ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಬಡ್ತಿ ಪಡೆಯಲು ಸುಳ್ಳು ಜಾತಿ ಪ್ರಮಾಣ ಪತ್ರ: ಮಾಜಿ ಶಾಸಕರ ಪತ್ನಿ ವಿರುದ್ಧ ದೂರು ದಾಖಲು

ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಬಡ್ತಿ ಪಡೆಯಲು ಮಾಜಿ ಶಾಸಕರೊಬ್ಬರ ಪತ್ಬಿ ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿ ಸಿಕ್ಕಿಬಿದ್ದಿದ್ದಾರೆ. ಇದೀಗ ಸುಳ್ಳು ಜಾತಿ ಪ್ರಮಾಣ ಪತ್ರ ಕೊಟ್ಟರು, ಶಿಫಾರಸ್ಸು ಮಾಡಿದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.

ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಬಡ್ತಿ ಪಡೆಯಲು ಸುಳ್ಳು ಜಾತಿ ಪ್ರಮಾಣ ಪತ್ರ:  ಮಾಜಿ ಶಾಸಕರ ಪತ್ನಿ ವಿರುದ್ಧ ದೂರು ದಾಖಲು
Edited By:

Updated on: Oct 26, 2023 | 9:54 AM

ಬೆಂಗಳೂರು, (ಅಕ್ಟೋಬರ್ 26): ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ (Assistant professor Job) ಬಡ್ತಿ ಪಡೆಯಲು ಮಾಜಿ ಶಾಸಕರೊಬ್ಬರ ಪತ್ಬಿ ಸುಳ್ಳು ಜಾತಿ ಪ್ರಮಾಣ ಪತ್ರ (fake caste certificate) ನೀಡಿ ಸಿಕ್ಕಿಬಿದ್ದಿದ್ದಾರೆ. ನೆಲಮಂಗಲ (Nelamangala) ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಡಾ.ಕೆ ಶ್ರೀನಿವಾಸಮೂರ್ತಿ ಅವರ ಪತ್ನಿ ಡಾ. ಸುಜಾ ಕೆ.ಶ್ರೀಧರ್‌ ಎನ್ನುವರು ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿ ಸಿಕ್ಕಿಬಿದ್ದಿದ್ದಾರೆ.

ಡಾ. ಸುಜಾ ಕೆ.ಶ್ರೀಧರ್ ಅವರು ಪರಿಶಿಷ್ಟ ಜಾತಿಯ ದ್ರಾವಿಡ ಜಾತಿಯ ಸುಳ್ಳು ಪ್ರಮಾಣ ಪತ್ರ ಪಡೆದು ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಬಡ್ತಿ ಪಡೆದುಕೊಂಡಿದ್ದರು. ಇದೇ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಜಿ.ಎನ್‌. ಶಕುಂತಲಾ ಅವರಿಗೆ ದೊರೆತಿದ್ದ ಬಡ್ತಿಗೆ ಮಾಜಿ ಶಾಸಕರು ತಮ್ಮ ರಾಜಕೀಯ ಪ್ರಭಾವ ಬಳಸಿ ತಮ್ಮ ಪತ್ನಿ ಡಾ. ಸುಜಾ ಕೆ.ಶ್ರೀಧರ್ ಅವರಿಗೆ ಕೊಡಿಸಿದ್ದರು.

ಇದನ್ನೂ ಓದಿ: ಕಾಟಾಚಾರಕ್ಕೆ ಸೆಲೆಬ್ರಿಟಿ ಮನೆಗಳ ಪರಿಶೀಲನೆ, ನಾಮಕಾವಸ್ತೆ ನೊಟೀಸ್: ಅನುಮಾನ ಮೂಡಿಸಿದ ಅರಣ್ಯಾಧಿಕಾರಿಗಳ ನಡೆ

ಇನ್ನು ಈ ಬಗ್ಗೆ ನ್ಯಾಯ ಕೊಡಿಸಬೇಕೆಂದು ಇದೇ ಕಾಲೇಜು ಉಪನ್ಯಾಸಕಿ ಡಾ. ಶಕುಂತಲಾ, ಸುಳ್ಳು ಪ್ರಮಾಣ ಪತ್ರ ನೀಡಿರುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಪೊಲೀಸ್ ಅಧೀಕ್ಷಕ ಎಚ್.ಡಿ.ಆನಂದ್ ಕುಮಾರ್‌ ಅವರಿಗೆ ದೂರು ನೀಡಿದ್ದಾರೆ. ತ್ಯಾಮಗೊಂಡ್ಲು ಹೋಬಳಿಯ ಓಬಳಾಪುರದ ಮಾಜಿ ಶಾಸಕ ಡಾ.ಕೆ ಶ್ರೀನಿವಾಸಮೂರ್ತಿ ಪತ್ನಿ ಡಾ.ಸುಜಾ.ಕೆ.ಶ್ರೀಧರ್‌ ಕೇರಳ ಮೂಲದವರು. ಸದ್ಯ ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ಉಪನ್ಯಾಸಕಿ. ಡಾ.ಸುಜಾ ಕೆ ಶ್ರೀಧರ್ ಕೇರಳದ ಎಳವ ಜಾತಿಗೆ ಸೇರಿದ್ದು, ತಂದೆಯ ಜಾತಿ ಮಾತ್ರ ಮಗಳಿಗೆ ಬರುತ್ತದೆಂದು ದೂರುನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನು ಈ ದೂರು ಆಧಾರಿಸಿ ನಾಗರಿಕ ಹಕ್ಕುಗಳ ಜಾರಿ ನಿರ್ದೆಶಾನಾಲಯದಿಂದ ನೆಲಮಂಗಲ ತಹಶೀಲ್ದಾರ್, ಸುಳ್ಳು ಜಾತಿ ಪ್ರಮಾಣ ಪತ್ರ ನೀಡಲು ಶಿಫಾರಸ್ಸು ಮಾಡಿದ ಕಂದಾಯ ನಿರೀಕ್ಷಕ,ಮತ್ತು ಗ್ರಾಮ ಲೆಕ್ಕಿಗನ ಮೇಲೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More
Follow Us