ಮುಖ್ಯಮಂತ್ರಿ ಸ್ಥಾನ ಅಲಂಕರಿಸುತ್ತಾರೆ. ಹೀಗಾಗಿ ಅವರನ್ನು ಸಿದ್ದರಾಮಯ್ಯನವರೇ ಅಥವಾ ವಿರೋಧ ಪಕ್ಷದ ನಾಯಕರೇ ಎಂದು ಕರೆಯುವುದು ಉತ್ತಮ.

ಸಿದ್ದರಾಮಯ್ಯರನ್ನ ಮಾಜಿ ಸಿಎಂ ಅಂದ್ರೆ ನೋವಾಗುತ್ತೆ, ಸಿದ್ದರಾಮಯ್ಯನವರೇ ಎಂದು ಹೇಳಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್
ರಮೇಶ್ ಕುಮಾರ್​ ಮತ್ತು ಸಿದ್ದರಾಮಯ್ಯ
Skanda
| Updated By: preethi shettigar|

Updated on: Apr 04, 2021 | 1:55 PM

Share

ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಮಾಜಿ ಮುಖ್ಯಮಂತ್ರಿ ಎಂದು ಹೇಳುವುದನ್ನು ಕೇಳಿದರೆ ಮನಸ್ಸಿಗೆ ನೋವಾಗುತ್ತೆ. ಅವರು ಮಾಜಿ ಅಲ್ಲ. ಮಾಜಿ ಮುಖ್ಯಮಂತ್ರಿ ಅಂತ ಹೇಳಿ ಉಪ್ಪಿನಕಾಯಿ ಹಾಕಿ ನೆಕ್ತೀರಾ? ಒಂದು ವೇಳೆ ಅವರನ್ನು ಮಾಜಿ ಮುಖ್ಯಮಂತ್ರಿ ಅಂತ ಕರೆದರೆ ಅದು ಅವರಿಗೆ ಮಾಡುವ ಅಪಮಾನ. ಹೀಗಾಗಿ ಅವರನ್ನು ಸಿದ್ದರಾಮಯ್ಯನವರೇ ಎಂದು ಕರೆಯಿರಿ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬೆಂಗಳೂರಿನಲ್ಲಿ ಹೇಳಿದ್ದಾರೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ. ಮತ್ತೆ ಅವಕಾಶ ಬಂದ್ರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬಹುದು. ಜನ ಇಷ್ಟಪಟ್ಟರೆ, ಸಿದ್ದರಾಮಯ್ಯರ ನೋವನ್ನು ಅರ್ಥ ಮಾಡಿಕೊಂಡರೆ ಅವರು ಮತ್ತೆ ಮುಖ್ಯಮಂತ್ರಿ ಸ್ಥಾನ ಅಲಂಕರಿಸುತ್ತಾರೆ. ಹೀಗಾಗಿ ಅವರನ್ನು ಸಿದ್ದರಾಮಯ್ಯನವರೇ ಅಥವಾ ವಿರೋಧ ಪಕ್ಷದ ನಾಯಕರೇ ಎಂದು ಕರೆಯುವುದು ಉತ್ತಮವೆಂದು ರಮೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ಸಿದ್ದರಾಮಯ್ಯ ಹೇಳಿದ್ದೆಲ್ಲ ವೇದಾಂತವಲ್ಲ ಹಾವೇರಿ: ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ತರುವ ಒತ್ತಾಯಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಬಿ.ಸಿ.ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ಹೇಳಿದ ತಕ್ಷಣವೇ ಅದು ವೇದಾಂತವಲ್ಲ. ಈ ಹಿಂದೆ ಹೆಚ್.ವೈ.ಮೇಟಿ ಕೇಸ್​ನಲ್ಲಿ ಎಫ್ಐಆರ್ ಕೂಡ ಆಗಿರಲಿಲ್ಲ. ನಮ್ಮ ಸರ್ಕಾರ ಎಸ್ಐಟಿ ತನಿಖೆಗೆ ಸೂಚನೆ ಕೊಟ್ಟಿದೆ ಎಂದು ಹೇಳಿದರು. ಸಂತ್ರಸ್ತೆ ಬಂದ ಬಳಿಕ ಪ್ರಕರಣ ಕೂಡ ದಾಖಲಿಸಿದ್ದಾರೆ. ಅವಶ್ಯಕತೆ ಕಂಡುಬಂದರೆ ರಮೇಶ್ ಜಾರಕಿಹೊಳಿ ವಿರುದ್ಧ ಆರೋಪ ಸಾಬೀತಾದರೆ, ಖಂಡಿತವಾಗಿ ರಮೇಶ್ ಜಾರಕಿಹೊಳಿಯನ್ನು ಬಂಧಿಸುತ್ತಾರೆ ಎಂದು ಹೇಳಿದ ಸಚಿವ ಬಿ.ಸಿ.ಪಾಟೀಲ್, ಚಿತ್ರರಂಗಕ್ಕೆ ಕೊರೊನಾ ನಿಯಮದಲ್ಲಿ ಸಡಿಲಿಕೆ ಕೊಟ್ಟಿರುವುದಕ್ಕೆ ಸಮರ್ಥನೆ ಮಾಡಿಕೊಂಡರು. ಚಿತ್ರರಂಗಕ್ಕೆ ನಿಯಮಗಳ ಸಡಿಲಿಕೆ ಅತಿ ಅವಶ್ಯಕ ಇದೆ. ಎಲ್ಲರೂ ಕೂಡ ಮಾಸ್ಕ್ ಧರಿಸಬೇಕು ಎನ್ನುವ ಸೂಚನೆ ಕೊಟ್ಟಿದ್ದಾರೆ. ಆದರೆ ಕೊರೊನಾ ನಿಯಮಗಳನ್ನು ಕಳೆದ ವರ್ಷದಂತೆ ಜನರು ಪಾಲನೆ ಮಾಡುತ್ತಿಲ್ಲ. ಜನರ ಜವಾಬ್ದಾರಿಯೂ ಬಹಳಷ್ಟಿದೆ. ಒಂದು ವಾರದ ಮಟ್ಟಿಗೆ ಸಿನಿಮಾ ಮಂದಿರ ಬಿಟ್ಟಿದ್ದಾರೆ. ಜನರೂ ಈ ಬಗ್ಗೆ ಜಾಗೃತರಾಗಿರಬೇಕು ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ನಾನು ಸಾಮಾನ್ಯವಾಗಿ ದೇವಸ್ಥಾನಗಳಿಗೆ ಹೋಗಲ್ಲ, ಏಕೆಂದರೆ ದೇವರು ನನ್ನಲ್ಲೇ ಇದ್ದಾನೆ: ಸಿದ್ದರಾಮಯ್ಯ

‘ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ’.. ಬಾಳೆಹಣ್ಣಿನ ಮೇಲೆ ಬರೆದು ರಥದ ಮೇಲೆ ತೂರಿ ಪ್ರಾರ್ಥನೆ

(Calling Siddaramaiah as Ex Chief Minister is disgrace to him says Ex speaker Ramesh Kumar)

ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಜೈಲಿನ ಗೋಡೆ ಹಾರಿ ಪರಾರಿಯಾಗಿದ್ದ ಅಪರಾಧಿ ಅಡಗಿಕೊಂಡಿದ್ದೆಲ್ಲಿ ನೋಡಿ
ಜೈಲಿನ ಗೋಡೆ ಹಾರಿ ಪರಾರಿಯಾಗಿದ್ದ ಅಪರಾಧಿ ಅಡಗಿಕೊಂಡಿದ್ದೆಲ್ಲಿ ನೋಡಿ
ಉತ್ತರ ಗೊತ್ತಾಗದಾಗ ವಿಜಯೇಂದ್ರರಿಂದ ಭಾಷೆ ಬದಲಿಸುವ ತಂತ್ರಗಾರಿಕೆ!
ಉತ್ತರ ಗೊತ್ತಾಗದಾಗ ವಿಜಯೇಂದ್ರರಿಂದ ಭಾಷೆ ಬದಲಿಸುವ ತಂತ್ರಗಾರಿಕೆ!
‘ನಡೀರಿ ಹೋಗೋಣ ಎಂದರು’; ವೀರಪ್ಪನ್ ಕಂಡಾಗ ರಾಜ್​ಕುಮಾರ್ ಪ್ರತಿಕ್ರಿಯೆ
‘ನಡೀರಿ ಹೋಗೋಣ ಎಂದರು’; ವೀರಪ್ಪನ್ ಕಂಡಾಗ ರಾಜ್​ಕುಮಾರ್ ಪ್ರತಿಕ್ರಿಯೆ