AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆ ರಿಸಲ್ಟ್​ಗೆ ಒಂದು ದಿನ ಇರುವಾಗಲೇ ಡಾ.ಸುಧಾಕರ್​ ವಿರುದ್ಧ ಕೇಸ್ ಬುಕ್

ರಾಜ್ಯ ಸರ್ಕಾರದ ಚಿಹ್ನೆ ಇರುವ ಲೆಟರ್ ಹೆಡ್​ನಲ್ಲಿ ಚುನಾವಣಾ ಆಯುಕ್ತರು ಮತ್ತು ಬೆಂಗಳೂರು ವಿಭಾಗಕ್ಕೆ ಪತ್ರ ವ್ಯವಹಾರ ಮಾಡಿದ್ದಕ್ಕೆ ಚಿಕ್ಕಬಳ್ಳಾಫುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಸಚಿವ ಡಾ.ಕೆ.ಸುಧಾಕರ್​ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸ್ ದಾಖಲಾಗಿದೆ. ಬೆಂಗಳೂರು ಪ್ರಾದೇಶಿಕ ಆಯುಕ್ತರ ಸೂಚನೆ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ಲೋಕಸಭಾ ಚುನಾವಣೆ ರಿಸಲ್ಟ್​ಗೆ ಒಂದು ದಿನ ಇರುವಾಗಲೇ ಡಾ.ಸುಧಾಕರ್​ ವಿರುದ್ಧ ಕೇಸ್ ಬುಕ್
ಲೋಕಸಭಾ ಚುನಾವಣೆ ರಿಸಲ್ಟ್​ಗೆ ಒಂದು ದಿನ ಇರುವಾಗಲೇ ಡಾ.ಸುಧಾಕರ್​ ವಿರುದ್ಧ ಕೇಸ್ ಬುಕ್
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಗಂಗಾಧರ​ ಬ. ಸಾಬೋಜಿ

Updated on:Jun 03, 2024 | 7:18 PM

ಚಿಕ್ಕಬಳ್ಳಾಪುರ, ಜೂನ್​​ 03: ಚುನಾವಣೆ ವೇಳೆ ರಾಜ್ಯ ಸರ್ಕಾರದ ಲೇಟರ್ ಹೆಡ್ ದುರ್ಬಳಕೆ ಆರೋಪಡಿ ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್ (K Sudhakar) ವಿರುದ್ಧ ನಗರ ಠಾಣೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ (code of conduct) ದಾಖಲಾಗಿದೆ. ರಾಜ್ಯ ಸರ್ಕಾರದ ಚಿಹ್ನೆ ಇರುವ ಲೆಟರ್​ ಹೆಡ್​ನಲ್ಲಿ ಚುನಾವಣಾ ಆಯುಕ್ತರು, ಬೆಂಗಳೂರು ವಿಭಾಗಕ್ಕೆ ಪತ್ರ ವ್ಯವಹಾರ ಮಾಡಿದ್ದಾರೆ. ಹೀಗಾಗಿ ಬೆಂಗಳೂರು ಪ್ರಾದೇಶಿಕ ಆಯುಕ್ತರ ಸೂಚನೆ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ಸಾರ್ವತ್ರಿಕ ಚುನಾವಣೆಯ ಮಾದರಿ ನೀತಿ ಸಂಹಿತೆ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಚಿಹ್ನೆಯನ್ನು ಅನಧಿಕೃತವಾಗಿ ಬಳಕೆಮಾಡಿರುವುದರಿಂದ ಈ ಬಗ್ಗೆ, ಸದರಿಯವರ ವಿರುದ್ಧ ಪೋಲೀಸ್ ಅಧಿಕಾರಿಗಳ ಮೂಲಕ ಮಾಜಿ ಸಚಿವ ಡಾ. ಕೆ.ಸುಧಾಕರ್ ರವರ ವಿರುದ್ಧ ಉಲ್ಲೇಖ ರೀತಾ ಕ್ರಮ ಕೈಗೊಳ್ಳುವಂತೆ ಮಾನ್ಯ ಜಿಲಾ ಚುನಾವಣಾಧಿಕಾರಿಗಳು ಸೂಚಿಸಿ ಪತ್ರವನ್ನು ರವಾನಿಸಿಕೊಂಡಿರುತ್ತಾರೆ.

ಇದನ್ನೂ ಓದಿ: ಲೋಕಸಭಾ ರಿಸಲ್ಟ್ ವೇಳೆ ಸಮಸ್ಯೆ ನಿವಾರಣೆಗೆ ಟಾಸ್ಕ್​ ಫೋರ್ಸ್ ರಚಿಸಿದ ಕಾಂಗ್ರೆಸ್

ಏಪ್ರಿಲ್​ 2ರಂದು ಹಿಂದೆ ಚುನಾವಣೆ ಮಾದರಿ ನೀತಿ ಸಂಹಿತೆ ಸಂದರ್ಭದಲ್ಲಿ ಡಾ. ಕೆ.ಸುಧಾಕರ್​ ತಮ್ಮ ಕಚೇರಿ, ಮನೆಯಲ್ಲಿ (ಸ್ಪಷ್ಟವಾಗಿ ವಿಳಾಸ ತಿಳಿದುಬಂದಿರುವುದಿಲ್ಲ) ಲೆಟರ್ ಹೆಡ್​ನಲ್ಲಿ ಚುನಾವಣಾ ಆಯುಕ್ತರು, ಬೆಂಗಳೂರು ವಿಭಾಗ ರವರಿಗೆ ಪತ್ರ ವ್ಯವಹಾರ ಮಾಡಿದ್ದು, ಸದರಿ ಲೆಟರ್ ಹೆಡ್​ನಲ್ಲಿ ಕರ್ನಾಟಕ ಸರ್ಕಾರದ ಚಿಹ್ನೆಯನ್ನು ಅನಧಿಕೃತವಾಗಿ ಬಳಕೆಮಾಡಿರುವುದಾಗಿ ಕಂಡ ಪತ್ರದಲ್ಲಿ ನಮೂದಿಸಿದೆ.

ಇದನ್ನೂ ಓದಿ: ಎಕ್ಸಿಟ್ ಪೋಲ್ ಗಳು ಗೊಂದಲ ಸೃಷ್ಟಿಸಿವೆ, ಅವಸರ ಯಾಕೆ? ನಾಳೆ ಮಧ್ಯಾಹ್ನ ಎಲ್ಲ ಗೊತ್ತಾಗಲಿದೆ: ಸತೀಶ್ ಜಾರಕಿಗೊಳಿ

ಕರ್ನಾಟಕ ಸರ್ಕಾರದ ಚಿಹ್ನೆಯನ್ನು ಅನಧಿಕೃತವಾಗಿ ಬಳಸಿರುವ the Emblem and Names (Prevention of Improper use) Act-1950. 03 of the state Emblem of India (Provibition of Improper use) Act-2005, 5, 500, 170, 171, 171(f), 260, 481 ಐಪಿಎಸ್​ರಡಿ ಡಾ. ಕೆ.ಸುಧಾಕರ್ ರವರ ವಿರುದ್ಧ ಕಾನೂನು ರೀತಾ ಕ್ರಮ ಕೈಗೊಳ್ಳಲು ಕೋರಿ ದೂರು ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:06 pm, Mon, 3 June 24

ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ