ಆಂಬ್ಯುಲೆನ್ಸ್​ನಲ್ಲಿ ಪ್ರಚಾರಕ್ಕೆ ಬರ್ತಾರೆ: ದೇವೇಗೌಡ ವಿರುದ್ಧ ಡಿಕೆ ಸುರೇಶ್ ಹೇಳಿಕೆಯನ್ನೇ ಪ್ರತ್ಯಸ್ತ್ರ ಮಾಡಲು ಮುಂದಾದ ದಳ

ಚನ್ನಪಟ್ಟಣ ಉಪಚುನಾವಣೆ ಪ್ರಚಾರದ ಭರಾಟೆ ಜೋರಾಗುತ್ತಿದ್ದು, ರಾಜಕೀಯ ನಾಯಕರ ವಾಗ್ಯುದ್ಧ ಆರಂಭವಾಗಿದೆ. ಅತ್ತ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಬಗ್ಗೆ ಕಾಂಗ್ರೆಸ್ ನಾಯಕ ಡಿಕೆ ಸುರೇಶ್ ವಿವಾದಾತ್ಮಕ ಹೇಳಿಕೆ ನೀಡಿದ್ದು ಜೆಡಿಎಸ್ ನಾಯಕರನ್ನು ಕೆರಳಿಸಿದೆ. ಸುರೇಶ್ ಹೇಳಿದ್ದೇನು? ಜೆಡಿಎಸ್ ನಾಯಕರ ತಿರುಗೇಟು ಏನು ಎಂಬ ವಿವರ ಇಲ್ಲಿದೆ.

ಆಂಬ್ಯುಲೆನ್ಸ್​ನಲ್ಲಿ ಪ್ರಚಾರಕ್ಕೆ ಬರ್ತಾರೆ: ದೇವೇಗೌಡ ವಿರುದ್ಧ ಡಿಕೆ ಸುರೇಶ್ ಹೇಳಿಕೆಯನ್ನೇ ಪ್ರತ್ಯಸ್ತ್ರ ಮಾಡಲು ಮುಂದಾದ ದಳ
ದೇವೇಗೌಡ & ಡಿಕೆ ಸುರೇಶ್ (ಸಂಗ್ರಹ ಚಿತ್ರ)
Edited By:

Updated on: Oct 28, 2024 | 9:29 AM

ರಾಮನಗರ, ಅಕ್ಟೋಬರ್ 28: ಚನ್ನಪಟ್ಟಣ ಉಪಚುನಾವಣೆ ಕಣ ರಂಗೇರುತ್ತಿದೆ. ರಾಜಕೀಯ ಆರೋಪ, ಪ್ರತ್ಯಾರೋಪಗಳು ಬಿರುಸುಪಡೆದುಕೊಳ್ಳುತ್ತಿವೆ. ಈ ಮಧ್ಯೆ, ಕಾಂಗ್ರೆಸ್ ನಾಯಕ ಡಿಕೆ ಸುರೇಶ್ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ವಿರುದ್ಧ ನೀಡಿರುವ ಹೇಳಿಕೆಯೊಂದು ಇದೀಗ ಜೆಡಿಎಸ್​ಗೆ ಹೊಸ ಅಸ್ತ್ರ ಒದಗಿಸಿಕೊಟ್ಟಿದೆ. ಇದನ್ನೇ ಮುಂದಿಟ್ಟುಕೊಂಡು ಕಾಂಗ್ರೆಸ್ ವಿರುದ್ಧ ತಿರುಗೇಟು ನೀಡಲು ಜೆಡಿಎಸ್ ನಾಯಕರು, ಕಾರ್ಯಕರ್ತರು ತಂತ್ರಗಾರಿಕೆ ರೂಪಿಸುತ್ತಿದ್ದಾರೆ.

ದೇವೇಗೌಡರ ಬಗ್ಗೆ ಡಿಕೆ ಸುರೇಶ್ ಹೇಳಿದ್ದೇನು?

ಚನ್ನಪಟ್ಟಣ ಉಪಚುನಾವಣೆಗೆ ಭಾನುವಾರ ಕೋಡಂಬಹಳ್ಳಿಯಲ್ಲಿ ಪ್ರಚಾರ ನಡೆಸಿದ್ದ ಡಿಕೆ ಸುರೇಶ್ ಮಾಜಿ ಪ್ರಧಾನಿ ದೇವೇಗೌಡರ ವಿರುದ್ಧ ಟೀಕೆ ಮಾಡಿದ್ದರು. ನಾಳೆ ಆಂಬ್ಯುಲೆನ್ಸ್​ ತೆಗೆದುಕೊಂಡು ಬಂದು ಪ್ರಚಾರ ಮಾಡುತ್ತಾರೆ. ಪ್ರಚಾರಕ್ಕೆ ಬರಲಿ, ಅವರ ಆರೋಗ್ಯವೂ ಚೆನ್ನಾಗಿರಲಿ ಎಂದು ಹೇಳಿದ್ದರು.

ಡಿಕೆ ಸುರೇಶ್ ಮಾತಿನಿಂದ ಜೆಡಿಎಸ್ ನಾಯಕರು ಕೆಂಡಾಮಂಡಲವಾಗಿದ್ದಾರೆ. ಇದೀಗ ಡಿಕೆ ಸುರೇಶ್ ಹೇಳಿಕೆಯನ್ನೇ ಮುಂದಿಟ್ಟುಕೊಂಡು ಕೌಂಟರ್ ಕೊಡಲು ಸಿದ್ಧತೆ ನಡೆಸಿದ್ದಾರೆ.

ಜೆಡಿಎಸ್ ನಾಯಕರಿಂದ ಹೈ ಸ್ಪೀಡ್ ಪ್ರಚಾರ

ಚನ್ನಪಟ್ಟಣ ಎನ್​ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಇಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಹೆಚ್​ಡಿ ಕುಮಾರಸ್ವಾಮಿ ಪ್ರಚಾರ ನಡೆಸಲಿದ್ದಾರೆ. ಮತ್ತೊಂದೆಡೆ, 26 ಹಳ್ಳಿಗಳ ಗ್ರಾಮಸ್ಥರ ಜೊತೆ ನಿಖಿಲ್ ಪ್ರಚಾರ ಮಾಡಲಿದ್ದಾರೆ. ಸಂಸದ ಯದುವೀರ್ ಒಡೆಯರ್ ಜೊತೆ ಪ್ರತ್ಯೇಕವಾಗಿ ಕುಮಾರಸ್ವಾಮಿ ಪ್ರಚಾರ ಮಾಡಲಿದ್ದಾರೆ. ಒಂದೇ‌ ದಿನದಲ್ಲಿ 25 ಸಾವಿರಕ್ಕೂ ಅಧಿಕ ಮತದಾರರ ಸಂಪರ್ಕ ಮಾಡಲು ಜೆಡಿಎಸ್ ಮುಂದಾಗಿದೆ. ಕಡಿಮೆ ಸಮಯದಲ್ಲಿ ಅಧಿಕ ಸ್ಥಳಗಳಿಗೆ ಭೇಟಿ ನೀಡಲು ಉದ್ದೇಶಿಸಲಾಗಿದೆ.

ಇದನ್ನೂ ಓದಿ: ಸಿಎಂ ಆಗಬಲ್ಲ ಡಿಕೆ ಶಿವಕುಮಾರ್​ರನ್ನು ಬಿಟ್ಟುಕೊಡುತ್ತೀರಾ: ಚನ್ನಪಟ್ಟಣದಲ್ಲಿ ಶಿವಲಿಂಗೇಗೌಡ ಪ್ರಶ್ನೆ

ಯಾವುದೇ ಕಾರಣಕ್ಕೂ ಪಕ್ಷಾಂತರಿಗಳಿಗೆ ಮತ ನೀಡಬೇಡಿ ಎಂದು ಮತದಾರರಲ್ಲಿ ಮನವಿ ಮಾಡಲು ದಳಪತಿಗಳು ಉದ್ದೇಶಿಸಿದ್ದಾರೆ. ಜತೆಗೆ, ರಾಜ್ಯ ಸರ್ಕಾರದ ಮೇಲಿನ ಅಪಾದನೆಗಳನ್ನೇ ಅಸ್ತ್ರವನ್ನಾಗಿಸಿಕೊಳ್ಳಲು ಮುಂದಾಗಿದ್ದಾರೆ. ಸಿಪಿ ಯೋಗೇಶ್ವರ್ ಮಾತಿಗೆ ತಪ್ಪಿದ್ದಾರೆ, ಟಿಕೆಟ್ ತೆಗದುಕೊಳ್ಳದೇ ಪಕ್ಷಾಂತರ ಮಾಡಿದ್ದಾರೆ ಎಂಬುದನ್ನು ಮತದಾರರಿಗೆ ಮನವರಿಕೆ ಮಾಡಿಕೊಡಲು ಜೆಡಿಎಸ್ ನಾಯಕರು ಉದ್ದೇಶಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Syed Nizamuddin

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ

Read More
Follow Us