AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಕ್​ ಪ್ರಿಯರಿಗೆ ಕಹಿ ಸುದ್ದಿ: ಕೇಕ್​ನಲ್ಲೂ ಕ್ಯಾನ್ಸರ್​ ಕಾರಕ ಅಂಶ ಪತ್ತೆ!

ಕೇಕ್ ಪ್ರಿಯರಿಗೆ ಆಹಾರ ಇಲಾಖೆ ಕಹಿ ಸುದ್ದಿ ನೀಡಿದೆ. ನೀವೇನಾದರು ರೆಡ್ ವೆಲ್ವೆಟ್, ಬ್ಲಾಕ್ ಫಾರೆಸ್ಟ್ ಕೇಕ್ ಲವರ್ಸ್ ಆಗಿದ್ದರೇ ಈ ಸುದ್ದಿಯನ್ನು ಒಮ್ಮೆ ಓದಿ. ಏಕೆಂದರೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ಆತಂಕಕಾರಿ ಅಂಶ ಹೊರಬಿದ್ದಿದೆ.

ಕೇಕ್​ ಪ್ರಿಯರಿಗೆ ಕಹಿ ಸುದ್ದಿ: ಕೇಕ್​ನಲ್ಲೂ ಕ್ಯಾನ್ಸರ್​ ಕಾರಕ ಅಂಶ ಪತ್ತೆ!
ಕೇಕ್
Vinay Kashappanavar
| Edited By: ವಿವೇಕ ಬಿರಾದಾರ|

Updated on:Sep 29, 2024 | 8:18 AM

Share

ಬೆಂಗಳೂರು, ಸೆಪ್ಟೆಂಬರ್​ 29: ಗೋಬಿ, ಕಬಾಬ್​ ಮತ್ತು ಪಾನಿಪುರಿಗೆ ಬಳಸುವ ಪದಾರ್ಥಗಳಲ್ಲಿ ಕ್ಯಾನ್ಸರ್ (Cancer)​ ಕಾರಕ ಅಂಶಗಳು ಪತ್ತೆಯಾಗಿವೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ (FSSAI) ತಿಳಿಸಿತ್ತು. ಇದೀಗ, ಕೇಕ್​​ಗೆ (Cake) ಬಳಸುವ ಪದಾರ್ಥಗಳಲ್ಲೂ ಕ್ಯಾನ್ಸರ್​​ಕಾರಕ ಅಂಶ ಪತ್ತೆಯಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ತಿಳಿಸಿದೆ.

ಕೇಕ್​​ಗೆ ಬಳಸುವ ಪದಾರ್ಥಗಳು ಕಲಬರಿಕೆಯಿಂದ ಕೂಡಿವೆ ಎಂಬ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಕೇಕ್​ ಮಾದರಿಗಳನ್ನು ಸಂಗ್ರಹಿಸಿದರು. ಪರಿಶೀಲನೆಗೆ ಒಳಪಡಿಸಿದಾಗ 12 ಮಾದರಿ ಕೇಕ್​ಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿವೆ. ವಿಶೇಷವಾಗಿ ರೆಡ್ ವೆಲ್ವೆಟ್ ಹಾಗೂ ಬ್ಲಾಕ್ ಫಾರೆಸ್ಟ್ ಕೇಕ್​ನಲ್ಲಿ ಹೆಚ್ಚು ಬಣ್ಣ ಬಳಕೆ ಮಾಡುವುದರಿಂದ, ಇದು ಮನುಷ್ಯನ ಆರೋಗ್ಯಕ್ಕೆ ಹಾನಿ ಉಂಟು ಮಾಡುತ್ತದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಗೋಬಿ, ಕಬಾಬ್​ ಬಳಿಕ ಪಾನಿಪುರಿಯಲ್ಲೂ ಕ್ಯಾನ್ಸರ್​ ಕಾರಕ ಅಂಶ ಪತ್ತೆ

ಹಾಗೂ, ರುಚಿ ಎನಿಸುವ ಕೇಕ್ ತಿನ್ನುವ ಮುನ್ನ ಎಚ್ಚರಿಕೆ ವಹಿಸಬೇಕಿದೆ. 12 ಮಾದರಿಗಳಲ್ಲಿ ಅಲೂನಾ ರೆಡ್, ಸನ್ ಸೆಟ್ ಯೆಲ್ಲೋ, ಪೊನುಸೆಯಾ 4R , ಕಾರ್ಮಿಯೋಸೆನ್ ಎಂಬ ಅಂಶ ಪತ್ತೆಯಾಗಿದೆ. ಈ ಕೃತಕ ಬಣ್ಣಗಳಿಂದ ಆರೋಗ್ಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ.

ಹೀಗಾಗಿ ರೆಡ್ ವೆಲ್ವೆಟ್ ಹಾಗೂ ಬ್ಲಾಕ್ ಫಾರೆಸ್ಟ್ ಕೇಕ್​ಗೆ ಬಣ್ಣ ಬಳಕೆಗೆ ನಿರ್ಬಂಧಿಸಲಾಗಿದೆ. ಆಹಾರ ಸುರಕ್ಷತಾ ಇಲಾಖೆಯ ಸೂಚನೆ ಪಾಲಿಸುವಂತೆ ಕೇಕ್ ತಯಾರಿಕರಿಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:15 am, Sun, 29 September 24

Follow Us
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"