AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಕ್​ ಪ್ರಿಯರಿಗೆ ಕಹಿ ಸುದ್ದಿ: ಕೇಕ್​ನಲ್ಲೂ ಕ್ಯಾನ್ಸರ್​ ಕಾರಕ ಅಂಶ ಪತ್ತೆ!

ಕೇಕ್ ಪ್ರಿಯರಿಗೆ ಆಹಾರ ಇಲಾಖೆ ಕಹಿ ಸುದ್ದಿ ನೀಡಿದೆ. ನೀವೇನಾದರು ರೆಡ್ ವೆಲ್ವೆಟ್, ಬ್ಲಾಕ್ ಫಾರೆಸ್ಟ್ ಕೇಕ್ ಲವರ್ಸ್ ಆಗಿದ್ದರೇ ಈ ಸುದ್ದಿಯನ್ನು ಒಮ್ಮೆ ಓದಿ. ಏಕೆಂದರೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ಆತಂಕಕಾರಿ ಅಂಶ ಹೊರಬಿದ್ದಿದೆ.

ಕೇಕ್​ ಪ್ರಿಯರಿಗೆ ಕಹಿ ಸುದ್ದಿ: ಕೇಕ್​ನಲ್ಲೂ ಕ್ಯಾನ್ಸರ್​ ಕಾರಕ ಅಂಶ ಪತ್ತೆ!
ಕೇಕ್
Vinay Kashappanavar
| Edited By: ವಿವೇಕ ಬಿರಾದಾರ|

Updated on:Sep 29, 2024 | 8:18 AM

Share

ಬೆಂಗಳೂರು, ಸೆಪ್ಟೆಂಬರ್​ 29: ಗೋಬಿ, ಕಬಾಬ್​ ಮತ್ತು ಪಾನಿಪುರಿಗೆ ಬಳಸುವ ಪದಾರ್ಥಗಳಲ್ಲಿ ಕ್ಯಾನ್ಸರ್ (Cancer)​ ಕಾರಕ ಅಂಶಗಳು ಪತ್ತೆಯಾಗಿವೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ (FSSAI) ತಿಳಿಸಿತ್ತು. ಇದೀಗ, ಕೇಕ್​​ಗೆ (Cake) ಬಳಸುವ ಪದಾರ್ಥಗಳಲ್ಲೂ ಕ್ಯಾನ್ಸರ್​​ಕಾರಕ ಅಂಶ ಪತ್ತೆಯಾಗಿದೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ತಿಳಿಸಿದೆ.

ಕೇಕ್​​ಗೆ ಬಳಸುವ ಪದಾರ್ಥಗಳು ಕಲಬರಿಕೆಯಿಂದ ಕೂಡಿವೆ ಎಂಬ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಕೇಕ್​ ಮಾದರಿಗಳನ್ನು ಸಂಗ್ರಹಿಸಿದರು. ಪರಿಶೀಲನೆಗೆ ಒಳಪಡಿಸಿದಾಗ 12 ಮಾದರಿ ಕೇಕ್​ಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿವೆ. ವಿಶೇಷವಾಗಿ ರೆಡ್ ವೆಲ್ವೆಟ್ ಹಾಗೂ ಬ್ಲಾಕ್ ಫಾರೆಸ್ಟ್ ಕೇಕ್​ನಲ್ಲಿ ಹೆಚ್ಚು ಬಣ್ಣ ಬಳಕೆ ಮಾಡುವುದರಿಂದ, ಇದು ಮನುಷ್ಯನ ಆರೋಗ್ಯಕ್ಕೆ ಹಾನಿ ಉಂಟು ಮಾಡುತ್ತದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಗೋಬಿ, ಕಬಾಬ್​ ಬಳಿಕ ಪಾನಿಪುರಿಯಲ್ಲೂ ಕ್ಯಾನ್ಸರ್​ ಕಾರಕ ಅಂಶ ಪತ್ತೆ

ಹಾಗೂ, ರುಚಿ ಎನಿಸುವ ಕೇಕ್ ತಿನ್ನುವ ಮುನ್ನ ಎಚ್ಚರಿಕೆ ವಹಿಸಬೇಕಿದೆ. 12 ಮಾದರಿಗಳಲ್ಲಿ ಅಲೂನಾ ರೆಡ್, ಸನ್ ಸೆಟ್ ಯೆಲ್ಲೋ, ಪೊನುಸೆಯಾ 4R , ಕಾರ್ಮಿಯೋಸೆನ್ ಎಂಬ ಅಂಶ ಪತ್ತೆಯಾಗಿದೆ. ಈ ಕೃತಕ ಬಣ್ಣಗಳಿಂದ ಆರೋಗ್ಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ.

ಹೀಗಾಗಿ ರೆಡ್ ವೆಲ್ವೆಟ್ ಹಾಗೂ ಬ್ಲಾಕ್ ಫಾರೆಸ್ಟ್ ಕೇಕ್​ಗೆ ಬಣ್ಣ ಬಳಕೆಗೆ ನಿರ್ಬಂಧಿಸಲಾಗಿದೆ. ಆಹಾರ ಸುರಕ್ಷತಾ ಇಲಾಖೆಯ ಸೂಚನೆ ಪಾಲಿಸುವಂತೆ ಕೇಕ್ ತಯಾರಿಕರಿಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:15 am, Sun, 29 September 24

Follow Us
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು