AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಸುಧಾಕರ್ ಬಗ್ಗೆ ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಪೋಸ್ಟ್; ಕೆಪಿಸಿಸಿ ಸದಸ್ಯೆ ಬಿಂದುಗೌಡ ವಿರುದ್ಧ ಪ್ರಕರಣ ದಾಖಲು

ಸಚಿವರ ಗೌರವ, ಘನತೆಗೆ ಕುಂದನ್ನುಂಟು ಮಾಡಿದ್ದ ಆರೋಪದಲ್ಲಿ ಸಾಮಾಜಿಕ ಕಾರ್ಯಕರ್ತ ಪವನ್ ಕುಮಾರ್ ಬಿಂದುಗೌಡ ವಿರುದ್ಧ​ ದೂರು ನೀಡಿದ್ದಾರೆ.

ಸಚಿವ ಸುಧಾಕರ್ ಬಗ್ಗೆ ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಪೋಸ್ಟ್; ಕೆಪಿಸಿಸಿ ಸದಸ್ಯೆ ಬಿಂದುಗೌಡ ವಿರುದ್ಧ ಪ್ರಕರಣ ದಾಖಲು
ಬಿಂದು ಗೌಡ (ಎಡ), ಕೆ. ಸುಧಾಕರ್ (ಬಲ)
TV9 Web
| Edited By: |

Updated on:Apr 05, 2022 | 12:51 PM

Share

ಚಿಕ್ಕಬಳ್ಳಾಪುರ: ಕರ್ನಾಟಕ ಸರ್ಕಾರದ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್​ ಚಿತ್ರವನ್ನು ಮಹಿಳೆಗೆ ಹೋಲಿಸಿ  ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಸದಸ್ಯೆ ಬಿಂದುಗೌಡ ವಿರುದ್ಧ ಪ್ರಕರಣ ದಾಖಲಾಗಿದೆ. ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಪೋಸ್ಟ್​ ಮಾಡಿದ್ದ ಬಿಂದುಗೌಡ ವಿರುದ್ಧ ಚಿಕ್ಕಬಳ್ಳಾಪುರ ಸೈಬರ್ ಕ್ರೈಮ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ.

ಕೆಪಿಸಿಸಿಯ ಮಾನವ ಹಕ್ಕು ಹಾಗೂ ಮಾಹಿತಿ ಹಕ್ಕು ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿಂದುಗೌಡ ವಿರುದ್ಧ ಐಟಿ ಆ್ಯಕ್ಟ್ 2008ರ ಅಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಚಿವರ ಗೌರವ, ಘನತೆಗೆ ಕುಂದನ್ನುಂಟು ಮಾಡಿದ್ದ ಆರೋಪದಲ್ಲಿ ಸಾಮಾಜಿಕ ಕಾರ್ಯಕರ್ತ ಪವನ್ ಕುಮಾರ್​ ದೂರು ನೀಡಿದ್ದಾರೆ.

‘ಅಖಿಲ ಕರ್ನಾಟಕ ಪುನೀತ್ ರಾಜ್ಕುಮಾರ್ ಅಭಿಮಾನಿ ಬಳಗದಿಂದ ಸುಧಾಕರ್ ಅವರಿಗೆ ಭಾರಿ ಗೌರವ ಪೂರಕ ಅಭಿನಂದನೆ’ ಎಂದು ಬರೆದು ಬಿಂದು ಗೌಡ ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿದ್ದರು. ಕೊರೊನಾ ಕಾರಣದಿಂದ ಥಿಯೇಟರ್​ಗಳಿಗೆ ಹೇರಿದ್ದ ನಿಯಮಾವಳಿಗಳನ್ನು ಸಡಿಲಗೊಳಿಸಿದ ಕಾರಣ ಈ ರೀತಿ ಪೋಸ್ಟ್ ಹಂಚಿಕೊಂಡಿದ್ದರು. ಆದರೆ, ಪೋಸ್ಟ್​ನಲ್ಲಿ ಆರೋಗ್ಯ ಸಚಿವ ಸುಧಾಕರ್​ರನ್ನು ಹುಡುಗಿಯಂತೆ ತೋರಿಸುವ, ಅವಹೇಳನಕಾರಿ ಪೋಸ್ಟ್ ಹಾಕಿದ್ದರು. ಅದರ ವಿರುದ್ಧ ಈಗ ದೂರು ದಾಖಲಾಗಿದೆ.

ಇದನ್ನೂ ಓದಿ: ಕೆ.ಮಂಜು ಯಾರು ಎಂದೇ ನನಗೆ ಗೊತ್ತಿಲ್ಲ; ಸಚಿವ ಡಾ.ಕೆ.ಸುಧಾಕರ್​ ತಿರುಗೇಟು

ಇದನ್ನೂ ಓದಿ: ಸಿಡಿ ಪ್ರಕರಣಕ್ಕೆ ರೋಚಕ ತಿರುವು; ಸಿಡಿ ಬಿಡುಗಡೆಗೂ ಮುನ್ನ ಯುವತಿ ಜತೆ ಹಣಕಾಸು ವ್ಯವಹಾರ ನಡೆಸಿದ್ದ ಮಾಜಿ ಸಚಿವ ಡಿ.ಸುಧಾಕರ್​?

Published On - 6:35 pm, Sun, 4 April 21

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ