AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕರ ಭವನದಲ್ಲಿ ಕಾರು ಕ್ಲೀನರ್​ಗೆ ಕೊರೊನಾ, ಸಿಎಂ ಕಚೇರಿ ಸಿಬ್ಬಂದಿಗೆ ಕೋವಿಡ್ ಟೆಸ್ಟ್

ಬೆಂಗಳೂರು: ಇಷ್ಟು ದಿನ ಪೊಲೀಸರಿಗೆ ಬೆನ್ನು ಬಿಡದೆ ಕಾಡುತ್ತಿದ್ದ ಕೊರೊನಾ ಇದೀಗ ರಾಜಕೀಯ ನಾಯಕರತ್ತ ಮುಖ ಮಾಡಿದೆ. ಇದಕ್ಕೆ ಸಾಕ್ಷಿ ಎಂಬಂತೆ ವಿಧಾನಸೌಧ ಹಾಗೂ ವಿಕಾಸಸೌಧದ ಕೆಲಸ ಮಾಡುವ ಸಿಬ್ಬಂದಿಯಲ್ಲಿ ಸೋಂಕು​ ಪತ್ತೆಯಾಗಿತ್ತು. ಇದಲ್ಲದೆ, ನಿನ್ನೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್​ರ ಕುಟುಂಬದ ಕೆಲವು ಸದಸ್ಯರಿಗೆ ಹಾಗೂ ಅಡುಗೆ ಭಟ್ಟನಿಗೆ ಸೋಂಕು ತಗುಲಿತ್ತು. ಜೊತೆಗೆ ಇಂದು, ವಿಧಾನಸೌಧದ ಬಳಿಯಿರುವ ಶಾಸಕರ ಭವನದ ಸಿಬ್ಬಂದಿಗೂ ಕೊರೊನಾ ಪಾಸಿಟಿವ್​ ಎಂದು ವರಿದಿಯಾಗಿದೆ. ಹೌದು, ಶಾಸಕರ ಭವನದಲ್ಲಿ ಕಾರು ತೊಳೆಯುತ್ತಿದ್ದ ವ್ಯಕ್ತಿಗೂ […]

ಶಾಸಕರ ಭವನದಲ್ಲಿ ಕಾರು ಕ್ಲೀನರ್​ಗೆ ಕೊರೊನಾ, ಸಿಎಂ ಕಚೇರಿ ಸಿಬ್ಬಂದಿಗೆ ಕೋವಿಡ್ ಟೆಸ್ಟ್
KUSHAL V
|

Updated on:Jun 23, 2020 | 12:46 PM

Share

ಬೆಂಗಳೂರು: ಇಷ್ಟು ದಿನ ಪೊಲೀಸರಿಗೆ ಬೆನ್ನು ಬಿಡದೆ ಕಾಡುತ್ತಿದ್ದ ಕೊರೊನಾ ಇದೀಗ ರಾಜಕೀಯ ನಾಯಕರತ್ತ ಮುಖ ಮಾಡಿದೆ. ಇದಕ್ಕೆ ಸಾಕ್ಷಿ ಎಂಬಂತೆ ವಿಧಾನಸೌಧ ಹಾಗೂ ವಿಕಾಸಸೌಧದ ಕೆಲಸ ಮಾಡುವ ಸಿಬ್ಬಂದಿಯಲ್ಲಿ ಸೋಂಕು​ ಪತ್ತೆಯಾಗಿತ್ತು. ಇದಲ್ಲದೆ, ನಿನ್ನೆ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್​ರ ಕುಟುಂಬದ ಕೆಲವು ಸದಸ್ಯರಿಗೆ ಹಾಗೂ ಅಡುಗೆ ಭಟ್ಟನಿಗೆ ಸೋಂಕು ತಗುಲಿತ್ತು.

ಜೊತೆಗೆ ಇಂದು, ವಿಧಾನಸೌಧದ ಬಳಿಯಿರುವ ಶಾಸಕರ ಭವನದ ಸಿಬ್ಬಂದಿಗೂ ಕೊರೊನಾ ಪಾಸಿಟಿವ್​ ಎಂದು ವರಿದಿಯಾಗಿದೆ. ಹೌದು, ಶಾಸಕರ ಭವನದಲ್ಲಿ ಕಾರು ತೊಳೆಯುತ್ತಿದ್ದ ವ್ಯಕ್ತಿಗೂ ಸೋಂಕು ದೃಢಪಟ್ಟಿದ್ದು ಶಾಸಕರು ಹಾಗೂ ಭವನದಲ್ಲಿ ಕೆಲಸ ಮಾಡ್ತಿದ್ದ ಇತರೆ ಸಿಬ್ಬಂದಿಗೂ ಆತಂಕ ಶುರುವಾಗಿದೆ.

ಸಿಎಂ ಕಚೇರಿಯ ಎಲ್ಲ ಸಿಬ್ಬಂದಿಗೆ ಕೊವಿಡ್ ಟೆಸ್ಟ್ ಇದೀಗ ಸರ್ಕಾರಿ ಕಚೇರಿಗಳಲ್ಲೇ ಕೇಸ್​ಗಳು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಕಚೇರಿಯ ಎಲ್ಲ ಸಿಬ್ಬಂದಿಗೆ ಕೋವಿಡ್ ಟೆಸ್ಟ್ ಮಾಡಿಸಲಾಗುತ್ತಿದೆ. ಸಿಎಂ ಯಡಿಯೂರಪ್ಪನವರ ಗೃಹ ಕಚೇರಿ ಕೃಷ್ಣಾ ಮತ್ತು ನಿವಾಸವಾದ ಕಾವೇರಿಯ ಎಲ್ಲಾ ಭದ್ರತಾ ಹಾಗೂ ಇತರೆ ಸಿಬ್ಬಂದಿಗೆ ಕೋವಿಡ್​ ಪರೀಕ್ಷೆ ನಡೆಸಲಾಗ್ತಿದೆ.

ನಿನ್ನೆ ಮತ್ತು ನಡೆಸಲಾಗುತ್ತಿರುವ ಕರೋನಾ ಟೆಸ್ಟಿಂಗನ್ನು ಇನ್ನು ಮುಂದೆ ಪ್ರತಿ 15 ದಿನಕ್ಕೊಮ್ಮೆ ನಡೆಸಲು ನಿರ್ಧರಿಸಲಾಗಿದೆ.

Published On - 12:44 pm, Tue, 23 June 20

Follow Us
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ