AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ: ಯುವಕನನ್ನು ರೂಮ್​ನಲ್ಲಿ ಕೂಡಿ ಹಾಕಿ ಹಲ್ಲೆ ಕೇಸ್​: ಐವರ ಬಂಧನ

ಇತ್ತೀಚೆಗೆ ದಾವಣಗೆರೆ ಜಿಲ್ಲೆಯ ಹರಿಹರದ ಬೆಂಕಿನಗರದ ಮದರಸಾ ಬಳಿ ಖಾಲಿ‌ ಕೊಠಡಿಯಲ್ಲಿ ಯುವಕ ಮೇಲೆ ಹಲ್ಲೆ ಮಾಡಲಾಗಿತ್ತು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ ಪ್ರತಿಕ್ರಿಯಿಸಿದ್ದು, ಹಲ್ಲೆಗೊಳಗಾದ ಯುವಕ ಅಲ್ಲಿದ್ದ ಕೆಲ ಮಹಿಳೆಯರ ಫೋಟೋ, ವಿಡಿಯೋ ಮಾಡಿಟ್ಟುಕೊಂಡಿದ್ದ ಎಂಬ ಆರೋಪ ಕೇಳಿಬಂದಿದೆ ಎಂದಿದ್ದಾರೆ.

ದಾವಣಗೆರೆ: ಯುವಕನನ್ನು ರೂಮ್​ನಲ್ಲಿ ಕೂಡಿ ಹಾಕಿ ಹಲ್ಲೆ ಕೇಸ್​: ಐವರ ಬಂಧನ
ದಾವಣಗೆರೆಯಲ್ಲಿ ಯುವಕನನ್ನು ರೂಮ್​ನಲ್ಲಿ ಕೂಡಿ ಹಾಕಿ ಹಲ್ಲೆ ಕೇಸ್​: ಐವರ ಬಂಧನ
ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on:Jun 13, 2024 | 9:56 PM

Share

ದಾವಣಗೆರೆ, ಜೂನ್​ 13: ಜಿಲ್ಲೆಯ ಹರಿಹರ ನಗರದ ಬೆಂಕಿನಗರದ ಮದರಸಾ ಬಳಿ ಖಾಲಿ‌ಕೊಠಡಿಯಲ್ಲಿ ಏಳು ಜನರು ಸೇರಿ ಯುವಕನ ಮೇಲೆ ಹಲ್ಲೆ ಪ್ರಕರಣಕ್ಕೆ (Assault Case) ಸಂಬಂಧಿಸಿದಂತೆ ಸದ್ಯ ಐವರನ್ನು ಪೊಲೀಸರು ಬಂಧಿಸಿದ್ದಾರೆ (arrest). ಉಳಿದವರ ಪತ್ತೆಗೆ ತಂಡ ರಚನೆ ಮಾಡಲಾಗಿದೆ. ಮಹಮ್ಮದ್ (24) ಎಂಬಾತನನ್ನು ರೂಮ್​ನಲ್ಲಿ ಕೂಡಿ ಹಾಕಿ ಹಲ್ಲೆ ಮಾಡಿದ್ದು, ನಂತರ ತಲೆ ಬೋಳಿಸಲಾಗಿತ್ತು. ಈ ಘಟನೆಯಲ್ಲಿ ಯುವಕನಿಗೆ ಹೊಡೆಯುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು. ಹರಿಹರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ಕುರಿತಾಗಿ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ ಪ್ರತಿಕ್ರಿಯಿಸಿದ್ದು, ದಾವಣಗೆರೆ ಜಿಲ್ಲೆಯ ಹರಿಹರ ನಗರದ ಬೆಂಕಿ ನಗರದ ಮದರಸಾ ಪಕ್ಕದ ಖಾಲಿ ರೂಮ್​​ನಲ್ಲಿ ಹಾಕಿ ಹಲ್ಲೆ ಮಾಡಿದ ಪ್ರಕರಣ ಇದೇ ಏಳರಂದು ಬೆಳಕಿಗೆ ಬಂದಿತ್ತು.

ಇದನ್ನೂ ಓದಿ: ಹರಿಹರದಲ್ಲಿ ನೈತಿಕ ಪೊಲೀಸ್ ಗಿರಿ: ಯುವಕನನ್ನು ರೂಮ್‌ನಲ್ಲಿ ಹಾಕಿ ಮನಸೋ ಇಚ್ಛೆ ಹಲ್ಲೆ, ವಿಡಿಯೋ ವೈರಲ್

ಹಲ್ಲೆಗೊಳಗಾದ ಯುವಕ ಅಲ್ಲಿದ್ದ ಕೆಲ ಮಹಿಳೆಯರ ಫೋಟೋ, ವಿಡಿಯೋ ಮಾಡಿಟ್ಟುಕೊಂಡಿದ್ದ ಎಂಬ ಆರೋಪ ಕೇಳಿಬಂದಿದೆ. ಸದ್ಯ ಹಲ್ಲೆಗೊಳಗಾದ ಯುವಕನ ಮೊಬೈಲ್ ವಶ ಪಡಿಸಿಕೊಳ್ಳಲಾಗಿದೆ. ಸಂತ್ರಸ್ಥ ಮಹಿಳೆಯರು ಅಧಿಕೃತ ದೂರು ಕೊಟ್ಟರೆ ಯುವಕನ ವಿರುದ್ಧ ಸಹ ಕ್ರಮ ಕೈಗೊಳ್ಳಲಾಗುವುದು. ಆದರೆ ಈ ವರೆಗೆ ಮಹಿಳೆಯರು ದೂರು ದಾಖಲಿಸಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ರಾಯಚೂರಿನ ತೋಟಗಾರಿಕೆ ಇಲಾಖೆ ಕಚೇರಿಗೆ ಲೋಕಾಯುಕ್ತ ದಾಳಿ: ಪರಿಶೀಲನೆ

ರಾಯಚೂರು: ನಗರದ ತೋಟಗಾರಿಕೆ ಇಲಾಖೆ ಕಚೇರಿಗೆ ಲೋಕಾಯುಕ್ತ ದಾಳಿ ಮಾಡಿದ್ದು, ಅಧಿಕಾರಿಗಳಿಂದ ಪರಿಶೀಲನೆ ಮಾಡಲಾಗಿದೆ. ಮುಂಗಾರು ಆರಂಭ ಹಿನ್ನೆಲೆ ಕೃಷಿ ಚಟುವಟಿಕೆಗಳು ಪ್ರಾರಂಭವಾಗಿದ್ದು, ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದ ದಾಖಲೆ, ದಾಸ್ತಾನು ಪರಿಶೀಲನೆ ಮಾಡಲಾಗಿದೆ.

ಇದನ್ನೂ ಓದಿ: ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿ ಸುತ್ತಾಟ ಆರೋಪ: ಸ್ಥಳೀಯರ ಕೈಗೆ ಸಿಕ್ಕಿಬಿದ್ದ ವಿದ್ಯಾರ್ಥಿಗಳು

ರಾಯಚೂರು ಲೋಕಾಯುಕ್ತ ಎಸ್‌ಪಿ ಶಶಿಧರ್ ಎಂ.ಎನ್ ನೇತೃತ್ವದಲ್ಲಿ ಪರಿಶೀಲನೆ ನಡೆದಿದ್ದು, 15 ಜನ ಅಧಿಕಾರಿಗಳ ತಂಡದಿಂದ ದಾಖಲೆಗಳ ತಪಾಸಣೆ ಮಾಡಲಾಗಿದೆ. ಅರ್ಹ ಫಲಾನುಭವಿಗಳಿಗೆ ಇಲಾಖೆ ಸೌಲಭ್ಯ ತಲುಪುತ್ತಿದ್ದಾವಾ, ಇಲ್ಲವಾ? ಇಲಾಖೆ ಅಧಿಕಾರಿಗಳ ಕಾರ್ಯವೈಖರಿ, ದಾಖಲೆಗಳ ನಿರ್ವಹಣೆ, ನ್ಯೂನತೆಗಳು, ಸಕಾಲದಲ್ಲಿ ಸಾರ್ವಜನಿಕರಿಗೆ ಸೇವೆ ಒದಗಿಸುತ್ತಿರುವ ಬಗ್ಗೆ ತಪಾಸಣೆ ಮಾಡಲಾಗಿದೆ. ಪರಿಶೀಲನೆ ಬಳಿಕ ರಾಜ್ಯ ಲೋಕಾಯುಕ್ತರಿಗೆ ಅಧಿಕಾರಿಗಳು ಅಂತಿಮ ವರದಿ ಸಲ್ಲಿಸಲಿದ್ದಾರೆ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:56 pm, Thu, 13 June 24

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ