AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಸುಧಾಕರ್ ಬಗ್ಗೆ ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಪೋಸ್ಟ್; ಕೆಪಿಸಿಸಿ ಸದಸ್ಯೆ ಬಿಂದುಗೌಡ ವಿರುದ್ಧ ಪ್ರಕರಣ ದಾಖಲು

ಸಚಿವರ ಗೌರವ, ಘನತೆಗೆ ಕುಂದನ್ನುಂಟು ಮಾಡಿದ್ದ ಆರೋಪದಲ್ಲಿ ಸಾಮಾಜಿಕ ಕಾರ್ಯಕರ್ತ ಪವನ್ ಕುಮಾರ್ ಬಿಂದುಗೌಡ ವಿರುದ್ಧ​ ದೂರು ನೀಡಿದ್ದಾರೆ.

ಸಚಿವ ಸುಧಾಕರ್ ಬಗ್ಗೆ ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಪೋಸ್ಟ್; ಕೆಪಿಸಿಸಿ ಸದಸ್ಯೆ ಬಿಂದುಗೌಡ ವಿರುದ್ಧ ಪ್ರಕರಣ ದಾಖಲು
ಬಿಂದು ಗೌಡ (ಎಡ), ಕೆ. ಸುಧಾಕರ್ (ಬಲ)
Follow us
TV9 Web
| Updated By: ganapathi bhat

Updated on:Apr 05, 2022 | 12:51 PM

ಚಿಕ್ಕಬಳ್ಳಾಪುರ: ಕರ್ನಾಟಕ ಸರ್ಕಾರದ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್​ ಚಿತ್ರವನ್ನು ಮಹಿಳೆಗೆ ಹೋಲಿಸಿ  ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಸದಸ್ಯೆ ಬಿಂದುಗೌಡ ವಿರುದ್ಧ ಪ್ರಕರಣ ದಾಖಲಾಗಿದೆ. ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಪೋಸ್ಟ್​ ಮಾಡಿದ್ದ ಬಿಂದುಗೌಡ ವಿರುದ್ಧ ಚಿಕ್ಕಬಳ್ಳಾಪುರ ಸೈಬರ್ ಕ್ರೈಮ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ.

ಕೆಪಿಸಿಸಿಯ ಮಾನವ ಹಕ್ಕು ಹಾಗೂ ಮಾಹಿತಿ ಹಕ್ಕು ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿಂದುಗೌಡ ವಿರುದ್ಧ ಐಟಿ ಆ್ಯಕ್ಟ್ 2008ರ ಅಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಚಿವರ ಗೌರವ, ಘನತೆಗೆ ಕುಂದನ್ನುಂಟು ಮಾಡಿದ್ದ ಆರೋಪದಲ್ಲಿ ಸಾಮಾಜಿಕ ಕಾರ್ಯಕರ್ತ ಪವನ್ ಕುಮಾರ್​ ದೂರು ನೀಡಿದ್ದಾರೆ.

‘ಅಖಿಲ ಕರ್ನಾಟಕ ಪುನೀತ್ ರಾಜ್ಕುಮಾರ್ ಅಭಿಮಾನಿ ಬಳಗದಿಂದ ಸುಧಾಕರ್ ಅವರಿಗೆ ಭಾರಿ ಗೌರವ ಪೂರಕ ಅಭಿನಂದನೆ’ ಎಂದು ಬರೆದು ಬಿಂದು ಗೌಡ ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿದ್ದರು. ಕೊರೊನಾ ಕಾರಣದಿಂದ ಥಿಯೇಟರ್​ಗಳಿಗೆ ಹೇರಿದ್ದ ನಿಯಮಾವಳಿಗಳನ್ನು ಸಡಿಲಗೊಳಿಸಿದ ಕಾರಣ ಈ ರೀತಿ ಪೋಸ್ಟ್ ಹಂಚಿಕೊಂಡಿದ್ದರು. ಆದರೆ, ಪೋಸ್ಟ್​ನಲ್ಲಿ ಆರೋಗ್ಯ ಸಚಿವ ಸುಧಾಕರ್​ರನ್ನು ಹುಡುಗಿಯಂತೆ ತೋರಿಸುವ, ಅವಹೇಳನಕಾರಿ ಪೋಸ್ಟ್ ಹಾಕಿದ್ದರು. ಅದರ ವಿರುದ್ಧ ಈಗ ದೂರು ದಾಖಲಾಗಿದೆ.

ಇದನ್ನೂ ಓದಿ: ಕೆ.ಮಂಜು ಯಾರು ಎಂದೇ ನನಗೆ ಗೊತ್ತಿಲ್ಲ; ಸಚಿವ ಡಾ.ಕೆ.ಸುಧಾಕರ್​ ತಿರುಗೇಟು

ಇದನ್ನೂ ಓದಿ: ಸಿಡಿ ಪ್ರಕರಣಕ್ಕೆ ರೋಚಕ ತಿರುವು; ಸಿಡಿ ಬಿಡುಗಡೆಗೂ ಮುನ್ನ ಯುವತಿ ಜತೆ ಹಣಕಾಸು ವ್ಯವಹಾರ ನಡೆಸಿದ್ದ ಮಾಜಿ ಸಚಿವ ಡಿ.ಸುಧಾಕರ್​?

Published On - 6:35 pm, Sun, 4 April 21

ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ