AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆನರಾ ಬ್ಯಾಂಕ್‌ನಿಂದ 50ಕ್ಕೂ ಹೆಚ್ಚು ರೈತರಿಗೆ ನೋಟಿಸ್; ಕೊರೊನಾ ಸಂಕಷ್ಟದಲ್ಲೂ ಸಾಲ ಮರುಪಾವತಿಗೆ ಸೂಚನೆ

Canara Bank Loan: ನನ್ನ ಮಗ ಸಾಲದಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಶರಣಾದ ಮಗನ ಸಾಲಕ್ಕೆ ವಯೋವೃದ್ಧ ತಂದೆ-ತಾಯಿಗೆ ನೋಟಿಸ್ ನೀಡುತ್ತಿದ್ದಾರೆ. ಹೀಗಾದ್ರೆ ನಾವು ಬದುಕೋದು ಹೇಗೆ ಎಂದು ರೈತ ಮಹಿಳೆ ಅಳಲು ತೋಡಿಕೊಂಡಿದ್ದಾರೆ. ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಹಲವಾರು ರೈತರು ಈ ವಿಷಯದಲ್ಲಿ ಸರ್ಕಾರ ಕೂಡಲೆ ಸ್ಪಂದಿಸಲಿ ಎಂದು ಆಗ್ರಹಿಸಿದ್ದಾರೆ.

ಕೆನರಾ ಬ್ಯಾಂಕ್‌ನಿಂದ 50ಕ್ಕೂ ಹೆಚ್ಚು ರೈತರಿಗೆ ನೋಟಿಸ್; ಕೊರೊನಾ ಸಂಕಷ್ಟದಲ್ಲೂ ಸಾಲ ಮರುಪಾವತಿಗೆ ಸೂಚನೆ
ಕೆನರಾ ಬ್ಯಾಂಕ್‌ನಿಂದ 50ಕ್ಕೂ ಹೆಚ್ಚು ರೈತರಿಗೆ ನೋಟಿಸ್; ಕೊರೊನಾ ಸಂಕಷ್ಟದಲ್ಲೂ ಸಾಲ ಮರುಪಾವತಿಗೆ ಸೂಚನೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 07, 2021 | 11:30 AM

Share

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ಕೆನರಾ ಬ್ಯಾಂಕ್ ಶಾಖೆಯು ಸಾಲ ಮರುಪಾವತಿ ಮಾಡುವಂತೆ 50ಕ್ಕೂ ಹೆಚ್ಚು ರೈತರಿಗೆ ನೋಟಿಸ್ ನೀಡಿದೆ. ಚನ್ನರಾಯಪಟ್ಟಣದ ಕೆನರಾ ಬ್ಯಾಂಕ್ ಶಾಖೆ ವತಿಯಿಂದ ಅಧಿಕಾರಿಗಳು 50ಕ್ಕೂ ಹೆಚ್ಚು ರೈತರಿಗೆ ನೋಟಿಸ್ ನೀಡಿದ್ದಾರೆ. ಸಂಕಷ್ಟ ಕಾಲದಲ್ಲಿ ನೋಟಿಸ್ ನೀಡಿದರೆ ನಾವೇನು ಮಾಡಬೇಕು? ನೀವು ನೋಟಿಸ್ ನೀಡಿದರೆ ನಾವು ಬದುಕೋದು ಕಷ್ಟವಾಗುತ್ತೆ. ಸಾಲ ಮರುಪಾವತಿ ಮಾಡೋದು ಹೇಗೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.

ಕೊರೊನಾ ಕರ್ಫ್ಯೂ ನಡುವೆಯೂ ಸ್ಥಳೀಯ ಕೆನರಾ ಬ್ಯಾಂಕ್ ಶಾಖೆ ಸಿಬ್ಬಂದಿ ಸಾಲ ಮರುಪಾವತಿ ಮಾಡುವಂತೆ ರೈತರ ಮನೆ ಮನೆಗೆ ಬಂದು ನೋಟಿಸ್ ನೀಡುತ್ತಿದ್ದಾರೆ. ಮೊದಲೇ ಕೊರೋನಾ ಸಂಕಷ್ಟದಿಂದ ಸರಿಯಾಗಿ ಕೂಲಿ ಸಿಗುತ್ತಿಲ್ಲ. ಬೆಳೆದ ಬೆಳೆಗೆ ಸರಿಯಾಗಿ ಬೆಲೆ ಸಿಗುತ್ತಿಲ್ಲ. ಅಂಥದ್ದರಲ್ಲಿ ಸಾಲ ಮರುಪಾವತಿ ಮಾಡೋದು ಹೇಗೆ ಎಂದು ನೋಟಿಸ್ ಪಡೆದಿರುವ 50ಕ್ಕೂ ಹೆಚ್ಚು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

canara bank channarayana pattana branch issue loan repayment notice to 50 farmers in middle of covid plight 1

ಚನ್ನರಾಯಪಟ್ಟಣದ ಕೆನರಾ ಬ್ಯಾಂಕ್ ಶಾಖೆಯಿಂದ ಸಾಲ ಮರುಪಾವತಿ ಮಾಡುವಂತೆ ರೈತರಿಗೆ ನೋಟಿಸ್

ದಯವಿಟ್ಟು ನಮ್ಮ ಸಾಲಮನ್ನಾ ಮಾಡಿ. ಬ್ಯಾಂಕ್‌ಗಳಿಗೆ ನೋಟಿಸ್ ನೀಡಿ ಕಿರುಕುಳ ನೀಡದಂತೆ ಎಚ್ಚರಿಕೆ ನೀಡಿ ಎಂದು ರೈತ ಮುಖಂಡರು ಆಗ್ರಹ ಮಾಡಿದ್ದಾರೆ. ನನ್ನ ಮಗ ಸಾಲದಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಶರಣಾದ ಮಗನ ಸಾಲಕ್ಕೆ ವಯೋವೃದ್ಧ ತಂದೆ-ತಾಯಿಗೆ ನೋಟಿಸ್ ನೀಡುತ್ತಿದ್ದಾರೆ. ಹೀಗಾದ್ರೆ ನಾವು ಬದುಕೋದು ಹೇಗೆ ಎಂದು ರೈತ ಮಹಿಳೆ ಅಳಲು ತೋಡಿಕೊಂಡಿದ್ದಾರೆ. ಚನ್ನರಾಯಪಟ್ಟಣ ತಾಲ್ಲೂಕಿನ ಹಲವಾರು ರೈತರು ಈ ವಿಷಯದಲ್ಲಿ ಸರ್ಕಾರ ಕೂಡಲೆ ಸ್ಪಂದಿಸಲಿ ಎಂದು ಆಗ್ರಹಿಸಿದ್ದಾರೆ.

canara bank channarayana pattana branch issue loan repayment notice to 50 farmers in middle of covid plight 7

ಮಗನ ಸಾಲಕ್ಕೆ ವಯೋವೃದ್ಧ ತಂದೆ-ತಾಯಿಗೆ ನೋಟಿಸ್

canara bank channarayana pattana branch issue loan repayment notice to 50 farmers in middle of covid plight 3

ಚನ್ನರಾಯಪಟ್ಟಣದ ಕೆನರಾ ಬ್ಯಾಂಕ್ ಶಾಖೆಯಿಂದ ಸಾಲ ಮರುಪಾವತಿ ಮಾಡುವಂತೆ ರೈತರಿಗೆ ರಿಜಿಸ್ಟರ್​ ಪೋಸ್ಟ್​ ಮೂಲಕ ನೋಟಿಸ್(canara bank channarayana pattana branch issue loan repayment notice to 50 farmers in middle of covid plight)

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ