AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸ ಕೊಡಿಸೋ ನೆಪದಲ್ಲಿ 28.70 ಲಕ್ಷ ಪೀಕಿದ.. ವಂಚಕ ಸ್ವರೂಪ್​ ಶೆಟ್ಟಿ ವಿರುದ್ಧ ಮತ್ತೊಂದು ಕೇಸ್ ದಾಖಲು

ತಾನೊಬ್ಬ ಶ್ರೀಮಂತ ಎಂದು ಪರಿಚಯಿಸಿಕೊಂಡು ದೊಡ್ಡ ಕಂಪನಿಯಲ್ಲಿ ಕೆಲಸ ಕೊಡಿಸ್ತೀನಿ ಎಂದು ನಂಬಿಸಿ ಹಣ ಪೀಕುತ್ತಿದ್ದ ವಂಚಕ ಸ್ವರೂಪ್​ ಶೆಟ್ಟಿ ವಿರುದ್ಧ ಕಾಡುಗೋಡಿ ಠಾಣೆಯಲ್ಲಿ ಮತ್ತೊಂದು ಕೇಸ್ ದಾಖಲಾಗಿದೆ.

ಕೆಲಸ ಕೊಡಿಸೋ ನೆಪದಲ್ಲಿ 28.70 ಲಕ್ಷ ಪೀಕಿದ.. ವಂಚಕ ಸ್ವರೂಪ್​ ಶೆಟ್ಟಿ ವಿರುದ್ಧ ಮತ್ತೊಂದು ಕೇಸ್ ದಾಖಲು
ವಂಚಕ ಸ್ವರೂಪ್​ ಶೆಟ್ಟಿ
ಆಯೇಷಾ ಬಾನು
|

Updated on: Jan 14, 2021 | 3:20 PM

Share

ಬೆಂಗಳೂರು: ವಂಚಕ ಸ್ವರೂಪ್​ ಶೆಟ್ಟಿ ವಿರುದ್ಧ ಕಾಡುಗೋಡಿ ಠಾಣೆಯಲ್ಲಿ ಮತ್ತೊಂದು ಕೇಸ್ ದಾಖಲಾಗಿದೆ. ತಾನೊಬ್ಬ ಶ್ರೀಮಂತ ಎಂದು ಪರಿಚಯಿಸಿಕೊಂಡು ದೊಡ್ಡ ಕಂಪನಿಯಲ್ಲಿ ಕೆಲಸ ಕೊಡಿಸ್ತೀನಿ ಎಂದು ನಂಬಿಸಿ ಹಣ ಪೀತ್ತಿದ್ದ ಸ್ವರೂಪ್ ಮೇಲೆ ಮತ್ತೊಂದು ಕೇಸ್ ದಾಖಲಾಗಿದೆ.

ವಂಚಕ ಸ್ವರೂಪ್, ಸ್ಟಾರ್ ಹೋಟೆಲ್​ನಲ್ಲಿ ಕಿರಣ್ ಎಂಬುವವರನ್ನು ಪರಿಚಯ ಮಾಡಿಕೊಂಡಿದ್ದ. ಅವರ ಬಳಿ ತಾನೊಬ್ಬ ಶ್ರೀಮಂತ.  MNC ಕಂಪನಿಯಲ್ಲಿ CEO ಅಂತ ಹೇಳಿಕೊಂಡಿದ್ದ. ಹಾಗೂ ಪ್ರತಿಷ್ಠಿತ ಖಾಸಗಿ ಕಂಪನಿಯಲ್ಲಿ ಕಿರಣ್​ ತಮ್ಮನಿಗೆ ಕೆಲಸ ಕೊಡಿಸುವುದಾಗಿ ಹೇಳಿ ಕಿರಣ್ ಬಳಿ ಹಣ ಪಡೆದು ವಂಚನೆ ಮಾಡಿದ್ದಾನೆ ಎಂಬ ಆರೋಪವಿದೆ.

ನನ್ನ ಸ್ನೇಹಿತನಿಗೆ ಕಷ್ಟವಿದೆ ಆದ್ರೆ ಅವನಿಗೆ ಸಹಾಯ ಮಾಡ್ತೀನಿ ಅಂತ ಮಾತುಕೊಟ್ಟಿದ್ದೇನೆ. ಆದರೇ ನನ್ನ ಬ್ಯಾಂಕ್ ಅಕೌಂಟ್ ಐಟಿ ರೇಡ್ ನಿಂದ ಪ್ರೀಜ್ ಆಗಿದೆ ನನ್ನ ಸ್ನೇಹಿತನ ಅಕೌಂಟ್​ಗೆ ಹಣ ಹಾಕು ಎಂದು ಹೇಳಿ ಮೊದಲ ಹಂತದಲ್ಲಿ ಸ್ವರೂಪ್, ಕಿರಣ್​ನಿಂದ 2 ಲಕ್ಷ 40 ಸಾವಿರ ಹಣ ಜಮೆ ಮಾಡಿಸಿದ್ದಾನೆ. ಬಳಿಕ ಮತ್ತೊಂದು ಬಾರಿ 2 ಲಕ್ಷದ 30 ಲಕ್ಷ ಹಾಕಿಸಿಕೊಂಡಿದ್ದ. ನಂತರ ಮತ್ತೆ 9 ಲಕ್ಷ ಕ್ಯಾಷ್ ಅನ್ನು ಕಾಡುಗೋಡಿ ಬಸ್ ನಿಲ್ದಾಣದ ಬಳಿ ಭೇಟಿ ಮಾಡಿ ಪಡೆದುಕೊಂಡಿದ್ದ. ಇದಾದ ಬಳಿಕ ತನ್ನ ತಂದೆಗೆ ಹಾರ್ಟ್ ಅಟ್ಯಾಕ್ ಆಗಿದ್ದು, ಹಣ ಬೇಕು ಅಂತ 15 ಲಕ್ಷ ಹಣ ಅಕೌಂಟ್ ಮೂಲಕ ಪಡೆದಿದ್ದ. ಹಣ ಕೊಡದಿದ್ದರೇ ನಿನ್ನ ತಮ್ಮನಿಗೆ ಕೆಲಸ ಕೊಡಿಸುವುದಿಲ್ಲ ಅಂತ ಬ್ಲಾಕ್ ಮೇಲ್ ಮಾಡಿದ್ದ. ಈ ರೀತಿ ಹಂತ-ಹಂತವಾಗಿ 28 ಲಕ್ಷದ 70 ಸಾವಿರ ಹಣ ಪಡೆದು ಮೋಸ ಮಾಡಿದ್ದಾನೆ.

ಈ ಹಿಂದೆ ಕೂಡ ಹಾವೇರಿ ಮೂಲದ ಅರ್ಷದ್ ಎಂಬ ಹುಡುಗನನ್ನು ಬಂಧನದಲ್ಲಿರಿಸಿಕೊಂಡು 48 ಲಕ್ಷ ಪಡೆದಿದ್ದ. ಅದೇ ಕೇಸ್​ನಲ್ಲಿ ಕಾಡುಗೋಡಿ ಪೊಲೀಸರಿಂದ ಅರೆಸ್ಟ್ ಆಗಿದ್ದ. ಬಳಿಕ ಬೇರೊಂದು ಪ್ರಕರಣದಲ್ಲಿ ಆರೋಪಿ ಸ್ವರೂಪ್ ನನ್ನು ಬಾಡಿ ವಾರಂಟ್ ಮೂಲಕ ವಶಕ್ಕೆ ಪಡೆದಿದ್ದರು. ಸದ್ಯ ಈಗ ಈ ವಂಚಕನ ಮೇಲೆ ಮತ್ತೊಂದು ಕೇಸ್ ದಾಖಲಾಗಿದೆ.

ಹಣ ವಂಚನೆ ಆರೋಪ: ನಿರ್ಮಾಪಕ ಕೆ. ಮಂಜು ವಿರುದ್ಧ ಎಫ್ಐಆರ್​ ದಾಖಲು

ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ