AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಲಸಿಕೆಗೆ ಕಮಿಷನ್ ಆರೋಪ: ಕಮಲ್ ಪಂತ್​ಗೆ ದೂರು; ಕಾಂಗ್ರೆಸ್ ವಿರುದ್ಧ ಹರಿಹಾಯ್ದ ರವಿಸುಬ್ರಹ್ಮಣ್ಯ

ಇದು ರಾಜಕೀಯ ಪ್ರೇರಿತವಾಗಿದೆ. ಇದರ ವಿರುದ್ಧ ನಾನು ಕಾನೂನು ಹೋರಾಟ ಮಾಡುತ್ತೇನೆ. ಇಂತಹ ಸಮಯದಲ್ಲಿ ಹೊಲಸು ರಾಜಕೀಯ ಮಾಡಬಾರದು. ರಾಜಕೀಯವಾಗಿ ನನ್ನನ್ನು ಮುಗಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಬಳಿಕ ಬಸವನಗುಡಿ ಬಿಜೆಪಿ ಶಾಸಕ ರವಿ ಸುಬ್ರಹ್ಮಣ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಕೊವಿಡ್ ಲಸಿಕೆಗೆ ಕಮಿಷನ್ ಆರೋಪ: ಕಮಲ್ ಪಂತ್​ಗೆ ದೂರು; ಕಾಂಗ್ರೆಸ್ ವಿರುದ್ಧ ಹರಿಹಾಯ್ದ ರವಿಸುಬ್ರಹ್ಮಣ್ಯ
ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ
TV9 Web
| Edited By: |

Updated on:Aug 14, 2021 | 1:09 PM

Share

ಬೆಂಗಳೂರು: ಕೊವಿಡ್ ಲಸಿಕೆಗೆ ಕಮಿಷನ್ ಪಡೆಯುವ ಆರೋಪ ವಿಚಾರಕ್ಕೆ ಸಂಬಂಧಿಸಿ ನಗರದ ಹೊಸಕೆರೆಹಳ್ಳಿ ಬಳಿ ರಿಂಗ್ ರಸ್ತೆಯಲ್ಲಿರುವ ಅನುಗ್ರಹ ವಿಠ್ಠಲ ಆಸ್ಪತ್ರೆಗೆ ಶಾಸಕ ರವಿ ಸುಬ್ರಹ್ಮಣ್ಯ ಭೇಟಿ ನೀಡಿದ್ದಾರೆ. ನೀವು ನನಗೆ ಯಾವಾಗ ಹಣವನ್ನು ಕೊಟ್ಟಿದ್ದೀರಿ. ನೇರವಾಗಿ ಹಣ ಕೊಟ್ಟಿದ್ದೀರಾ, ಇಲ್ಲಾ ಮನೆಗೆ ಕಳಿಸಿದ್ದೀರಾ. ಹೇಗೆ ಹಣ ಕೊಟ್ಟಿದ್ದೀರಿ ಹೇಳಿ ಎಂದು ಆಸ್ಪತ್ರೆ ಆಡಳಿತ ಮಂಡಳಿಗೆ ಶಾಸಕ ರವಿ ಸುಬ್ರಹ್ಮಣ್ಯ ಪ್ರಶ್ನೆ ಕೇಳಿದ್ದಾರೆ.

ಇದು ರಾಜಕೀಯ ಪ್ರೇರಿತವಾಗಿದೆ. ಇದರ ವಿರುದ್ಧ ನಾನು ಕಾನೂನು ಹೋರಾಟ ಮಾಡುತ್ತೇನೆ. ಇಂತಹ ಸಮಯದಲ್ಲಿ ಹೊಲಸು ರಾಜಕೀಯ ಮಾಡಬಾರದು. ರಾಜಕೀಯವಾಗಿ ನನ್ನನ್ನು ಮುಗಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಬಳಿಕ ಬಸವನಗುಡಿ ಬಿಜೆಪಿ ಶಾಸಕ ರವಿ ಸುಬ್ರಹ್ಮಣ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಹವ್ಯಾಸಿ ಕಲಾವಿದರೊಬ್ಬರು ಇದನ್ನು ಮಾಡಿದ್ದಾರೆಂದು ಆರೋಪ ವ್ಯಕ್ತಪಡಿಸಿದ್ದಾರೆ. ಆ ಹವ್ಯಾಸಿ ಕಲಾವಿದನಿಗೆ ಇದೇ ಕೆಲಸವಾಗಿದೆ. ಆತನಿಗೆ ಬೇರೆ ಯಾವುದೇ ಕೆಲಸ ಇಲ್ಲವೆಂದು ಗೊತ್ತಾಗುತ್ತದೆ ಎಂದು ರವಿ ಸುಬ್ರಹ್ಮಣ್ಯ ಕಿಡಿಕಾರಿದ್ದಾರೆ.

ಇದರ ಹಿಂದೆ ಕಾಂಗ್ರೆಸ್ ಕೈವಾಡ ಇರುವ ಅನುಮಾನವಿದೆ. ₹1,300ಕ್ಕೆ ಸಿಗುತ್ತಿದ್ದ ಲಸಿಕೆ ₹900ಕ್ಕೆ ಸಿಗುವಂತೆ ಮಾಡಿದ್ದೆವು. ಇದನ್ನು ಸಹಿಸಲು ಆಗದೆ ಇಂತಹ ಕೆಲಸ ಮಾಡುತ್ತಿದ್ದಾರೆ. ಈ ಕೆಲಸ ಮಾಡುವವರಿಗೆ ಬೇರೆ ಯಾವುದೇ ಕೆಲಸವಿಲ್ಲ. ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಕೊವಿಡ್ ಲಸಿಕೆ ನೀಡಿಕೆ ಆಗುತ್ತಿದೆ. ಖಾಸಗಿ ಆಸ್ಪತ್ರೆಯಲ್ಲಿ 900 ರೂಪಾಯಿ ಪಡೆಯುತ್ತಿದ್ದಾರೆ. ಸಿದ್ದರಾಮಯ್ಯ ಚಟಕ್ಕಾಗಿ ಹೇಳಿಕೆಯನ್ನು ನೀಡಬಾರದು. ಸಿದ್ದರಾಮಯ್ಯ ಅವರ ಘನತೆಗೆ ತಕ್ಕಂತೆ ಮಾತನಾಡಬೇಕು ಎಂದು ಸಿದ್ದರಾಮಯ್ಯ ವಿರುದ್ಧ ಶಾಸಕ ರವಿ ಸುಬ್ರಹ್ಮಣ್ಯ ಆಕ್ರೋಶ ಹೊರಹಾಕಿದ್ದಾರೆ.

ಕೊವಿಡ್ ಲಸಿಕೆಗೆ ಕಮಿಷನ್ ಪಡೆಯುವ ಆರೋಪ ವಿಚಾರವಾಗಿ, ಸಾಮಾಜಿಕ ಹೋರಾಟಗಾರ ಹೆಚ್.ಎಂ. ವೆಂಕಟೇಶ್‌ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದರು. ಆಡಿಯೋ, ಆಸ್ಪತ್ರೆ ನಂಬರ್ ಸಹಿತ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್‌ಗೆ ದೂರು ಸಲ್ಲಿಸಿದ್ದರು.

ಇದನ್ನೂ ಓದಿ: ಬಿಬಿಎಂಪಿಯಿಂದ ಬೆಡ್​ ಬುಕ್ಕಿಂಗ್ ಹಗರಣ: ಇಬ್ಬರನ್ನು ಬಂಧಿಸಿ, ತೀವ್ರ ವಿಚಾರಣೆಗೆ ಒಳಪಡಿಸಿದ ಪೊಲೀಸರು

ಕಾಂಗ್ರೆಸ್​ನ ಕೆಲ ಬುದ್ಧಿಜೀವಿಗಳು ಬೆಡ್ ಬ್ಲಾಕಿಂಗ್ ಹಗರಣದ ತನಿಖೆಯ ದಾರಿ ತಪ್ಪಿಸುತ್ತಿದ್ದಾರೆ: ಸಂಸದ ತೇಜಸ್ವಿ ಸೂರ್ಯ

Published On - 5:47 pm, Sat, 29 May 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು