AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ಸಿಡಿಯಲ್ಲಿ ಅವಾಚ್ಯ ಶಬ್ದಗಳ ಬಳಕೆ; ಕನ್ನಡಿಗರನ್ನು ನಿಂದಿಸಿದ್ದಕ್ಕಾಗಿ ರಮೇಶ್​ ಜಾರಕಿಹೊಳಿ ವಿರುದ್ಧ ದೂರು ದಾಖಲು

ರಮೇಶ್​ ಜಾರಕಿಹೊಳಿ ಅಶ್ಲೀಲ ವಿಡಿಯೋದಲ್ಲಿ ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದರ ವಿರುದ್ಧ ಕನ್ನಡಿಗರ ರಕ್ಷಣಾ ವೇದಿಕೆಯಿಂದ ಕಬ್ಬನ್​ ಪಾರ್ಕ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಅಶ್ಲೀಲ ಸಿಡಿಯಲ್ಲಿ ಅವಾಚ್ಯ ಶಬ್ದಗಳ ಬಳಕೆ; ಕನ್ನಡಿಗರನ್ನು ನಿಂದಿಸಿದ್ದಕ್ಕಾಗಿ ರಮೇಶ್​ ಜಾರಕಿಹೊಳಿ ವಿರುದ್ಧ ದೂರು ದಾಖಲು
ರಮೇಶ್​ ಜಾರಕಿಹೊಳಿ
Skanda
|

Updated on:Mar 16, 2021 | 4:13 PM

Share

ಬೆಂಗಳೂರು: ಅಶ್ಲೀಲ ಸಿಡಿ ಪ್ರಕರಣದಲ್ಲಿ ರಮೇಶ್​ ಜಾರಕಿಹೊಳಿಗೆ ಒಂದಾದ ಮೇಲೊಂದು ಸಂಕಷ್ಟಗಳು ಎದುರಾಗುತ್ತಿವೆ. ಇತ್ತ ಸಿಡಿಯ ಬಗ್ಗೆ ಎಸ್​ಐಟಿ ತನಿಖೆ ಆರಂಭಿಸಿದ್ದು ಯುವತಿಯ ಬಗ್ಗೆ ಮಾಹಿತಿ ಕಲೆಹಾಕುತ್ತಿದೆ. ಇನ್ನೊಂದೆಡೆ, ರಮೇಶ್​ ಜಾರಕಿಹೊಳಿ ಅಶ್ಲೀಲ ವಿಡಿಯೋದಲ್ಲಿ ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದರ ವಿರುದ್ಧ ಕನ್ನಡಿಗರ ರಕ್ಷಣಾ ವೇದಿಕೆಯಿಂದ ಕಬ್ಬನ್​ ಪಾರ್ಕ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರಮೇಶ್ ಜಾರಕಿಹೊಳಿ ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ. ಕನ್ನಡಿಗರಿಗೆ ಅವಾಚ್ಯ ಪದ ಬಳಸಿ ನಿಂದಿಸಿದ್ದಾರೆ. ಕರ್ನಾಟಕದಲ್ಲಿ ಹುಟ್ಟಿ, ಕರ್ನಾಟಕದಲ್ಲಿ ಬೆಳೆದು ಅಪಮಾನ ಮಾಡುವುದು ಅವರಿಗೆ ಶೋಭೆಯಲ್ಲ ಎಂದು ಹೇಳಿರುವ ಕನ್ನಡಿಗರ ರಕ್ಷಣಾ ವೇದಿಕೆ ಸದಸ್ಯರು ಸರ್ಕಾರ ಈ ಕೂಡಲೇ ರಮೇಶ್​ ಜಾರಕಿಹೊಳಿ ಅವರನ್ನು ಶಾಸಕ ಸ್ಥಾನದಿಂದ ವಜಾ ಮಾಡಬೇಕು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ರಮೇಶ್ ಜಾರಕಿಹೊಳಿ ಕನ್ನಡಿಗರ ಬಗ್ಗೆ ಕೀಳಾಗಿ ಮಾತನಾಡಿರುವುದು ಖಂಡನೀಯ. ಅವರು ಈ ಕೂಡಲೇ ಕನ್ನಡಿಗರ ಬೇಷರತ್ ಕ್ಷಮೆ ಕೇಳಬೇಕು. ಒಂದುವೇಳೆ ರಮೇಶ್​ ಜಾರಕಿಹೊಳಿ ಕ್ಷಮೆಯಾಚಿಸಿದಿದ್ದರೆ ಅವರ ನಿವಾಸದ ಬಳಿ ಮಹಿಳಾ ಕಾರ್ಯಕರ್ತೆಯರು ಧರಣಿ ಕೂರುವುದು ನಿಶ್ಚಿತ ಎಂದು ಇದೇ ವೇಳೆಯಲ್ಲಿ ಎಚ್ಚರಿಸಲಾಗಿದೆ.

ಇದನ್ನೂ ಓದಿ: ಸಿಡಿ ವಿಚಾರ ನಾಲ್ಕು ತಿಂಗಳ ಹಿಂದೆಯೇ ಗೊತ್ತಿತ್ತು, 5 ಕೋಟಿ ರೂಪಾಯಿಗೆ ಬೇಡಿಕೆ ಇತ್ತು: ರಮೇಶ್​ ಜಾರಕಿಹೊಳಿ 

ಟ್ವೀಟ್​ ಮಾಡಿ.. ಸಿಡಿ ವಿಚಾರದಲ್ಲಿ ಮಹಾನಾಯಕಿಯನ್ನು ಎಳೆದು ತಂದ ಬಿಜೆಪಿ! ಯಾರದು? 

Published On - 3:56 pm, Tue, 16 March 21

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ