AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ಸಿಡಿಯಲ್ಲಿ ಅವಾಚ್ಯ ಶಬ್ದಗಳ ಬಳಕೆ; ಕನ್ನಡಿಗರನ್ನು ನಿಂದಿಸಿದ್ದಕ್ಕಾಗಿ ರಮೇಶ್​ ಜಾರಕಿಹೊಳಿ ವಿರುದ್ಧ ದೂರು ದಾಖಲು

ರಮೇಶ್​ ಜಾರಕಿಹೊಳಿ ಅಶ್ಲೀಲ ವಿಡಿಯೋದಲ್ಲಿ ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದರ ವಿರುದ್ಧ ಕನ್ನಡಿಗರ ರಕ್ಷಣಾ ವೇದಿಕೆಯಿಂದ ಕಬ್ಬನ್​ ಪಾರ್ಕ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಅಶ್ಲೀಲ ಸಿಡಿಯಲ್ಲಿ ಅವಾಚ್ಯ ಶಬ್ದಗಳ ಬಳಕೆ; ಕನ್ನಡಿಗರನ್ನು ನಿಂದಿಸಿದ್ದಕ್ಕಾಗಿ ರಮೇಶ್​ ಜಾರಕಿಹೊಳಿ ವಿರುದ್ಧ ದೂರು ದಾಖಲು
ರಮೇಶ್​ ಜಾರಕಿಹೊಳಿ
Skanda
|

Updated on:Mar 16, 2021 | 4:13 PM

Share

ಬೆಂಗಳೂರು: ಅಶ್ಲೀಲ ಸಿಡಿ ಪ್ರಕರಣದಲ್ಲಿ ರಮೇಶ್​ ಜಾರಕಿಹೊಳಿಗೆ ಒಂದಾದ ಮೇಲೊಂದು ಸಂಕಷ್ಟಗಳು ಎದುರಾಗುತ್ತಿವೆ. ಇತ್ತ ಸಿಡಿಯ ಬಗ್ಗೆ ಎಸ್​ಐಟಿ ತನಿಖೆ ಆರಂಭಿಸಿದ್ದು ಯುವತಿಯ ಬಗ್ಗೆ ಮಾಹಿತಿ ಕಲೆಹಾಕುತ್ತಿದೆ. ಇನ್ನೊಂದೆಡೆ, ರಮೇಶ್​ ಜಾರಕಿಹೊಳಿ ಅಶ್ಲೀಲ ವಿಡಿಯೋದಲ್ಲಿ ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದರ ವಿರುದ್ಧ ಕನ್ನಡಿಗರ ರಕ್ಷಣಾ ವೇದಿಕೆಯಿಂದ ಕಬ್ಬನ್​ ಪಾರ್ಕ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರಮೇಶ್ ಜಾರಕಿಹೊಳಿ ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ. ಕನ್ನಡಿಗರಿಗೆ ಅವಾಚ್ಯ ಪದ ಬಳಸಿ ನಿಂದಿಸಿದ್ದಾರೆ. ಕರ್ನಾಟಕದಲ್ಲಿ ಹುಟ್ಟಿ, ಕರ್ನಾಟಕದಲ್ಲಿ ಬೆಳೆದು ಅಪಮಾನ ಮಾಡುವುದು ಅವರಿಗೆ ಶೋಭೆಯಲ್ಲ ಎಂದು ಹೇಳಿರುವ ಕನ್ನಡಿಗರ ರಕ್ಷಣಾ ವೇದಿಕೆ ಸದಸ್ಯರು ಸರ್ಕಾರ ಈ ಕೂಡಲೇ ರಮೇಶ್​ ಜಾರಕಿಹೊಳಿ ಅವರನ್ನು ಶಾಸಕ ಸ್ಥಾನದಿಂದ ವಜಾ ಮಾಡಬೇಕು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ರಮೇಶ್ ಜಾರಕಿಹೊಳಿ ಕನ್ನಡಿಗರ ಬಗ್ಗೆ ಕೀಳಾಗಿ ಮಾತನಾಡಿರುವುದು ಖಂಡನೀಯ. ಅವರು ಈ ಕೂಡಲೇ ಕನ್ನಡಿಗರ ಬೇಷರತ್ ಕ್ಷಮೆ ಕೇಳಬೇಕು. ಒಂದುವೇಳೆ ರಮೇಶ್​ ಜಾರಕಿಹೊಳಿ ಕ್ಷಮೆಯಾಚಿಸಿದಿದ್ದರೆ ಅವರ ನಿವಾಸದ ಬಳಿ ಮಹಿಳಾ ಕಾರ್ಯಕರ್ತೆಯರು ಧರಣಿ ಕೂರುವುದು ನಿಶ್ಚಿತ ಎಂದು ಇದೇ ವೇಳೆಯಲ್ಲಿ ಎಚ್ಚರಿಸಲಾಗಿದೆ.

ಇದನ್ನೂ ಓದಿ: ಸಿಡಿ ವಿಚಾರ ನಾಲ್ಕು ತಿಂಗಳ ಹಿಂದೆಯೇ ಗೊತ್ತಿತ್ತು, 5 ಕೋಟಿ ರೂಪಾಯಿಗೆ ಬೇಡಿಕೆ ಇತ್ತು: ರಮೇಶ್​ ಜಾರಕಿಹೊಳಿ 

ಟ್ವೀಟ್​ ಮಾಡಿ.. ಸಿಡಿ ವಿಚಾರದಲ್ಲಿ ಮಹಾನಾಯಕಿಯನ್ನು ಎಳೆದು ತಂದ ಬಿಜೆಪಿ! ಯಾರದು? 

Published On - 3:56 pm, Tue, 16 March 21

Follow Us
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ