AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ಸಿಡಿಯಲ್ಲಿ ಅವಾಚ್ಯ ಶಬ್ದಗಳ ಬಳಕೆ; ಕನ್ನಡಿಗರನ್ನು ನಿಂದಿಸಿದ್ದಕ್ಕಾಗಿ ರಮೇಶ್​ ಜಾರಕಿಹೊಳಿ ವಿರುದ್ಧ ದೂರು ದಾಖಲು

ರಮೇಶ್​ ಜಾರಕಿಹೊಳಿ ಅಶ್ಲೀಲ ವಿಡಿಯೋದಲ್ಲಿ ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದರ ವಿರುದ್ಧ ಕನ್ನಡಿಗರ ರಕ್ಷಣಾ ವೇದಿಕೆಯಿಂದ ಕಬ್ಬನ್​ ಪಾರ್ಕ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಅಶ್ಲೀಲ ಸಿಡಿಯಲ್ಲಿ ಅವಾಚ್ಯ ಶಬ್ದಗಳ ಬಳಕೆ; ಕನ್ನಡಿಗರನ್ನು ನಿಂದಿಸಿದ್ದಕ್ಕಾಗಿ ರಮೇಶ್​ ಜಾರಕಿಹೊಳಿ ವಿರುದ್ಧ ದೂರು ದಾಖಲು
ರಮೇಶ್​ ಜಾರಕಿಹೊಳಿ
Skanda
|

Updated on:Mar 16, 2021 | 4:13 PM

Share

ಬೆಂಗಳೂರು: ಅಶ್ಲೀಲ ಸಿಡಿ ಪ್ರಕರಣದಲ್ಲಿ ರಮೇಶ್​ ಜಾರಕಿಹೊಳಿಗೆ ಒಂದಾದ ಮೇಲೊಂದು ಸಂಕಷ್ಟಗಳು ಎದುರಾಗುತ್ತಿವೆ. ಇತ್ತ ಸಿಡಿಯ ಬಗ್ಗೆ ಎಸ್​ಐಟಿ ತನಿಖೆ ಆರಂಭಿಸಿದ್ದು ಯುವತಿಯ ಬಗ್ಗೆ ಮಾಹಿತಿ ಕಲೆಹಾಕುತ್ತಿದೆ. ಇನ್ನೊಂದೆಡೆ, ರಮೇಶ್​ ಜಾರಕಿಹೊಳಿ ಅಶ್ಲೀಲ ವಿಡಿಯೋದಲ್ಲಿ ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದರ ವಿರುದ್ಧ ಕನ್ನಡಿಗರ ರಕ್ಷಣಾ ವೇದಿಕೆಯಿಂದ ಕಬ್ಬನ್​ ಪಾರ್ಕ್ ಠಾಣೆಯಲ್ಲಿ ದೂರು ದಾಖಲಾಗಿದೆ.

ರಮೇಶ್ ಜಾರಕಿಹೊಳಿ ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ. ಕನ್ನಡಿಗರಿಗೆ ಅವಾಚ್ಯ ಪದ ಬಳಸಿ ನಿಂದಿಸಿದ್ದಾರೆ. ಕರ್ನಾಟಕದಲ್ಲಿ ಹುಟ್ಟಿ, ಕರ್ನಾಟಕದಲ್ಲಿ ಬೆಳೆದು ಅಪಮಾನ ಮಾಡುವುದು ಅವರಿಗೆ ಶೋಭೆಯಲ್ಲ ಎಂದು ಹೇಳಿರುವ ಕನ್ನಡಿಗರ ರಕ್ಷಣಾ ವೇದಿಕೆ ಸದಸ್ಯರು ಸರ್ಕಾರ ಈ ಕೂಡಲೇ ರಮೇಶ್​ ಜಾರಕಿಹೊಳಿ ಅವರನ್ನು ಶಾಸಕ ಸ್ಥಾನದಿಂದ ವಜಾ ಮಾಡಬೇಕು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ರಮೇಶ್ ಜಾರಕಿಹೊಳಿ ಕನ್ನಡಿಗರ ಬಗ್ಗೆ ಕೀಳಾಗಿ ಮಾತನಾಡಿರುವುದು ಖಂಡನೀಯ. ಅವರು ಈ ಕೂಡಲೇ ಕನ್ನಡಿಗರ ಬೇಷರತ್ ಕ್ಷಮೆ ಕೇಳಬೇಕು. ಒಂದುವೇಳೆ ರಮೇಶ್​ ಜಾರಕಿಹೊಳಿ ಕ್ಷಮೆಯಾಚಿಸಿದಿದ್ದರೆ ಅವರ ನಿವಾಸದ ಬಳಿ ಮಹಿಳಾ ಕಾರ್ಯಕರ್ತೆಯರು ಧರಣಿ ಕೂರುವುದು ನಿಶ್ಚಿತ ಎಂದು ಇದೇ ವೇಳೆಯಲ್ಲಿ ಎಚ್ಚರಿಸಲಾಗಿದೆ.

ಇದನ್ನೂ ಓದಿ: ಸಿಡಿ ವಿಚಾರ ನಾಲ್ಕು ತಿಂಗಳ ಹಿಂದೆಯೇ ಗೊತ್ತಿತ್ತು, 5 ಕೋಟಿ ರೂಪಾಯಿಗೆ ಬೇಡಿಕೆ ಇತ್ತು: ರಮೇಶ್​ ಜಾರಕಿಹೊಳಿ 

ಟ್ವೀಟ್​ ಮಾಡಿ.. ಸಿಡಿ ವಿಚಾರದಲ್ಲಿ ಮಹಾನಾಯಕಿಯನ್ನು ಎಳೆದು ತಂದ ಬಿಜೆಪಿ! ಯಾರದು? 

Published On - 3:56 pm, Tue, 16 March 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್