AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಕ್​ ಪ್ರಿಯರಿಗೆ ಕಹಿ ಸುದ್ದಿ: ಕೇಕ್​ನಲ್ಲೂ ಕ್ಯಾನ್ಸರ್​ ಕಾರಕ ಅಂಶ ಪತ್ತೆ!

ಕೇಕ್ ಪ್ರಿಯರಿಗೆ ಆಹಾರ ಇಲಾಖೆ ಕಹಿ ಸುದ್ದಿ ನೀಡಿದೆ. ನೀವೇನಾದರು ರೆಡ್ ವೆಲ್ವೆಟ್, ಬ್ಲಾಕ್ ಫಾರೆಸ್ಟ್ ಕೇಕ್ ಲವರ್ಸ್ ಆಗಿದ್ದರೇ ಈ ಸುದ್ದಿಯನ್ನು ಒಮ್ಮೆ ಓದಿ. ಏಕೆಂದರೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ಆತಂಕಕಾರಿ ಅಂಶ ಹೊರಬಿದ್ದಿದೆ.

ಕೇಕ್​ ಪ್ರಿಯರಿಗೆ ಕಹಿ ಸುದ್ದಿ: ಕೇಕ್​ನಲ್ಲೂ ಕ್ಯಾನ್ಸರ್​ ಕಾರಕ ಅಂಶ ಪತ್ತೆ!
ಕೇಕ್
Vinay Kashappanavar
| Edited By: |

Updated on:Sep 29, 2024 | 8:18 AM

Share

ಬೆಂಗಳೂರು, ಸೆಪ್ಟೆಂಬರ್​ 29: ಗೋಬಿ, ಕಬಾಬ್​ ಮತ್ತು ಪಾನಿಪುರಿಗೆ ಬಳಸುವ ಪದಾರ್ಥಗಳಲ್ಲಿ ಕ್ಯಾನ್ಸರ್ (Cancer)​ ಕಾರಕ ಅಂಶಗಳು ಪತ್ತೆಯಾಗಿವೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ (FSSAI) ತಿಳಿಸಿತ್ತು. ಇದೀಗ, ಕೇಕ್​​ಗೆ (Cake) ಬಳಸುವ ಪದಾರ್ಥಗಳಲ್ಲೂ ಕ್ಯಾನ್ಸರ್​​ಕಾರಕ ಅಂಶ ಪತ್ತೆಯಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ತಿಳಿಸಿದೆ.

ಕೇಕ್​​ಗೆ ಬಳಸುವ ಪದಾರ್ಥಗಳು ಕಲಬರಿಕೆಯಿಂದ ಕೂಡಿವೆ ಎಂಬ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಕೇಕ್​ ಮಾದರಿಗಳನ್ನು ಸಂಗ್ರಹಿಸಿದರು. ಪರಿಶೀಲನೆಗೆ ಒಳಪಡಿಸಿದಾಗ 12 ಮಾದರಿ ಕೇಕ್​ಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿವೆ. ವಿಶೇಷವಾಗಿ ರೆಡ್ ವೆಲ್ವೆಟ್ ಹಾಗೂ ಬ್ಲಾಕ್ ಫಾರೆಸ್ಟ್ ಕೇಕ್​ನಲ್ಲಿ ಹೆಚ್ಚು ಬಣ್ಣ ಬಳಕೆ ಮಾಡುವುದರಿಂದ, ಇದು ಮನುಷ್ಯನ ಆರೋಗ್ಯಕ್ಕೆ ಹಾನಿ ಉಂಟು ಮಾಡುತ್ತದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಗೋಬಿ, ಕಬಾಬ್​ ಬಳಿಕ ಪಾನಿಪುರಿಯಲ್ಲೂ ಕ್ಯಾನ್ಸರ್​ ಕಾರಕ ಅಂಶ ಪತ್ತೆ

ಹಾಗೂ, ರುಚಿ ಎನಿಸುವ ಕೇಕ್ ತಿನ್ನುವ ಮುನ್ನ ಎಚ್ಚರಿಕೆ ವಹಿಸಬೇಕಿದೆ. 12 ಮಾದರಿಗಳಲ್ಲಿ ಅಲೂನಾ ರೆಡ್, ಸನ್ ಸೆಟ್ ಯೆಲ್ಲೋ, ಪೊನುಸೆಯಾ 4R , ಕಾರ್ಮಿಯೋಸೆನ್ ಎಂಬ ಅಂಶ ಪತ್ತೆಯಾಗಿದೆ. ಈ ಕೃತಕ ಬಣ್ಣಗಳಿಂದ ಆರೋಗ್ಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ.

ಹೀಗಾಗಿ ರೆಡ್ ವೆಲ್ವೆಟ್ ಹಾಗೂ ಬ್ಲಾಕ್ ಫಾರೆಸ್ಟ್ ಕೇಕ್​ಗೆ ಬಣ್ಣ ಬಳಕೆಗೆ ನಿರ್ಬಂಧಿಸಲಾಗಿದೆ. ಆಹಾರ ಸುರಕ್ಷತಾ ಇಲಾಖೆಯ ಸೂಚನೆ ಪಾಲಿಸುವಂತೆ ಕೇಕ್ ತಯಾರಿಕರಿಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:15 am, Sun, 29 September 24

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ