AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಕ್ರೀಟ್ ಮಿಕ್ಸರ್ ಲಾರಿಗೆ ಕಾರು ಡಿಕ್ಕಿ: ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಕಾಂಕ್ರೀಟ್ ಮಿಕ್ಸರ್ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲೂರು-ಕಣ್ಣೂರು ರಸ್ತೆಯಲ್ಲಿ ನಡೆದಿದೆ.

ಕಾಂಕ್ರೀಟ್ ಮಿಕ್ಸರ್ ಲಾರಿಗೆ ಕಾರು ಡಿಕ್ಕಿ: ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು
ಅಪಘಾತ ಸಂಭವಿಸಿದ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ ಸಂಚಾರಿ ಡಿಸಿಪಿ ಸಜಿತ್
ರಾಜೇಶ್ ದುಗ್ಗುಮನೆ
| Updated By: ಪೃಥ್ವಿಶಂಕರ|

Updated on: Jan 31, 2021 | 10:11 AM

Share

ದೇವನಹಳ್ಳಿ: ಕಾಂಕ್ರೀಟ್ ಮಿಕ್ಸರ್ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಘಟನೆ ಇಂದು ಮುಂಜಾನೆ ಬಾಗಲೂರು-ಕಣ್ಣೂರು ರಸ್ತೆಯಲ್ಲಿ ನಡೆದಿದೆ.

ಕಾರಿನಲ್ಲಿದ್ದ ಬಾಗಲೂರಿನ ಶಿವು (26), ಮಿಲನ್(25) ಹಾಗೂ ಸಾತನೂರಿನ ಮಧು(26) ಮೃತ ದುರ್ದೈವಿಗಳಾಗಿದ್ದಾರೆ. ಅನೂಷಾ ಎಂಬುವವರಿಗೆ ಗಂಭೀರ‌ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಚಿಕ್ಕಜಾಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಂಚಾರಿ ಡಿಸಿಪಿ ಸಜಿತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೈಕ್​ಗೆ ಲಾರಿ ಡಿಕ್ಕಿ: ಅಪಘಾತದ ರಭಸಕ್ಕೆ ರಸ್ತೆಯ ಮಧ್ಯದಲ್ಲಿಯೇ ಹೊತ್ತಿ ಉರಿದ ಲಾರಿ